Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವೇಗದ ಯುರೇನಿಯಮ್ ಸಂವರ್ಧನೆಗಾಗಿ ಸುಧಾರಿತ...

ವೇಗದ ಯುರೇನಿಯಮ್ ಸಂವರ್ಧನೆಗಾಗಿ ಸುಧಾರಿತ ಸೆಂಟ್ರಿಫ್ಯೂಜ್‌ಗಳ ಬಳಕೆ ಆರಂಭ

ಇರಾನ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ10 April 2021 9:56 PM IST
share
ವೇಗದ ಯುರೇನಿಯಮ್ ಸಂವರ್ಧನೆಗಾಗಿ ಸುಧಾರಿತ ಸೆಂಟ್ರಿಫ್ಯೂಜ್‌ಗಳ ಬಳಕೆ ಆರಂಭ

 ಟೆಹರಾನ್ (ಇರಾನ್), ಎ. 10: ಯುರೇನಿಯಮನ್ನು ಕ್ಷಿಪ್ರವಾಗಿ ಸಂವರ್ಧಿಸುವ ಸುಧಾರಿತ ಸೆಂಟ್ರಿಫ್ಯೂಜ್‌ಗಳ ಬಳಕೆಯನ್ನು ತಾನು ಆರಂಭಿಸಿರುವುದಾಗಿ ಇರಾನ್ ಶನಿವಾರ ಘೋಷಿಸಿದೆ. ಇದರೊಂದಿಗೆ ಅದು 2015ರ ಪರಮಾಣು ಒಪ್ಪಂದದಡಿ ತಾನು ನಿಭಾಯಿಸಬೇಕಾಗಿದ್ದ ಇನ್ನೊಂದು ಬದ್ಧತೆಯನ್ನು ಉಲ್ಲಂಘಿಸಿದಂತಾಗಿದೆ.

ಇರಾನ್ ಅಧ್ಯಕ್ಷ ಹಸನ್ ರೂಹಾನಿ, ನತಾಂಝ್ ಯುರೇನಿಯಮ್ ಸಂವರ್ಧನೆ ಸ್ಥಾವರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ 164 ಐಆರ್-6 ಸೆಂಟ್ರಿಫ್ಯೂಜ್ ಕ್ಯಾಸ್ಕೇಡ್‌ಗಳು ಮತ್ತು 30 ಐಆರ್-5 ಸೆಂಟ್ರಿಫ್ಯೂಜ್ ಕ್ಯಾಸ್ಕೇಡ್‌ಗಳ ಬಳಕೆಗೆ ಅಧಿಕೃತ ಚಾಲನೆ ನೀಡಿದರು ಎಂದು ಸರಕಾರಿ ಟೆಲಿವಿಶನ್ ವರದಿ ಮಾಡಿದೆ.

ಆದರೆ, ಕ್ಯಾಸ್ಕೇಡ್‌ಗಳ ಚಿತ್ರಗಳನ್ನು ಟೆಲಿವಿಶನ್ ಪ್ರಸಾರ ಮಾಡಿಲ್ಲ. ಆದರೆ, ರೂಹಾನಿಯಿಂದ ಆದೇಶ ಪಡೆದ ಬಳಿಕ ತಾವು ಹೆಕ್ಸಾಫ್ಲೋರೈಡ್ ಅನಿಲವನ್ನು ಕ್ಯಾಸ್ಕೇಡ್‌ಗಳಿಗೆ ಸಂಪರ್ಕಿಸಿರುವುದಾಗಿ ಸ್ಥಾವರಲ್ಲಿ ಇಂಜಿನಿಯರ್‌ಗಳು ಹೇಳುವ ದೃಶ್ಯವೊಂದನ್ನು ಅದು ಪ್ರಸಾರ ಮಾಡಲಿದೆ.

ಅಮೆರಿಕದ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿರುವ ಆರ್ಥಿಕ ದಿಗ್ಬಂಧನಗಳನ್ನು ತೆರವುಗೊಳಿಸುವುದು ಮತ್ತು ಪರಮಾಣು ಒಪ್ಪಂದದ ಅಂಶಗಳಿಗೆ ಇರಾನ್ ಬದ್ಧವಾಗಿರುವಂತೆ ಮಾಡುವುದು ಮುಂತಾದ ವಿಷಯಗಳ ಬಗ್ಗೆ ಇರಾನ್ ಸೇರಿದಂತೆ ಒಪ್ಪಂದಕ್ಕೆ ಸಹಿ ಹಾಕಿರುವ ಏಳು ದೇಶಗಳ ನಡುವೆ ವಿಯೆನ್ನಾದಲ್ಲಿ ಮಾತುಕತೆಗಳು ನಡೆಯುತ್ತಿರುವ ಹಂತದಲ್ಲೇ ಇರಾನ್ ಈ ಕ್ರಮಕ್ಕೆ ಮುಂದಾಗಿರುವುದು ಗಮನಾರ್ಹವಾಗಿದೆ.

ಪರಮಾಣು ಒಪ್ಪಂದಕ್ಕೆ ಇರಾನ್, ಅಮೆರಿಕ, ರಶ್ಯ, ಚೀನಾ, ಬ್ರಿಟನ್, ಫ್ರಾನ್ಸ್, ಜರ್ಮನಿ ದೇಶಗಳು 2015ರಲ್ಲಿ ಸಹಿ ಹಾಕಿವೆ.

 ಐಆರ್-5 ಮತ್ತು ಐಆರ್-6 ಸೆಂಟ್ರಿಫ್ಯೂಜ್‌ಗಳ ಮೂಲಕ ಯುರೇನಿಯಮನ್ನು ಇರಾನ್‌ನ ಮೊದಲ ತಲೆಮಾರಿನ ಸೆಂಟ್ರಿಫ್ಯೂಜ್‌ಗಳಿಗಿಂತ ವೇಗವಾಗಿ ಸಂವರ್ಧನೆಗೊಳಿಸಬಹುದಾಗಿದೆ. ಆದರೆ, 2015ರ ಪರಮಾಣು ಒಪ್ಪಂದವು ಇರಾನ್ ಮೊದಲ ತಲೆಮಾರಿನ ಸೆಂಟ್ರಿಫ್ಯೂಜ್‌ಗಳನ್ನು ಮಾತ್ರ ಬಳಸಬೇಕು ಎಂದು ಹೇಳುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X