Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುಸ್ತಕ ಪೂರೈಕೆ, ವಾಹನ ದುರಸ್ತಿಯಲ್ಲಿ...

ಪುಸ್ತಕ ಪೂರೈಕೆ, ವಾಹನ ದುರಸ್ತಿಯಲ್ಲಿ ಬಿಇಓ ಮಂಜುಳಾ ಅವ್ಯವಹಾರ: ಸುಂದರ್ ಮಾಸ್ತರ್ ಆರೋಪ

ವಾರ್ತಾಭಾರತಿವಾರ್ತಾಭಾರತಿ9 April 2021 8:17 PM IST
share
ಪುಸ್ತಕ ಪೂರೈಕೆ, ವಾಹನ ದುರಸ್ತಿಯಲ್ಲಿ ಬಿಇಓ ಮಂಜುಳಾ ಅವ್ಯವಹಾರ: ಸುಂದರ್ ಮಾಸ್ತರ್ ಆರೋಪ

ಉಡುಪಿ, ಎ.9: ಕರ್ತವ್ಯಲೋಪದಿಂದ ಅಮಾನತುಗೊಂಡಿರುವ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಶಾಲೆಗಳಿಗೆ ಪುಸ್ತಕ, ಸಮವಸ್ತ್ರ ಪೂರೈಕೆ ವೆಚ್ಚ, ವಾಹನ ದುರಸ್ತಿ ಹಾಗೂ ಡಿಸೇಲ್ ಹಣದಲ್ಲಿ ಅವ್ಯವಹಾರ ಎಸಗಿದ್ದಾರೆ. ದಲಿತ ವಿರೋಧಿ ಅಧಿಕಾರಿಯಾಗಿರುವ ಇವರು, ತಮ್ಮ ಕಚೇರಿಯಲ್ಲಿದ್ದ ಅಂಬೇಡ್ಕರ್ ಭಾವಚಿತ್ರವನ್ನು ತೆಗೆದು ಹಾಕಿದ್ದಾರೆ ಎಂದು ಕೊಡವೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಸುಂದರ್ ಮಾಸ್ತರ್ ಆರೋಪಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಜುಳಾ ನನ್ನ ವಿರುದ್ಧ ಪೂರ್ವಗ್ರಾಹ ಪೀಡಿತರಾಗಿ ಹೆಸರಿಲ್ಲದ ಅರ್ಜಿಯನ್ನು ಮುಂದಿಟ್ಟುಕೊಂಡು ತನಿಖೆ ನಡೆಸಿ ಸುಳ್ಳು ಆರೋಪ ಹೊರೆಸಿದ್ದರು. ದಾಖಲೆಯಲ್ಲಿ ನನ್ನನ್ನು ಮುಖ್ಯಶಿಕ್ಷಕ ಎಂಬುದಾಗಿ ನಮೂದಿಸುವ ಬದಲು ದಸಂಸ ಮುಖಂಡ ಎಂಬುದಾಗಿ ನಮೂದಿಸಿರುವುದು ಖಂಡನೀಯ. ಅವರ ವಿರುದ್ಧ ಮಾನನಷ್ಟ ಮೊಕದ್ದವೆು ಹೂಡಲು ನಿರ್ಧರಿಸಿದ್ದೇನೆ ಎಂದರು.

ಮಂಜುಳಾ ಹಾಗೂ ಇಲಾಖೆಯ ಅಧೀಕ್ಷಕಿ ಶಾರೀಕಾ, ನನ್ನ ಪಿಂಚಣಿ ಸೌಲಭ್ಯವನ್ನು ತಡೆಹಿಡಿಯುವಂತೆ ಮಾಡಿ ಕಿರುಕುಳ ನೀಡುತ್ತಿರುವುದಲ್ಲದೆ, ಪಿಂಚಣಿ ಸೌಲಭ್ಯ ಸಿಗಬೇಕಾದರೆ ನಮಗೆ 50ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ 2019ರ ಡಿ.31ರಂದು ಉಡುಪಿ ಜಿಪಂ ಸಿಇಓಗೆ ದೂರು ನೀಡಿದ್ದೇನು. ಅಲ್ಲದೆ ಇವರು ಪಂಚನಬೆಟ್ಟು ಅನುದಾನಿತ ಶಾಲೆಯನ್ನು ದುರುದ್ದೇಶದೊಂದಿಗೆ ಮುಚ್ಚಲು ಪ್ರಯತ್ನ ಮಾಡಿದ್ದರು. ಇದೀಗ ಇವರನ್ನು ಅಮಾನತುಗೊಳಿಸಿರುವುದು ನ್ಯಾಯಬದ್ಧವಾಗಿದೆ ಎಂದು ಅವರು ಹೇಳಿದರು.

ಶಾಲೆಗಳಿಗೆ ಪುಸ್ತಕ ಹಾಗೂ ಸಮವಸ್ತ್ರಗಳನ್ನು ಪೂರೈಕೆ ಮಾಡಲು ಬಂದ ಹಣವನ್ನು ತಮ್ಮ ಸ್ವಂತ ಬಳಕೆಗೆ ಉಪಯೋಗಿಸಿದ್ದಾರೆ. ಕಚೇರಿ ವಾಹನಕ್ಕೆ ಚಾಲಕ ಇಲ್ಲದಿದ್ದರೂ ಖಾಸಗಿ ವ್ಯಕ್ತಿಯ ಮೂಲಕ ವಾಹನವನ್ನು ಸುಮಾರು 5 ಸಾವಿರ ಕಿ.ಮೀ. ಓಡಿಸಿದ್ದಾರೆ. ಈ ವಾಹನದ ದುರಸ್ತಿಗೆ ಇಲಾಖೆ ಅನುಮತಿ ಪಡೆಯದೆ 96,000ರೂ. ಹಾಗೂ ಡೀಸೆಲ್‌ಗೆ 67,000ರೂ. ಖರ್ಚು ಮಾಡುವ ಮೂಲಕ ಇವರು ಭ್ರಷ್ಟಾಚಾರ ಎಸಗಿದ್ದಾರೆ. ಶಿವಮೊಗ್ಗ ಮೂಲದ ಇವರಿಗೆ ಶಿವಮೊಗ್ಗದ ಸಚಿವರೊಬ್ಬರ ಬೆಂಬಲ ಇದೆ ಎಂದು ಅವರು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X