Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್‌ನಿಂದ ಪರಮಾಣು ಸ್ಥಾವರದಲ್ಲಿ...

ಇಸ್ರೇಲ್‌ನಿಂದ ಪರಮಾಣು ಸ್ಥಾವರದಲ್ಲಿ ಬುಡಮೇಲು ಕೃತ್ಯ: ಇರಾನ್

ಪ್ರತೀಕಾರ ತೀರಿಸುವುದಾಗಿ ವಿದೇಶ ಸಚಿವ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 April 2021 10:13 PM IST
share
ಇಸ್ರೇಲ್‌ನಿಂದ ಪರಮಾಣು ಸ್ಥಾವರದಲ್ಲಿ ಬುಡಮೇಲು ಕೃತ್ಯ: ಇರಾನ್

ಟೆಹರಾನ್ (ಇರಾನ್), ಎ. 12: ತನ್ನ ಪ್ರಮುಖ ಪರಮಾಣು ಸ್ಥಾವರ ನಟಾಂಝ್‌ನಲ್ಲಿ ನಡೆದಿರುವ ಬುಡಮೇಲು ಕೃತ್ಯಕ್ಕೆ ಪ್ರಾದೇಶಿಕ ಬದ್ಧವೈರಿ ಇಸ್ರೇಲ್ ಕಾರಣ ಎಂದು ಇರಾನ್ ಆರೋಪಿಸಿದೆ ಹಾಗೂ ಅದರ ವಿರುದ್ಧ ಪ್ರತೀಕಾರ ತೀರಿಸುವುದಾಗಿ ಪ್ರತಿಜ್ಞೆ ಮಾಡಿದೆ.

ಇರಾನ್‌ನ ವಿದೇಶ ಸಚಿವ ಮುಹಮ್ಮದ್ ಜವಾದ್ ಝಾರಿಫ್ ಸೋಮವಾರ ಸಂಸದರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಈ ಹೇಳಿಕೆ ನೀಡಿದ್ದಾರೆ ಎಂದು ಇರಾನ್‌ನ ಅಧಿಕೃತ ‘ನೂರ್‌ನ್ಯೂಸ್’ ವೆಬ್‌ಸೈಟ್ ವರದಿ ಮಾಡಿದೆ. ಭೂಗತ ಯುರೇನಿಯಂ ಸಂವರ್ಧನಾ ಸ್ಥಾವರದಲ್ಲಿರುವ ಉತ್ಪಾದನಾ ಕೊಠಡಿಗಳ ಪೈಕಿ ಒಂದರಲ್ಲಿ ವಿದ್ಯುತ್ ಅಡಚಣೆಯನ್ನು ಉಂಟು ಮಾಡಿರುವ ವ್ಯಕ್ತಿಯನ್ನು ಗುರುತಿಸಲಾಗಿದೆ ಎಂದು ಅದು ಹೇಳಿದೆ. ಅದು ವ್ಯಕ್ತಿಯ ವಿವರಗಳನ್ನು ಒದಗಿಸಿಲ್ಲ.

2015ರ ಇರಾನ್ ಪರಮಾಣು ಒಪ್ಪಂದಕ್ಕೆ ಮರುಜೀವ ನೀಡಲು ಇರಾನ್ ಮತ್ತು ಅಮೆರಿಕ ರಾಜತಾಂತ್ರಿಕ ಕ್ರಮಗಳನ್ನು ಆರಂಭಿಸಿರುವ ನಡುವೆಯೇ ಈ ಘಟನೆ ಸಂಭವಿಸಿದೆ. ಪ್ರಬಲ ದೇಶಗಳೊಂದಿಗೆ ಇರಾನ್ ಮಾಡಿಕೊಂಡಿರುವ ಪರಮಾಣು ಒಪ್ಪಂದವನ್ನು ಇಸ್ರೇಲ್ ತೀವ್ರವಾಗಿ ವಿರೋಧಿಸುತ್ತಿದೆ. ಅಮೆರಿಕದ ನಿಕಟಪೂರ್ವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಒಪ್ಪಂದದಿಂದ ಅವೆುರಿಕವನ್ನು 2018ರಲ್ಲಿ ಹೊರಗೆ ತಂದಿದ್ದಾರೆ.

‘‘ಈ ವ್ಯಕ್ತಿಯನ್ನು ಬಂಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ’’ ಎಂದು ವೆಬ್‌ಸೈಟ್ ಹೇಳಿದೆ.

ಪರಮಾಣು ಒಪ್ಪಂದವನ್ನು ಉಳಿಸಿಕೊಳ್ಳುವುದಕ್ಕಾಗಿ ಕಳೆದ ವಾರ ಇರಾನ್ ಮತ್ತು ಜಾಗತಿಕ ಶಕ್ತ ರಾಷ್ಟ್ರಗಳು ವಿಯೆನ್ನಾದಲ್ಲಿ ಮಾತುಕತೆ ನಡೆಸಿದ್ದವು. ಮಾತುಕತೆ ‘ರಚನಾತ್ಮಕ’ವಾಗಿತ್ತು ಎಂದು ಆ ದೇಶಗಳು ಹೇಳಿವೆ. ಇದರ ನಡುವೆಯೇ, ಯುರೇನಿಯಂ ಸಂವರ್ಧನೆಯನ್ನು ವೃದ್ಧಿಸಲು ಸುಧಾರಿತ ಸೆಂಟಿಫ್ಯೂಜ್‌ಗಳನ್ನು ಬಳಸುವುದಾಗಿ ಇರಾನ್ ಘೋಷಿಸಿದೆ. ಇದು ಪರಮಾಣು ಒಪ್ಪಂದದ ಶರತ್ತುಗಳ ಉಲ್ಲಂಘನೆಯಾಗಿದೆ.

ಪರಮಾಣು ಭಯೋತ್ಪಾದನೆ: ಇರಾನ್ ಪರಮಾಣು ಶಕ್ತಿ ಸಂಸ್ಥೆಯ ಮುಖ್ಯಸ್ಥ ಆರೋಪ

ಪರಮಾಣು ಸ್ಥಾವರದಲ್ಲಿ ನಡೆದಿರುವ ಬುಡಮೇಲು ಕೃತ್ಯವು ‘ಪರಮಾಣು ಭಯೋತ್ಪಾದನೆ’ಯಾಗಿದೆ ಎಂಬುದಾಗಿ ಇರಾನ್ ಪರಮಾಣು ಶಕ್ತಿ ಸಂಸ್ಥೆಯ ಮುಖ್ಯಸ್ಥ ಅಲಿ ಅಕ್ಬರ್ ಸಾಲಿಹಿ ರವಿವಾರ ಬಣ್ಣಿಸಿದ್ದಾರೆ.

ಇರಾನ್ ಮತ್ತು ಜಾಗತಿಕ ಶಕ್ತಿಗಳ ನಡುವೆ ನಡೆಯುತ್ತಿರುವ ಮಾತುಕತೆಗಳ ವಿರೋಧಿಗಳು ಈ ಕೃತ್ಯ ನಡೆಸಿದ್ದಾರೆ ಎಂದ ಅವರು ಆರೋಪಿಸಿದ್ದಾರೆ.

ಇರಾನ್‌ನ ಪರಮಾಣು ಪ್ರಗತಿ ಮತ್ತು ವಿಯೆನ್ನಾದಲ್ಲಿ ನಡೆಯುತ್ತಿರುವ ಮಾತುಕತೆಯ ವಿರೋಧಿಗಳು ಈ ಕೃತ್ಯದ ಹಿಂದಿದ್ದಾರೆ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X