Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ : ಸಾರಿಗೆ ನೌಕರರ ಒಕ್ಕೂಟದ...

ಬೆಳ್ತಂಗಡಿ : ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 April 2021 4:47 PM IST
share
ಬೆಳ್ತಂಗಡಿ : ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ : ಮಿನಿ ವಿಧಾನಸೌಧದ ಎದುರು ಸಿಐಟಿಯು ಬೆಳ್ತಂಗಡಿ ತಾಲೂಕು ಸಮಿತಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ನೌಕರರ ಕುಟುಂಬಸ್ಥರ ಸಹಭಾಗಿತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಿಐಟಿಯು ತಾಲೂಕು ಅಧ್ಯಕ್ಷ, ಹಿರಿಯ ನ್ಯಾಯವಾದಿ ಶಿವಕುಮಾರ್ ಎಸ್. ಎಂ ರಾಜ್ಯ ಸರ್ಕಾರ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಬದಲಾಗಿ ಮುಷ್ಕರದ ಬಗ್ಗೆ ಸಂವಿಧಾನ ಬಾಹಿರವಾಗಿ ವರ್ತಿಸುತ್ತಿದೆ. ಸಂವಿಧಾನ ಬದ್ಧ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಸಾರಿಗೆ ನೌಕರರು ಆಡಳಿತಗಾರರ ಆಸ್ತಿಯನ್ನು ಕೇಳುತ್ತಿಲ್ಲ , ಬದಲಾಗಿ ಸಂವಿಧಾನ ಬದ್ಧ ಹಕ್ಕುಗಳನ್ನು ಕೇಳುತ್ತಿದ್ದಾರೆ ಎಂದ ಅವರು ಮಠ , ಮಂದರಿಗಳಿಗೆ  ಬಜೆಟ್ ನಲ್ಲಿ 3000 ಕೋಟಿ ಮೀಸಲಿಡುವ ಸರ್ಕಾರ ಸಾರಿಗೆ ನೌಕರರ ಬೇಡಿಕೆ ಈಡೇರಿಸಲು 1500 ಕೋಟಿ ನೀಡಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು. ನೌಕರರ ಬೇಡಿಕೆಗಳನ್ನು ಈಡೇರಿಸುವ ಬದಲಾಗಿ ಎಸ್ಮಾ ಜಾರಿ , ನೌಕರರ ವಜಾ , ಅಮಾನತು , ವಸತಿ ಗೃಹಗಳಿಂದ ಬಲಾತ್ಕಾರವಾಗಿ ಒಕ್ಕಲೇಬ್ಬಿಸುವ ಮೂಲಕ ಅತ್ಯಂತ ಅಮಾನವೀಯವಾಗಿ ದೌರ್ಜನ್ಯ ಎಸಗುತ್ತಿದೆ ಎಂದ ಅವರು ಸಾರಿಗೆ ನೌಕರರು ನಡೆಸುತ್ತಿರುವ ನ್ಯಾಯಯುತ ಹೋರಾಟಕ್ಕೆ ಸಿಐಟಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದಲ್ಲದೆ , ನೌಕರರ ಹೋರಾಟದಿಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಿಐಟಿಯು ತಾಲೂಕು ಉಪಾಧ್ಯಕ್ಷ ಶೇಖರ್ ಲಾಯಿಲ ರಾಜ್ಯ ಸರ್ಕಾರವು ಸರ್ವಾಧಿಕಾರಿ ಧೋರಣೆ ಅನುಸರಿಸುವ ಮೂಲಕ ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕುವ ಸಲುವಾಗಿ ನೌಕರರ ಬಗ್ಗೆ ಅಪಪ್ರಚಾರ ನಡೆಸುತ್ತಿದೆ. ಮಾಜಿ ಸಾರಿಗೆ , ಹಾಲಿ ಕಂದಾಯ ಸಚಿವ ಆರ್ ಅಶೋಕ್ ಮತಿಭ್ರಮಣರಂತೆ ವರ್ತಿಸುತ್ತಿದ್ದಾರೆ. ಸಾರಿಗೆ ಸಂಸ್ಥೆ ಮುಳುಗುತ್ತಿರುವ ಹಡಗು ಆಗಲು ಬಿಜೆಪಿ ರಾಜ್ಯ ಸರ್ಕಾರ ಕಾರಣ ಎಂಬುದನ್ನು ಸಚಿವರೆ ಒಪ್ಪಿಕೊಂಡಂತಾಗಿದೆ. ಏಷ್ಯಾ ಖಂಡದಲ್ಲೇ ಲಾಭದಾಯಕ ಕರ್ನಾಟಕ ರಾಜ್ಯ ಸಾರಿಗೆಯನ್ನು ಅವಮಾನಿಸಿದ ಆರ್ ಅಶೋಕ್ ತಕ್ಷಣ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕೋರೋನ ನೆಪವೊಡ್ಡಿ  ಪ್ರತಿಭಟನೆ ನಡೆಸದಂತೆ ನಿಷೇಧ ಹೇರಿರುವ ಜಿಲ್ಲಾಡಳಿತವು ಸಂಸದ ನಳೀನ್ ಕುಮಾರ್ ಕಟೀಲು ಅವರ ಮನೆಯಲ್ಲಿ 20 ರಿಂದ 30 ಸಾವಿರ ಜನರನ್ನು ಸೇರಿಸಿ ಧರ್ಮ ನೇಮತ್ಸೋವ ನಡೆಸಲು ಅವಕಾಶ ಮಾಡಿಕೊಟ್ಟಿದೆ ಎಂದ ಅವರು ರಾಜ್ಯದಲ್ಲಿ ಜನಪ್ರತಿನಿಧಿ ಗಳಿಗೊಂದು, ಜನಸಾಮಾನ್ಯರಿಗೊಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಧರ್ಮಸ್ಥಳ ಡಿಫ್ಪೋ ಅಧ್ಯಕ್ಷ ತಮ್ಮಣ್ಣ ಗೌಡ ಮಾತನಾಡಿ ರಾಜ್ಯ ಸರ್ಕಾರ ನೌಕರರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಬದಲಾಗಿ ಡಿಪೋ ಮೆನೇಜರ್ ಮೂಲಕ ನೌಕರರಿಗೆ ವಿವಿಧ ರೀತಿಯ ದೌರ್ಜನ್ಯ ಎಸಗುತ್ತಿದೆ. ಸಾರಿಗೆ ನೌಕರರನ್ನು ಜೀತದಾಳುಗಳಂತೆ ದುಡಿಸುತ್ತಿರುವುದಲ್ಲದೆ ಅಂತರರಾಷ್ಟ್ರೀಯ ಕಾರ್ಮಿಕ ಕಾನೂನಿನ ವಿರುದ್ಧವಾಗಿ ದುಡಿಸಲಾಗುತ್ತದೆ ಎಂದು ಆರೋಪಿಸಿದ ಅವರು ನೌಕರರು ರಾಜ್ಯ ಸರ್ಕಾರದ, ಅಧಿಕಾರಿಗಳ ಯಾವುದೇ ಗೊಡ್ಡು ಬೆದರಿಗೆ ಬಗ್ಗಲ್ಲ . ಹೋರಾಟವನ್ನು ಹತ್ತಿಕ್ಕುವ ಸಂವಿಧಾನ ಬಾಹಿರ ಕೆಲಸಕ್ಕೆ ಕೈ ಹಾಕಿ ನಮ್ಮನ್ನು ಕೆಣಕಿದರೆ ನಾವೂ ಪ್ರತ್ಯುತ್ತರ ನೀಡಬೇಕಾಗುತ್ತದೆ ಎಂದರು.

ಸಾರಿಗೆ ನೌಕರರು ಹಾಗೂ ಕುಟುಂಬಸ್ಥರು ತಮ್ಮ ಮಕ್ಕಳೊಂದಿಗೆ ತಹಶಿಲ್ದಾರರ ಕಚೇರಿ ಎದುರು ತಟ್ಟೆ, ಲೋಟ ಬಾರಿಸಿ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯ ನೇತೃತ್ವವನ್ನು ಸಾರಿಗೆ ನೌಕರರ ಒಕ್ಕೂಟದ ಹೇಮಂತ್ ಕುಮಾರ್, ಸುದರ್ಶಿನಿ, ಸಿಐಟಿಯು ಮುಖಂಡರಾದ ನ್ಯಾಯವಾದಿ ಸುಕನ್ಯಾ ಹರಿದಾಸ್, ನೀಲೇಶ್ ಎಚ್, ಕುಸುಮಾ ಮಾಚಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X