ಸಾಗರ: ಕೆಎಸ್ಸಾರ್ಟಿಸಿ ನೌಕರರ ಕುಟುಂಬಸ್ಥರಿಂದ ತಟ್ಟೆ, ಲೋಟ ಬಡಿದು ಚಳವಳಿ
ಸಾಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಆದೇಶದಂತೆ ನೌಕರರ ಕುಟುಂಬಸ್ಥರಿಂದ ಸಾಗರದ ಪ್ರಮುಖ ರಸ್ತೆಗಳಲ್ಲಿ ತಟ್ಟೆ ಲೋಟ ಬಡಿಯುವುದರ ಮೂಲಕ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಆರನೇ ವೇತನ ಆಯೋಗ ಜಾರಿಗೊಳಿಸುವಂತೆ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರೈತ ಮುಖಂಡ ವಸಂತ್ ಕುಗ್ವೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.