Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಉಚಿತ ಕನ್ನಡ ಲೈಬ್ರರಿಗೆ...

ಮೈಸೂರು: ಉಚಿತ ಕನ್ನಡ ಲೈಬ್ರರಿಗೆ ದುಷ್ಕರ್ಮಿಗಳಿಂದ ಬೆಂಕಿ; 11 ಸಾವಿರ ಕನ್ನಡ ಗ್ರಂಥಗಳು ಭಸ್ಮ

ವಾರ್ತಾಭಾರತಿವಾರ್ತಾಭಾರತಿ9 April 2021 10:37 PM IST
share
ಮೈಸೂರು: ಉಚಿತ ಕನ್ನಡ ಲೈಬ್ರರಿಗೆ ದುಷ್ಕರ್ಮಿಗಳಿಂದ ಬೆಂಕಿ; 11 ಸಾವಿರ ಕನ್ನಡ ಗ್ರಂಥಗಳು ಭಸ್ಮ

ಮೈಸೂರು,ಎ.9: ಕನ್ನಡದ ಮೇಲೆ ಅಭಿಮಾನ ಹೊಂದಿ ಸುಮಾರು 11 ಸಾವಿರ ಕನ್ನಡದ ಗ್ರಂಥಗಳನ್ನು ಸಂಗ್ರಹಿಸಿ ಉಚಿತ ಲೈಬ್ರರಿ ನಡೆಸುತ್ತಿದ್ದ ಸೈಯದ್ ಎಂಬುವವರ ಶೆಡ್‍ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಅಂಗಡಿ ಸಮೇತ ಒಳಗಿದ್ದ ಪುಸ್ತಕಗಳೆಲ್ಲಾ ಸುಟ್ಟು ಕರಕಲಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ರಾಜೀವ್ ನಗರ ಎರಡನೇ ಹಂತದಲ್ಲಿರುವ ಆಟದ ಮೈದಾನದದ ಪಕ್ಕದ ಸರ್ಕಾರಿ ಜಾಗದಲ್ಲಿ ಸಣ್ಣದೊಂದು ಶೆಡ್ ನಿರ್ಮಿಸಿ ಇಲ್ಲಿನ ಸ್ಥಳೀಯ ನಿವಾಸಿ ಸೈಯದ್ ಎಂಬುವವರು ಕಳೆದ ಹತ್ತು ವರ್ಷಗಳಿಂದ ಕನ್ನಡ ಪುಸ್ತಕಗಳನ್ನೊಳಗೊಂಡ ಲೈಬ್ರರಿಯನ್ನು ನಡೆಸುತ್ತಿದ್ದರು. ಅವರಿವರ ಸಹಾಯದಿಂದ ಸುಮಾರು 11 ಸಾವಿರ ಗ್ರಂಥಗಳನ್ನು ಸಂಪಾದಿಸಿ ಸಾರ್ವಜನಿಕರಿಗೆ ಉಚಿತವಾಗಿ ಓದಲು ವ್ಯವಸ್ಥೆ ಮಾಡಿದ್ದರು.

ಗುರುವಾರ ತಡರಾತ್ರಿ ಈ ಉಚಿತ ಲೈಬ್ರರಿಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದರ ಪರಿಣಾಮ ಇಲ್ಲಿನ ಪುಸ್ತಕಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರಾದರೂ ಎಲ್ಲಾ ಪುಸ್ತಕಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಈ ಸಂಬಂಧ ಉದಯಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

'ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ನನ್ನ ಉಸಿರಿರುವವರೆಗೂ ನಾನು ಕನ್ನಡಕ್ಕಾಗಿ ಪ್ರಾಣವನ್ನೇ ಕೊಡುತ್ತೇನೆ. ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾನು ಕನ್ನಡ ಪುಸ್ತಕಗಳನ್ನು ಸಂಗ್ರಹಿಸಿ ಉಚಿತವಾಗಿ ಸಾರ್ವಜನಿಕರು ಓದಲು ಅವಕಾಶ ಕಲ್ಪಿಸಿದ್ದೆ. ನನ್ನ ಕನ್ನಡ ಅಭಿಮಾನ ಕಂಡ ಕನ್ನಡ ವಿರೋಧಿಗಳು ಈ ಹಿಂದೆ ಮೂರು ಬಾರಿ ನನ್ನ ಅಂಗಡಿ ಮೇಲೆ ದಾಳಿ ನಡೆಸಿದ್ದರು. ಆದರೆ ಇಂದು ನನ್ನ ಜೀವವಾಗಿದ್ದ ಲೈಬ್ರರಿಗೆ ಬೆಂಕಿ ಹಚ್ಚಿದ್ದಾರೆ' ಎಂದು ಲೈಬ್ರರಿ ಮಾಲಕ ಸೈಯದ್ ಪತ್ರಿಕೆಯೊಂದಿಗೆ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X