Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇ ತಿಂಗಳ ಆರಂಭದಲ್ಲಿ ಕೋವಿಡ್ ಹೆಚ್ಚಳ...

ಮೇ ತಿಂಗಳ ಆರಂಭದಲ್ಲಿ ಕೋವಿಡ್ ಹೆಚ್ಚಳ ಸಾಧ್ಯತೆ, ಅಂತ್ಯದಲ್ಲಿ ಇಳಿಕೆ: ಸಚಿವ ಡಾ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ11 April 2021 8:06 PM IST
share
ಮೇ ತಿಂಗಳ ಆರಂಭದಲ್ಲಿ ಕೋವಿಡ್ ಹೆಚ್ಚಳ ಸಾಧ್ಯತೆ, ಅಂತ್ಯದಲ್ಲಿ ಇಳಿಕೆ: ಸಚಿವ ಡಾ.ಸುಧಾಕರ್

ಬೆಂಗಳೂರು, ಎ. 11: ಮೇ ತಿಂಗಳ ಮೊದಲ ವಾರದಲ್ಲಿ ಕೊರೋನ ಪ್ರಕರಣ ಸಂಖ್ಯೆ ಹೆಚ್ಚಲಿದೆ. ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ತಿಳಿಸಿದ್ದಾರೆ.

ರವಿವಾರ ಕೋವಿಡ್ ನಿಯಂತ್ರಣ ಸಂಬಂಧ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ ತಿಂಗಳ ಕೊನೆವರೆಗೂ ಎಚ್ಚರಿಕೆಯಿಂದಿರಬೇಕು. ಮೇ ಮೊದಲ ವಾರದಲ್ಲಿ ಕೊರೋನ ಗರಿಷ್ಠ ಮಟ್ಟ (ಪೀಕ್) ತಲುಪಬಹುದು. ಮೇ ಅಂತ್ಯಕ್ಕೆ ಸ್ವಲ್ಪ ಕಡಿಮೆಯಾಗಬಹುದು. ಹೆಚ್ಚು ಪ್ರಕರಣ ಕಂಡುಬಂದರೆ ಅದಕ್ಕೆ ತಕ್ಕಂತೆ ಆಸ್ಪತ್ರೆ, ಹಾಸಿಗೆ ಬೇಡಿಕೆ ಹೆಚ್ಚಾಗುತ್ತದೆ ಎಂದರು.

ಇದಕ್ಕಾಗಿ ಖಾಸಗಿ ಆಸ್ಪತ್ರೆಗಳ ಸಹಕಾರ ಪಡೆಯಬೇಕು. ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಪ್ರಯಾಣಿಕರನ್ನು ಪರೀಕ್ಷಿಸುವ ಹಾಗೂ ಪರೀಕ್ಷಾ ವರದಿ ಪರಿಶೀಲಿಸುವ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ಇವೆಲ್ಲವನ್ನೂ ವರದಿ ರೂಪದಲ್ಲಿ ನೀಡಲು ಸೂಚಿಸಲಾಗಿದೆ. ವರದಿಯನ್ನು ಮುಖ್ಯಮಂತ್ರಿಗೆ ನೀಡಿ ಸಮರ್ಪಕವಾಗಿ ಚರ್ಚಿಸಲಾಗುವುದು. ಇದನ್ನು ಪರಿಗಣಿಸಿ ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಖಾಸಗಿ ಆಸ್ಪತ್ರೆಗಳು ಸರಕಾರೊಂದಿಗೆ ಕೆಲಸ ಮಾಡಿವೆ. ಟೆಲಿ ಐಸಿಯು ವ್ಯವಸ್ಥೆ ಮೊದಲಿಗೆ ನಮ್ಮ ಸರಕಾರ ಆರಂಭಿಸಿದ್ದು, ಖಾಸಗಿ ಆಸ್ಪತ್ರೆಗಳು ಉಚಿತವಾಗಿ ಈ ಸೇವೆ ನೀಡಿವೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸಬೇಕಿದೆ. ಆರ್ಥಿಕ ಚಟುವಟಿಕೆಗೆ ತೊಂದರೆಯಾಗುವ ಯಾವುದೇ ಸಲಹೆ ನೀಡುವುದಿಲ್ಲ, ಆದರೆ, ಜನರು ಗುಂಪುಗೂಡದಂತೆ ಕ್ರಮ ವಹಿಸಬೇಕೆಂದು ತಜ್ಞರು ಹೇಳಿದ್ದಾರೆ ಎಂದು ಸುಧಾಕರ್ ವಿವರಿಸಿದರು.

ಮಾದರಿ ಮಹಿಳೆಯರು: ರಾಜ್ಯದಲ್ಲಿ 61 ಲಕ್ಷ ಕೋವಿಡ್ ಲಸಿಕೆ ನೀಡಿದ್ದು, ಈ ಪೈಕಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದು ಮಾದರಿಯಾಗಿದ್ದಾರೆ ಎಂದ ಅವರು, ರಾಜ್ಯಕ್ಕೆ 72 ಲಕ್ಷಕ್ಕೂ ಹೆಚ್ಚು ಲಸಿಕೆ ಬಂದಿದೆ. ರಾಜ್ಯದಲ್ಲಿ 61 ಲಕ್ಷ ಕೋವಿಡ್ ಲಸಿಕೆ ನೀಡಿದ್ದು, ಶೇ.53ರಷ್ಟು ಮಹಿಳೆಯರಿಗೆ ನೀಡಲಾಗಿದೆ. ಆದುದರಿಂದ ಮಹಿಳೆಯರೇ ನಿಜವಾದ ಮಾದರಿ, ಮಾರ್ಗದರ್ಶಕರು. ಈ ಶತಮಾನದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿದ, ಅಸಮಾನತೆ ನಿವಾರಿಸಲು ಕೆಲಸ ಮಾಡಿದ ಜ್ಯೋತಿಬಾಫುಲೆ ಅವರ ಜನ್ಮದಿನ ಹಾಗೂ ಸಮಾನತೆ, ಸ್ವಾತಂತ್ರ್ಯಕ್ಕೆ ಹೋರಾಡಿದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಪ್ರಯುಕ್ತ ಪ್ರಧಾನಿ ಮೋದಿ ಕರೆ ಮೇರೆಗೆ ಲಸಿಕೋತ್ಸವ ಮಾಡಲಾಗುತ್ತಿದೆ. ಲಸಿಕೆ ವಿಚಾರದಲ್ಲಿ ರಾಜಕೀಯ, ಧರ್ಮ, ಭಾಷೆ ಬೆರೆಸುವ ಕೆಲಸ ಮಾಡಬಾರದು. ಸಾಂಕೇತಿಕವಾಗಿ ಎಲ್ಲ ಧರ್ಮಗಳ ಮಹಿಳೆಯರಿಗೆ ಲಸಿಕೆ ನೀಡುವ ಮೂಲಕ ವಿಶೇಷ ಲಸಿಕೋತ್ಸವಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಸರಕಾರಿ ಆಸ್ಪತ್ರೆಗಳಲ್ಲಿನ ವ್ಯವಸ್ಥೆ, ಆಂಬ್ಯುಲೆನ್ಸ್ ಸೇವೆಯಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ನಿನ್ನೆ ವಿವಿಧೆಡೆಗಳಲ್ಲಿನ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಲಾಗಿದೆ. ನ್ಯೂನತೆ ಸರಿಪಡಿಸಲು ಕ್ರಮ ವಹಿಸಲಾಗಿದೆ. ಜನರು ಜಾಗೃತರಾಗಿದ್ದರೆ ಯಾವುದೇ ಲಾಕ್‍ಡೌನ್ ಅಥವಾ ಆರ್ಥಿಕ ಚಟುವಟಿಕೆ ನಿಬರ್ಂಧಿಸುವ ಅಗತ್ಯವಿಲ್ಲ. ಜನರು ಸರಕಾರದೊಂದಿಗೆ ಸಹಕರಿಸಿ ಕೋವಿಡ್ ನಿಯಂತ್ರಿಸಬೇಕು ಎಂದು ಅವರು ಮನವಿ ಮಾಡಿದರು.

`ರಾಜ್ಯದಲ್ಲಿ ಕೊರೋನ ಎರಡನೇ ಅಲೆ ಆರಂಭವಾಗಿದೆ. ಮೇ 15ರ ವೇಳೆಗೆ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲೇ 15 ಸಾವಿರ ಪ್ರಕರಣಗಳು ಬರಬಹುದು. ಹೀಗಾಗಿ ಜನರು ಗುಂಪು ಸೇರುವುದನ್ನು ತಡೆಯಬೇಕು. ವಾಣಿಜ್ಯ ಚಟುವಟಿಕೆಗೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಬೇಕು. ಐಸ್ ಕ್ರೀಂ ಪಾರ್ಲರ್, ಚಾಟ್ ಸೆಂಟರ್ ಮುಂದೆ ಜನ ಸಾಲಾಗಿ ನಿಲ್ಲುತ್ತಿದ್ದಾರೆ. ನಿಷೇಧಾಜ್ಞೆ ಹೇರಲು ಸೂಚಿಸಿದ್ದು, ಜಾತ್ರೆ, ಮದುವೆಗಳಿಗೆ ಜನ ಸೇರುವುದಕ್ಕೂ ನಿರ್ಬಂಧ ಹೇರಬೇಕು'

-ಡಾ.ಸಿ.ಎನ್. ಮಂಜುನಾಥ್, ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X