Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.11 ರಂದು ನೇರಳಕಟ್ಟೆಯಲ್ಲಿ ಕಬಡ್ಡಿ...

ಎ.11 ರಂದು ನೇರಳಕಟ್ಟೆಯಲ್ಲಿ ಕಬಡ್ಡಿ ಪಂದ್ಯಾಟ ಹಾಗೂ ಸನ್ಮಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ9 April 2021 11:51 PM IST
share

ಬಂಟ್ವಾಳ: ನೇರಳಕಟ್ಟೆ ಫ್ರೆಂಡ್ಸ್ ಕ್ಲಬ್ ನೇರಳಕಟ್ಟೆ ಇದರ ಆಶ್ರಯದಲ್ಲಿ ದ.ಕ. ಜಿಲ್ಲೆ ಮತ್ತು ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಎಸೋಸಿಯೇಶನ್ ಸಹಕಾರದೊಂದಿಗೆ ಜಿಲ್ಲಾ ಮಟ್ಟದ ಗ್ರಾಮ ಸೀಮಿತ ತಂಡಗಳ ಕಬಡ್ಡಿ ಪಂದ್ಯಾಟ, ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮ ಎ.11 ರಂದು ರವಿವಾರ ಅಪರಾಹ್ನ 2 ಗಂಟೆಯಿಂದ ನೇರಳಕಟ್ಟೆ ಡಿ.ಕೆ. ಸ್ವಾಮಿ ಶ್ರದ್ದಾ ಕೇಂದ್ರದ ಆವರಣದಲ್ಲಿ ನಡೆಯಲಿದೆ. 

ಶ್ರೀ ಡಿ.ಕೆ. ಸ್ವಾಮೀಜಿ ಪಂದ್ಯಾಟ ಉದ್ಘಾಟಿಸಲಿದ್ದು, ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಎಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್ ಅಧ್ಯಕ್ಷತೆ ವಹಿಸುವರು. ಸನ್ಮಾನ ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಸಚಿವ ಬಿ ರಮಾನಾಥ ರೈ ವಹಿಸಲಿದ್ದು, ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಸಾಧಕರನ್ನು ಸನ್ಮಾನಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಬಂದರು ಹಾಗೂ ಮೀನುಗಾರಿಕಾ ಸಚಿವ ಎಸ್. ಅಂಗಾರ, ಶಾಸಕರಾದ ಯು ಟಿ ಖಾದರ್, ಸಂಜೀವ ಮಠಂದೂರು, ಪುತ್ತೂರು ಮಹಿಳಾ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ್, ಪುತ್ತೂರು ಅಬಕಾರಿ ಉಪನಿರೀಕ್ಷಕರಾದ ಶ್ರೀಮತಿ ಸುಜಾತ, ಬಂಟ್ವಾಳ ಉಪತಹಶೀಲ್ದಾರ್ ರಾಜೇಶ್ ನಾೈಕ್, ಮೆಸ್ಕಾಂ ಮಾಣಿ ಶಾಖಾ ಜೆ ಇ ದಿನೇಶ್ ಕೆ., ಮಂಗಳೂರು ವಿವಿ ಮಾಜಿ ಕಬಡ್ಡಿ ತಂಡದ ನಾಯಕ ಮುಹಮ್ಮದ್ ಯೂಸುಫ್ ಗೋಳ್ತಮಜಲು, ಚಲನಚಿತ್ರ ನಟ ಚೇತನ್ ರೈ ಮಾಣಿ, ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ದಾಸ್ ಕೊಟ್ಟಾರಿ ಭಾಗವಹಿಸುವರು.  

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ನೇರಳಕಟ್ಟೆ ಸಿ.ಎ. ಬ್ಯಾಂಕ್ ನಿರ್ದೇಶಕ ನಿರಂಜನ ರೈ ಕುರ್ಲೆತ್ತಿಮಾರು ವಹಿಸಲಿದ್ದು, ಉದ್ಯಮಿಗಳಾದ ರಾಜಶೇಖರ್ ಬೆಂಗಳೂರು, ಹುಸೈನ್ ಪುತ್ತೂರು ಹಾಗೂ ರಾಜೀವ್ ಭಗವಂತಕೋಡಿ ವಿಜೇತರಿಗೆ ಬಹುಮಾನ ವಿತರಿಸುವರು. 

ಇದೇ ವೇಳೆ ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಪೊಲೀಸ್ ಅಧಿಕಾರಿ ಟಿ ಡಿ ನಾಗರಾಜ್, ಹಾಸನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ಡಾ ಅಬ್ದುಲ್ ಬಶೀರ್ ವಿ.ಕೆ., ಶ್ರೀ ಡಿ.ಕೆ. ಸ್ವಾಮಿ ನೇರಳಕಟ್ಟೆ, ಮುಖ್ಯಮಂತ್ರಿ ರೈತ ರತ್ನ ಪ್ರಶಸ್ತಿ ಪುರಸ್ಕøತ ನಾಗರಾಜ್ ಶೆಟ್ಟಿ ಮಾಣಿ, ರಾಷ್ಟ್ರೀಯ ಕಬಡ್ಡಿ ಆಟಗಾರ ಉದಯಕುಮಾರ್ ಚೌಟ ಮಾಣಿ, ವಿಟ್ಲ ಪೊಲೀಸ್ ಠಾಣಾ ಎಸ್ಸೈ ವಿನೋದ್ ರೆಡ್ಡಿ ಅವರನ್ನು ಸನ್ಮಾನಿಸಲಾಗುವುದು. 

ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಪೂಜಾರಿ, ಉಪಾಧ್ಯಕ್ಷೆ ಶಕೀಲಾ ಕೆ. ಪೂಜಾರಿ, ಸದಸ್ಯರುಗಳಾದ ಕೆ. ಶ್ರೀಧರ ರೈ ಕುರ್ಲೆತ್ತಿಮಾರು, ಲತೀಫ್ ನೇರಳಕಟ್ಟೆ, ಅಶೋಕ್ ರೈ ಎಲ್ಕಾಜೆ, ಧನುಂಜಯ ಮೀನಾವು, ಸಮಿತಾ ಡಿ.ಪೂಜಾರಿ, ಪ್ರೇಮಾ, ಜಯಂತಿ ಹರೀಶ್ ಪೂಜಾರಿ, ಶಾಲಿನಿ ಹರೀಶ್, ಲಕ್ಷ್ಮೀ ಕೂಸಪ್ಪ, ಮಾಣಿ ಗ್ರಾ ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಅನಂತಾಡಿ ಗ್ರಾ ಪಂ ಅಧ್ಯಕ್ಷ ಗಣೇಶ್ ಪೂಜಾರಿ, ಇಡ್ಕಿದು ಗ್ರಾ ಪಂ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕೆದಿಲ ಗ್ರಾ ಪಂ ಉಪಾಧ್ಯಕ್ಷ ಉಮೇಶ್ ಮುರುವ, ಪೆರಾಜೆ ಗ್ರಾ ಪಂ ಉಪಾಧ್ಯಕ್ಷ ಎಸ್ ಉಮ್ಮರ್ ಬುಡೋಳಿ ಅವರುಗಳನ್ನು ಅಭಿನಂದಿಸಲಾಗುವುದು ಎಂದು ನೇರಳಕಟ್ಟೆ ಫ್ರೆಂಡ್ಸ್ ಕ್ಲಬ್ ಕಾರ್ಯದರ್ಶಿ ಚಂದ್ರಶೇಖರ ಪೆರಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X