Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡಿನಲ್ಲಿ ಮೊಟ್ಟಮೊದಲ ಸಂಕೀರ್ಣ...

ಕಾಸರಗೋಡಿನಲ್ಲಿ ಮೊಟ್ಟಮೊದಲ ಸಂಕೀರ್ಣ ತೆರೆದ ಹೃದಯ ಶಸ್ತ್ರಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ11 April 2021 7:18 PM IST
share
ಕಾಸರಗೋಡಿನಲ್ಲಿ ಮೊಟ್ಟಮೊದಲ ಸಂಕೀರ್ಣ ತೆರೆದ ಹೃದಯ ಶಸ್ತ್ರಚಿಕಿತ್ಸೆ

ಮಂಗಳೂರು : ಕಾಸರಗೋಡಿನ ಮೈತ್ರಾ ಯುನೈಟೆಡ್ ಹಾರ್ಟ್ ಸೆಂಟರ್ (ಎಂಯುಎಚ್‍ಸಿ), ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಎರಡು ಸಂಕೀರ್ಣ ತೆರೆದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ 50 ವರ್ಷ ಮೇಲ್ಪಟ್ಟ ಇಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು.

ಡಾ.ಮುರಳಿ ವೆಟ್ಟಥ್ ಮತ್ತು ಡಾ.ಬಾಬುರಾಜನ್ ಎ.ಕೆ.ನೇತೃತ್ವದ ತಜ್ಞ ವೈದ್ಯರ ತಂಡ ಈ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿದೆ.
ಮೈತ್ರಾ ಯುನೈಟೆಡ್ ಹಾರ್ಟ್ ಸೆಂಟರ್, ಸಮಗ್ರ ಹೃದ್ರೋಗ ಸೇವೆ ಮತ್ತು ಹೃದಯ ಶಸ್ತ್ರಚಿಕಿತ್ಸಾ ಸೌಲಭ್ಯ ನೀಡುವ ಕಾಸರಗೋಡು ಜಿಲ್ಲೆಯ ಮೊಟ್ಟಮೊದಲ ಆಸ್ಪತ್ರೆ ಎನಿಸಿದೆ. ಅತ್ಯಾಧುನಿಕ ಕ್ಯಾಥ್‍ಲ್ಯಾಬ್, ಸುಸಜ್ಜಿತ ಹೃದಯ ಶಸ್ತ್ರಚಿಕಿತ್ಸಾ ಕೊಠಡಿ ಸೇರಿದಂತೆ ಸಮಗ್ರ ಹೃದಯ ಆರೋಗ್ಯ ಸೇವೆಗಳನ್ನು ಕೈಗೆಟುಕುವ ದರದಲ್ಲಿ ಒದಗಿಸಲು ಸಂಸ್ಥೆ ಬದ್ಧವಾಗಿದೆ ಎಂದು ಮೈತ್ರಾ ಆಸ್ಪತ್ರೆಯ ಅಧ್ಯಕ್ಷ ಫೈಝಲ್ ಇ.ಕೊತ್ತಿಕೊಲ್ಲೋನ್ ಹೇಳಿದ್ದಾರೆ.

ಹೃದಯ ಬಡಿತದಲ್ಲಿ ಸಂಕೀರ್ಣ ಸಮಸ್ಯೆಗಳಿದ್ದ 57 ಹಾಗೂ 53 ವರ್ಷದ ಇಬ್ಬರು ರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಅಲ್ಪಾವಧಿಯಲ್ಲೇ ಈ ಸವಾಲುದಾಯಕ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿರುವುದು ತೃಪ್ತಿ ತಂದಿದೆ. ಇದರಿಂದ ಜನತೆಗೆ ತಮ್ಮ ಮನೆಬಾಗಿಲಲ್ಲೇ ವಿಶ್ವದರ್ಜೆಯ ಸೌಲಭ್ಯ ದೊರಕಿದಂತಾಗಿದೆ ಎಂದು ಹೃದ್ರೋಗ ಶಸ್ತ್ರಚಿಕಿತ್ಸೆ ವಿಭಾಗದ ಅಧ್ಯಕ್ಷ ಡಾ.ಮುರಳಿ ವೆಟ್ಟಥ್ ಹೇಳಿದ್ದಾರೆ.

ತಜ್ಞ ವೈದ್ಯರಾದ ಡಾ.ವಿವೇಕ್ ಪಿಳ್ಳೈ ನೇತೃತ್ವದ ತಂಡ ಆ್ಯಂಜಿಯೋಗ್ರಾಮ್, ಆ್ಯಂಜಿಯೋಪ್ಲಾಸ್ಟಿ ಸೇರಿದಂತೆ ಸಮಗ್ರ ಹೃದಯ ಆರೋಗ್ಯ ಸೇವೆಗಳನ್ನು ದಿನದ 24 ಗಂಟೆಯೂ ಒದಗಿಸಲು ಸಜ್ಜಾಗಿದೆ. ಇದರಿಂದ ಕಾಸರಗೋಡು ಹಾಗೂ ಸುತ್ತಮುತ್ತಲ ಜಿಲ್ಲೆಗಳ ಜನತೆ ಉತ್ತಮ ಹೃದ್ರೋಗ ಸೇವೆಗಳಿಗಾಗಿ ಇತರ ಜಿಲ್ಲೆಗಳಿಗೆ ಹೋಗಬೇಕಾದ ಅನಿವಾರ್ಯತೆ ತಪ್ಪಲಿದೆ ಎಂದು ವಿವರಿಸಿದ್ದಾರೆ.

"ವಿಶ್ವದರ್ಜೆಯ ಆರೋಗ್ಯಸೇವೆ ಎಲ್ಲರಿಗೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಮೈತ್ರಾ ಆಸ್ಪತ್ರೆ ಆರಂಭಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ತುರ್ತು ಸಂದರ್ಭದಲ್ಲಿ ಕಾಸರಗೋಡಿನಂಥ ಪ್ರದೇಶಗಳಿಂದ ದೂರದ ಊರುಗಳಿಗೆ ರೋಗಿಗಳನ್ನು ಕರೆದೊಯ್ಯು ವಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಯನ್ನು ಕಂಡು ಮೊಟ್ಟಮೊದಲು ಮೈತ್ರಾ ಕೇರ್ ನೆಟ್‍ವರ್ಕ್ ಆಸ್ಪತ್ರೆಯನ್ನು ಕಾಸರಗೋಡಿನಲ್ಲಿ ಆರಂಭಿ ಸಲು ನಿರ್ಧರಿಸಲಾಯಿತು. ಇದು ಜಿಲ್ಲೆಯ ಮೊಟ್ಟಮೊದಲ ಸಮಗ್ರ ಹೃದ್ರೋಗ ಕೇಂದ್ರವಾಗಿದೆ ಎಂದು ಅವರು ಹೇಳಿದ್ದಾರೆ.

ಅಲ್ಪಾವಧಿಯಲ್ಲೇ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯವನ್ನು ಇಲ್ಲಿನ ಜನತೆಗೆ ಕಲ್ಪಿಸಿಕೊಡುವ ಮೂಲಕ ಈ ಭಾಗದ ಜನತೆಯ ಬಹುಕಾಲದ ಕನಸು ನನಸಾಗಿದೆ. ಉತ್ತಮ ಪ್ರಾಥಮಿಕ, ಎರಡನೇ ಹಾಗೂ ಮೂರನೇ ಹಂತದ ಸಮಗ್ರ ಸೇವೆಯ ಕನಸು ನನಸಾಗುವಲ್ಲಿ ಇದು ಮೊದಲ ಹಂತವಾಗಿದೆ. ಭವಿಷ್ಯದಲ್ಲಿ ಇನ್ನಷ್ಟು ವಿಸ್ತøತ ಹಾಗೂ ಸಮಗ್ರ ಸೇವೆಗಳನ್ನು ಆಸ್ಪತ್ರೆ ಒದಗಿಸಲಿದೆ ಎಂದು ಹೃದ್ರೋಗ ವಿಭಾಗದ ನಿರ್ದೇಶಕ ಡಾ.ಅಲಿ ಫೈಝಲ್ ಹೇಳಿದ್ದಾರೆ.

ಎರಡು ತೆರೆದ ಹೃದಯ ಶಸ್ತ್ರಚಿಕಿತ್ಸೆಗಳ ಜತೆ, ಆರು ಪ್ರಾಥಮಿಕ ಆ್ಯಂಜಿಯೋಪ್ಲಾಸ್ಟಿ ಹಾಗೂ ಅಷ್ಟೇ ಸಂಖ್ಯೆಯ ಎಲೆವೇಟಿವ್ ಆಂಜಿಯೋಪ್ಲಾಸ್ಟಿಗಳನ್ನು ಒಂದು ತಿಂಗಳ ಅವಧಿಯಲ್ಲಿ ಯಶಸ್ವಿಯಾಗಿ ಪೂರೈಸಲಾಗಿದೆ. ಇದು ಕಾಸರಗೋಡು ಜಿಲ್ಲೆಯ ಆರೋಗ್ಯ ಸೇವಾ ಇತಿಹಾಸದಲ್ಲಿ ಮೈಲುಗಲ್ಲು ಎಂದು ಹೃದ್ರೋಗ ವಿಭಾಗದ ಅಧ್ಯಕ್ಷ ಡಾ.ಆಶೀಶ್ ಕುಮಾರ್ ಬಣ್ಣಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X