Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಗತ್ತಿನಾದ್ಯಂತ ದಿನಂಪ್ರತಿ...

ಜಗತ್ತಿನಾದ್ಯಂತ ದಿನಂಪ್ರತಿ ವರದಿಯಾಗುತ್ತಿರುವ ಕೊರೋನ ಸೋಂಕಿನ 6 ಪ್ರಕರಣಗಳಲ್ಲಿ 1 ಭಾರತದ್ದು!

ವಾರ್ತಾಭಾರತಿವಾರ್ತಾಭಾರತಿ12 April 2021 9:41 PM IST
share
ಜಗತ್ತಿನಾದ್ಯಂತ ದಿನಂಪ್ರತಿ ವರದಿಯಾಗುತ್ತಿರುವ ಕೊರೋನ ಸೋಂಕಿನ 6 ಪ್ರಕರಣಗಳಲ್ಲಿ 1 ಭಾರತದ್ದು!

ಕುಂಭಮೇಳ, ಚುನಾವಣಾ ರ್ಯಾಲಿ ಪರಿಣಾಮ ಲಕ್ನೋ, ಎ. 8: ದೇಶದಲ್ಲಿ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಮವಾರ ಜಗತ್ತಿನಲ್ಲೇ ಅತ್ಯಧಿಕ 168,912 ಪ್ರಕರಣಗಳು ದಾಖಲಾಗಿವೆ.

ಕುಂಭಮೇಳದ ಹಿನ್ನೆಲೆಯಲ್ಲಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಭಕ್ತರು ಸೇರುತ್ತಿರುವುದರಿಂದ ಕೊರೋನ ಸೋಂಕಿನ ಪ್ರಕರಣಗಳು ಇನ್ನಷ್ಟು ಏರಿಕೆಯಾಗುವ ಆತಂಕ ಎದುರಾಗಿದೆ. ಜಗತ್ತಿನಾದ್ಯಂತ ದಿನಂಪ್ರತಿ ವರದಿಯಾಗುತ್ತಿರುವ ಕೊರೋನ ಸೋಂಕಿನ 6 ಪ್ರಕರಣಗಳಲ್ಲಿ 1 ಪ್ರಕರಣ ಈಗ ಭಾರತದಿಂದ ವರದಿಯಾಗುತ್ತಿದೆ. ಭಾರತದಲ್ಲಿ ಸೋಮವಾರ ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1 ಕೋಟಿ 35 ಲಕ್ಷಕ್ಕೆ ಏರಿಕೆಯಾಗಿದ್ದು, ಬ್ರೆಝಿಲ್ ಅನ್ನು ಹಿಂದಿಕ್ಕಿದೆ. ಇದರೊಂದಿಗೆ ಕೊರೋನ ಸೋಂಕಿನ ಪ್ರಕರಣಗಳ ಒಟ್ಟು ಸಂಖ್ಯೆ 3 ಕೋಟಿ 12 ಲಕ್ಷಕ್ಕೆ ತಲುಪಿರುವ ಅಮೆರಿಕದ ಬಳಿಕದ ಎರಡನೇ ಸ್ಥಾನವನ್ನು ಭಾರತ ಪಡೆದುಕೊಂಡಿದೆ. ಕಳೆದ ವರ್ಷ ಲಾಕ್‌ಡೌನ್ ಬಳಿಕ ಆರ್ಥಿಕ ಚಟುವಟಿಕೆಗಳು, ಧಾರ್ಮಿಕ ಉತ್ಸವಗಳು ಹಾಗೂ ರಾಜಕೀಯ ರ್ಯಾಲಿಗಳಿಗೆ ಅವಕಾಶ ನೀಡಿರುವುದರಿಂದ ಕೊರೋನ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

 ತಿಂಗಳ ಕಾಲ ನಡೆಯುವ ಕುಂಭ ಮೇಳದಲ್ಲಿ ಪಾಲ್ಗೊಳ್ಳಲು ಉತ್ತರಾಖಂಡದ ಹರಿದ್ವಾರದ ಗಂಗಾ ನದಿ ದಂಡೆಯಲ್ಲಿ ಲಕ್ಷಾಂತರ ಜನರು ಸೇರಿದ್ದಾರೆ. ಇದರಿಂದ ಕೊರೋನ ಸೋಂಕಿನ ಪ್ರಕರಣಗಳಲ್ಲಿ ಏರಿಕೆಯಾಗುವ ಆತಂಕ ಎದುರಾಗಿದೆ. ‘‘ಇಲ್ಲಿ ಸೇರುತ್ತಿರುವ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಸುರಕ್ಷಿತ ಅಂತರ ಕಾಯ್ದುಗೊಳ್ಳುವಂತೆ ಪೊಲೀಸರು ಭಕ್ತರಲ್ಲಿ ನಿರಂತರ ಮನವಿ ಮಾಡುತ್ತಿದ್ದಾರೆ’’ ಎಂದು ಪೊಲೀಸ್ ಅಧಿಕಾರಿ ಸಂಜಯ್ ಗುಂಜ್ಯಾಲ್ ಹೇಳಿದ್ದಾರೆ. ಈ ಪ್ರದೇಶ ಪ್ರವೇಶಿಸಲು ಕೋವಿಡ್ ಪರೀಕ್ಷೆಯನ್ನು ಪ್ರಾಧಿಕಾರ ಕಡ್ಡಾಯಗೊಳಿಸಿದೆ. ಆದರೂ ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಾಸಪಡುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಈ ತಿಂಗಳಲ್ಲಿ ನಾಲ್ಕು ದೊಡ್ಡ ರಾಜ್ಯಗಳಲ್ಲಿ ಚುನಾವಣೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಲು ಪಶ್ಚಿಮಬಂಗಾಳಕ್ಕೆ ತೆರಳಿದ್ದರು. ಈ ರ್ಯಾಲಿಯಲ್ಲಿ ಸಾವಿರಾರು ಜನರು ಪಾಲ್ಗೊಂಡಿದ್ದರು.

‘‘ಕೊರೋನ ಸೋಂಕಿನ 12 ಲಕ್ಷ ಸಕ್ರಿಯ ಪ್ರಕರಣಗಳೊಂದಿಗೆ ಪ್ರತಿದಿನ ಕೊರೋನ ಸೋಂಕಿನ ಪ್ರಕರಣಗಳು 2 ಲಕ್ಷಕ್ಕೆ ತಲುಪುತ್ತಿದೆ. ಇಂಥ ಸಂದರ್ಭ ಚುನಾವಣಾ ರ್ಯಾಲಿ ಹಾಗೂ ಕುಂಭಮೇಳ ನಡೆಸುವುದು ಅಚ್ಚರಿಯ ವಿಚಾರ’’ ಎಂದು ರಾಜಕೀಯ ವಿಮರ್ಶಕ ಶೇಖರ್ ಗುಪ್ತಾ ಟ್ಟಿಟ್ಟರ್ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಕಳೆದ ಒಂದು ದಿನದಲ್ಲಿ ಕೊರೋನ ಸೋಂಕಿನಿಂದ 904 ಮಂದಿ ಮೃತಪಟ್ಟಿದ್ದ್ಜಾರೆ. ಇದು ಅಕ್ಟೋಬರ್ 18ರ ಬಳಿಕ ಸಂಭವಿಸಿದ ಅತ್ಯಧಿಕ ಸಂಖ್ಯೆಯ ಸಾವು. ಇದರೊದಿಗೆ ಒಟ್ಟು ಸಾವಿನ ಸಂಖ್ಯೆ 1,70,179ಕ್ಕೆ ಏರಿಕೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X