Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್19 ಔಷಧಿಯ ಅಭಾವವುಂಟಾಗದಂತೆ...

ಕೋವಿಡ್19 ಔಷಧಿಯ ಅಭಾವವುಂಟಾಗದಂತೆ ರಾಜ್ಯ,ಕೇಂದ್ರಾಡಳಿತಗಳಿಗೆ ಮೋದಿ ಸರಕಾರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 April 2021 11:56 PM IST
share
ಕೋವಿಡ್19 ಔಷಧಿಯ ಅಭಾವವುಂಟಾಗದಂತೆ ರಾಜ್ಯ,ಕೇಂದ್ರಾಡಳಿತಗಳಿಗೆ ಮೋದಿ ಸರಕಾರ ಸೂಚನೆ

 ಹೊಸದಿಲ್ಲಿ, ಎ. 10: ದೇಶಾದ್ಯಂತ ಕೋವಿಡ್-19ನ ಎರಡನೇ ಅಲೆ ತಾಂಡವವಾಡುತ್ತಿರುವ ನಡುವೆ, ಕೊರೋನ ಸೋಂಕಿನ ಚಿಕಿತ್ಸೆಗಾಗಿ ರೆಮ್ ಡೆಸಿವಿರ್ ಔಷಧಿಯ ಲಭ್ಯತೆಯನ್ನು ಖಾತರಿಪಡಿಸುವಂತೆ ಹಾಗೂ ಅದರ ಅಕ್ರಮ ದಾಸ್ತಾನು ಮತ್ತು ಕಾಳಸಂತೆ ಮಾರಾಟವನ್ನು ತಡೆಗಟ್ಟಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ನರೇಂದ್ರ ಮೋದಿ ಸರಕಾರವು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

 ರೆಮ್ ಡೆಸಿವಿರ್, ಕೋವಿಡ್-19 ರೋಗಿಳ ಚಿಕಿತ್ಸೆಗೆ ಅತ್ಯಂತ ಬೇಡಿಕೆಯಿರುವ ಔಷಧಿಯಾಗಿದೆ.

 ಭಾರತೀಯ ಔಷಧಿ ಮಹಾ ನಿಯಂತ್ರಕ (ಡಿಸಿಜಿಐ)ರಾದ ವಿ.ಜಿ.ಸೋಮಾನಿ ಎಪ್ರಿಲ್ 7ರಂದು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತಗಳಿಗೆ ಪತ್ರ ಬರೆದು ರೆಮ್ ಡೆಸಿವಿರ್ ಔಷಧಿಯ ಕೊರತೆ ಹಾಗೂ ಅದರ ಮಾರಾಟದಲ್ಲಿ ಅವ್ಯವಹಾರಗಳು ನಡೆಯದಂತೆ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

 ಮಧ್ಯಪ್ರದೇಶ, ಗುಜರಾತ್ ಹಾಗೂ ಮಹಾರಾಷ್ಟ್ರಗಳಲ್ಲಿ ರೆಮ್ ಡೆಸಿವಿರ್ ಔಷಧಿಯ ಅಭಾವ ತಲೆದೋರಿರುವುದರಿಂದ ಅದರ, ಕಾಳಸಂತೆ ಮಾರಾಟ ಹಾಗೂ ಅಕ್ರಮ ದಾಸ್ತಾನು ವ್ಯಾಪಕವಾಗಿ ನಡೆಯುವ ಸಾಧ್ಯತೆಯಿದೆಯೆಂಬ ವರದಿಗಳ ಹಿನ್ನೆಲೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ.

ಮಧ್ಯಪ್ರದೇಶ (ಭೋಪಾಲ್, ಇಂದೋರ್, ಗ್ವಾಲಿಯರ್), ಗುಜರಾತ್ (ಅಹ್ಮದಾಬಾದ್, ಸೂರತ್,ರಾಜಕೋಟ್) ಹಾಗೂ ಮಹಾರಾಷ್ಟ್ರ (ಮುಂಬೈ, ಥಾಣೆ, ಅಮರಾವತಿ)ಗಳಲ್ಲಿ ರೆಮ್ ಡೆಸಿವಿರ್ ಚುಚ್ಚು ಮದ್ದಿನ ಕೊರತೆಯುಂಟಾಗಿರುವುದು ವರದಿಯಾಗಿದೆ. ಇದು ಮುಂದಿನ ದಿನಗಳಲ್ಲಿ ಔಷಧಿಯ ಅಕ್ರಮ ದಾಸ್ತಾನು ಹಾಗೂ ಕಾಳಸಂತೆ ಮಾರಾಟ ನಡೆಯುವುದಕ್ಕೆ ಕಾರಣವಾಗಬಹುದಾಗಿದೆ ಎಂದವರು ಹೇಳಿದರು.

  ಸಾರ್ವಜನಿಕರು ಹಾಗೂ ಖಾಸಗಿ ಆಸ್ಪತ್ರೆಗಳಿಗೆ ರೆಮಿಡಿಸೆವಿರ್ ಇಂಜೆಕ್ಷನ್‌ನ ಪೂರೈಕೆಗೆ ತಕ್ಷಣವೇ ಸೂಕ್ತ ಕ್ರಮವನ್ನು ಕೈಗೊಳ್ಳಬೇಕೆಂದು ಕೋರುವುದಾಗಿ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ರೆಮ್ ಡೆಸಿವಿರ್ ಔಷಧಿಯ ಅಕ್ರಮ ದಾಸ್ತಾನು ಹಾಗೂ ದುಬಾರಿ ದರದಲ್ಲಿ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ನಿಗಾವಹಿಸುವಂತೆಯೂ ಸೋಮಾನಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತಗಳಿಗೆ ಸೂಚಿಸಿದ್ದಾರೆ.

 ಡಿಜಿಸಿಐ ಅವರ ಪತ್ರದ ಬೆನ್ನಲ್ಲೇ ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘಟನೆ (ಎಐಓಸಿಡಿ)ಯು ರೆಮ್ ಡೆಸಿವಿರ್ ಔಷಧಿಯ ಕಾಳದಾಸ್ತಾನು ಮಾಡದಂತೆ ತನ್ನ 9.40 ಸದಸ್ಯರಿಗೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X