Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈಯಲ್ಲಿ ಶೀಘ್ರದಲ್ಲಿ ಆರಂಭಗೊಳ್ಳಲಿದೆ...

ದುಬೈಯಲ್ಲಿ ಶೀಘ್ರದಲ್ಲಿ ಆರಂಭಗೊಳ್ಳಲಿದೆ ಹಾರ್ಟ್ ಆ್ಯಂಡ್ ಲಂಗ್ ಸೆಂಟರ್ ಆಫ್ ಎಕ್ಸಲೆನ್ಸ್

ವಾರ್ತಾಭಾರತಿವಾರ್ತಾಭಾರತಿ13 April 2021 12:14 PM IST
share
ದುಬೈಯಲ್ಲಿ ಶೀಘ್ರದಲ್ಲಿ ಆರಂಭಗೊಳ್ಳಲಿದೆ ಹಾರ್ಟ್ ಆ್ಯಂಡ್ ಲಂಗ್ ಸೆಂಟರ್ ಆಫ್ ಎಕ್ಸಲೆನ್ಸ್

ದುಬೈ: ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ ಹಾರ್ಟ್ ಆ್ಯಂಡ್ ಲಂಗ್ ಸೆಂಟರ್ ಆಫ್ ಎಕ್ಸಲೆನ್ಸ್ ದುಬೈಯಲ್ಲಿ ಶೀಘ್ರದಲ್ಲಿಯೇ ಆರಂಭಗೊಳ್ಳಲಿದ್ದು ದುಬೈಯಲ್ಲಿ ಇದು ಇಂತಹ ಪ್ರಥಮ ಸೌಲಭ್ಯವಾಗಲಿದೆ. ಈ ಸೆಂಟರ್ ಆಫ್ ಎಕ್ಸಲೆನ್ಸ್ ನಲ್ಲಿ ಮುಂದಿನ ಹಂತದಲ್ಲಿ ರೋಗಿಗಳಿಗೆ ಕೈಗೆಟಕುವ ದರಗಳಲ್ಲಿ ಹೃದಯ ಮತ್ತು ಶ್ವಾಸಕೋಶ ಕಸಿ ಶಸ್ತ್ರಕ್ರಿಯೆ ಸೌಲಭ್ಯ ದೊರೆಯುವ ಸಾಧ್ಯತೆಯೂ ಇದೆ.

ಯುಎಇ ಮೂಲದ ಕೆಇಎಫ್ ಹೆಲ್ತ್ ಕೇರ್ ಸಂಸ್ಥೆ ಭಾರತದಲ್ಲಿ ಸ್ಥಾಪಿಸಿರುವ ಮೈತ್ರಾ ಕೇರ್ ನೆಟ್ವರ್ಕ್ ಹಾಗೂ  ಕೆನಡಿಯನ್ ಸ್ಪೆಷಲಿಸ್ಟ್ ಹಾಸ್ಪಿಟಲ್ (ಸಿಎಸ್‍ಎಚ್) ಜತೆಗೂಡಿ ಈ ಸೆಂಟರ್ ಆಫ್ ಎಕ್ಸಲೆನ್ಸ್ ಆರಂಭಿಸಲಿದ್ದು  ಹಂತ ಹಂತವಾಗಿ ಈ ಕೇಂದ್ರ  ಅಭಿವೃದ್ಧಿಗೊಳ್ಳಲಿದೆ.

ವಿಶ್ವವಿಖ್ಯಾತ ಕಾರ್ಡಿಯೋಥೊರಾಸಿಕ್ ಸರ್ಜನ್ ಡಾ ಕೆ ಆರ್ ಬಾಲಕೃಷ್ಣನ್ ಅವರು ಈ  ಹೊಸ ಸೆಂಟರ್ ಆಫ್ ಎಕ್ಸಲೆನ್ಸ್ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಆರಂಭಿಕ ಹಂತದಲ್ಲಿ ಸೆಂಟರ್ ಫಾರ್ ಎಕ್ಸಲೆನ್ಸ್ ನಲ್ಲಿ ಅಡ್ವಾನ್ಸ್ ಡ್ ಇಂಟರ್‍ವೆನ್ಶನಲ್ ಕಾರ್ಡಿಯಾಲಜಿ  ಪ್ರಕ್ರಿಯೆಗಳನ್ನು  ನಡೆಸಲಾಗುವುದು ಹಾಗೂ  ಅಲ್ಲಿ ಇಲೆಕ್ಟ್ರೋ ಫಿಸಿಯಾಲಜಿ ವಿಭಾಗವೂ ಕಾರ್ಯಾಚರಿಸಲಿದೆ. ಮೈತ್ರಾ ಆಸ್ಪತ್ರೆಯ  ಪೂರ್ಣಕಾಲಿಕ ತಂಡವೊಂದೂ ಸಿಎಸ್‍ಎಚ್  ಆಸ್ಪತ್ರೆಯಲ್ಲಿರಲಿದೆ. ಎರಡನೇ ಹಂತದಲ್ಲಿ ದುಬೈಯ ಸೆಂಟರ್ ಆಫ್ ಎಕ್ಸಲೆನ್ಸ್‌ ನಲ್ಲಿ ಪೂರ್ಣಪ್ರಮಾಣದ ಹೃದ್ರೋಗ ವಿಜ್ಞಾನ ವಿಭಾಗ ಇರಲಿದ್ದು ಹೃದಯಕ್ಕೆ ಸಂಬಂಧಿಸಿದ ಎಲ್ಲಾ ಶಸ್ತ್ರಕ್ರಿಯೆಗಳೂ ಇಲ್ಲಿ ನಡೆಯಲಿವೆ. ಈ ಹಂತದಲ್ಲಿ ಆರ್ಥೋಪೀಡಿಕ್ಸ್ ಹಾಗೂ ರೋಬಾಟಿಕ್ ಸರ್ಜಿರಿ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಕೂಡ ಆರಂಭಗೊಳ್ಳಲಿದ್ದು ಇದರ ಭಾಗವಾಗಿ ಬೆನ್ನು ಮೂಳೆ ಶಸ್ತ್ರಕ್ರಿಯೆಗೆ ಅನುಕೂಲ ಕಲ್ಪಿಸುವ  ಅತ್ಯಾಧುನಿಕ ನರರೋಗವಿಜ್ಞಾನ ವಿಭಾಗವೂ ಇರಲಿದೆ.

ಈ ಕುರಿತು ಗಲ್ಫ್‌ ನ್ಯೂಸ್‌ ನೊಂದಿಗೆ ಮಾತನಾಡಿದ ಡಾ. ಬಾಲಕೃಷ್ಣನ್‌, "ನಾವು ಮುಂದಿನ ಹಂತಗಳಲ್ಲಿ ಹೃದಯ ಕಸಿ ಮಾಡುವ ಉದ್ದೇಶ ಹೊಂದಿದ್ದೇವೆ. ಯುಎಇ ಮತ್ತು ಪ್ರದೇಶದ ಜನ್ಮಜಾತ ಹೃದಯ ರೋಗ ಹೊಂದಿರುವ ರೋಗಿಗಳಿಗೆ ರೋಗ ಪರಿಹಾರ ನೀಡುವ ಸಲುವಾಗಿ ಕೃತಕ ಮತ್ತು ಯಾಂತ್ರಿಕ ಹೃದಯ ಕಸಿ ಮಾಡುವಿಕೆಯಿಂದ ಪ್ರಾರಂಭಿಸುತ್ತೇವೆ" ಎಂದು ಹೇಳಿಕೆ ನೀಡಿದರು.

ಕೆಇಎಫ್ ಹೋಲ್ಡಿಂಗ್ಸ್ ಹಾಗೂ ಕ್ಯಾಲಿಕಟ್ ಮೂಲದ ಮೈತ್ರಾ ಆಸ್ಪತ್ರೆ ಮತ್ತು ಮೈತ್ರಾ ಕೇರ್ ನೆಟ್ವರ್ಕ್ ಸ್ಥಾಪಕರು ಹಾಗೂ ಅಧ್ಯಕ್ಷರಾಗಿರುವ ಫೈಝಲ್ ಕೊಟ್ಟಿಕೊಲ್ಲೊನ್ ಮಾತನಾಡಿ, ದುಬೈಯಲ್ಲಿ ಆರಂಭಗೊಳ್ಳಲಿರುವ ಹಾರ್ಟ್ ಆ್ಯಂಡ್ ಲಂಗ್ ಸೆಂಟರ್ ಆಫ್ ಎಕ್ಸಲೆನ್ಸ್  ಜಾಗತಿಕ ಗುಣಮಟ್ಟದ  ಆರೋಗ್ಯ ಸೇವಾ ಸವಲತ್ತುಗಳನ್ನು ದುಬೈ ಮತ್ತು ಯುಎಇ ಜನರಿಗೆ ಒದಗಿಸುವಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X