Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಸಕ ಸುನಿಲ್ ನಾಯ್ಕರದ್ದು ಬಾಲಿಷತನದ...

ಶಾಸಕ ಸುನಿಲ್ ನಾಯ್ಕರದ್ದು ಬಾಲಿಷತನದ ಹೇಳಿಕೆ: ಮಾಜಿ ಶಾಸಕ ಜೆ.ಡಿ.ನಾಯ್ಕ

ವಾರ್ತಾಭಾರತಿವಾರ್ತಾಭಾರತಿ13 April 2021 5:58 PM IST
share
ಶಾಸಕ ಸುನಿಲ್ ನಾಯ್ಕರದ್ದು ಬಾಲಿಷತನದ ಹೇಳಿಕೆ: ಮಾಜಿ ಶಾಸಕ ಜೆ.ಡಿ.ನಾಯ್ಕ

ಭಟ್ಕಳ: ಜಿಲ್ಲೆಯ ಚತುಷ್ಪತ ಹೆದ್ದಾರಿ ಸಮಸ್ಯೆಗೆ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರೇ ಕಾರಣ ಎನ್ನುವ ಶಾಸಕ ಸುನಿಲ್ ನಾಯ್ಕ ಅವರ ಹೇಳಿಕೆ ಖಂಡನೀಯ, ಇದೊಂದು ಬಾಲಿಷವಾದ ಹೇಳಿಕೆ ಎಂದು ಮಾಜಿ ಶಾಸಕ ಜೆ.ಡಿ. ನಾಯ್ಕ ಹೇಳಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. 

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯು ಸಂಪೂರ್ಣ ಕೇಂದ್ರ ಸರಕಾರದ ಹಿಡಿತದಲ್ಲಿರುತ್ತದೆ. ಕಾಲ ಕಾಲಕ್ಕೆ ಆ ಪ್ರದೇಶದ ಸಂಸದರು ಜನರೊಂದಿಗೆ ಬೆರೆತು ಜನರಿಗೆ ಅಗತ್ಯವಿರುವೆಡೆಗಳಲ್ಲಿ ಯಾವರೀತಿಯಾಗಬೇಕು ಎಂದು ತಿಳಿದುಕೊಂಡು ಆ ರೀತಿ ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ಮಾಡಬೇಕಾಗುತ್ತದೆ. ಅದನ್ನು ಬಿಟ್ಟು ಶಾಸಕರು ಮಾಜಿ ಸಚಿವ ದೇಶಪಾಂಡೆಯವರ ಮೇಲೆ ದೋಷ ಹೊರಿಸಿರುವುದು ಸರಿಯಲ್ಲ.  ಸಾಮಾನ್ಯವಾಗಿ ಉಸ್ತುವಾರಿ ಸಚಿವರಿದ್ದಾಗ ಸಾರ್ವಜನಿಕರು ಅರ್ಜಿ ಕೊಡುತ್ತಾರೆ. ಅದನ್ನು ರಾಜ್ಯಕ್ಕೋ, ಕೇಂದ್ರಕ್ಕೋ ಕಳುಹಿಸುವುದು ಸಾಮಾನ್ಯವಾಗಿದೆ. ಆ ರೀತಿ ಪತ್ರ ಬರೆಯುವುದನ್ನೇ ಪ್ರಶ್ನಿಸಲಾಗದು ಎಂದರು.

ಹೆದ್ದಾರಿಯಂತಹ ರಾಷ್ಟ್ರೀಯ ಯೋಜನೆಗೆ ಜನರು ತಮ್ಮ ಜಾಗಗಳನ್ನು ಸ್ವಯಂ ಇಚ್ಚೆಯಿಂದ ಬಿಟ್ಟು ಕೊಡಬೇಕು. ಅದಕ್ಕೆ ಸರಿಯಾದ ಪರಿಹಾರವನ್ನು ಸಂಬಂಧಪಟ್ಟವರು ನೀಡಬೇಕು. ಆದರೆ ಇಲ್ಲಿ ಐ.ಆರ್.ಬಿ. ಕಂಪೆನಿ ದೊಡ್ಡ ದೊಡ್ಡ ಕಟ್ಟಡಗಳಿದ್ದರೆ ಅಲ್ಲಿ ಕೋಟಿಗಟ್ಟಲೆ ಪರಿಹಾರ ಕೊಡುವುದನ್ನು ತಪ್ಪಿಸಲು ಹೆದ್ದಾರಿ ನಕ್ಷೆಯನ್ನು ಬದಲಿ ಕಡಿಮೆ ಪರಿಹಾರ ಕೊಡುವಂತೆ ಮಾಡಿಕೊಂಡ ಉದಾಹರಣೆ ಬಹಳ ಕಡೆ ಇದೆ. ಅಲ್ಲದೇ ಶಿರಾಲಿ, ಭಟ್ಕಳ ನಗರ, ಹಳದೀಪುರದಂತಹ ಪ್ರದೇಶದಲ್ಲಿ ಹೆದ್ದಾರಿಯನ್ನು ಇನ್ನೂ ಅಗಲೀಕರಣಗೊಳಿಸಿದರೆ ಇಡೀ ನಗರವೇ ಇಲ್ಲವಾಗುವುದು. ಮತ್ತೆ ನಗರ ನಿರ್ಮಾಣಕ್ಕೆ ಹತ್ತಾರು ವರ್ಷಗಳೇ ಬೇಕಾಗಬಹುದು ಎಂದ ಅವರು, ಇಷ್ಟಕ್ಕೂ ಹೆದ್ದಾರಿ ಅಗಲಗೊಳಿಸುವುದು, ಇಲ್ಲವೇ ಕಿರಿದಾಗಿಸುವುದರಿಂದ ದೇಶಪಾಂಡೆಯವರಿಗೇನು ಲಾಭ? ಅವರು ಐ.ಆರ್.ಬಿ. ಕಂಪೆನಿಯ ಶೇರುದಾರರೂ ಅಲ್ಲ, ಪಾಲುದಾರರೂ ಅಲ್ಲ ಎಂದು ತಿರುಗೇಟು ನೀಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಮಾ ಮೊಗೇರ ಅವರು ಹಿರಿಯ ರಾಜಕಾರಣಿ ಆರ್.ವಿ.ದೇಶಪಾಂಡೆಯವರ ಕುರಿತು ಸುನಿಲ್ ನಾಯ್ಕ ಮಾಡಿದ ಆರೋಪವನ್ನು ವಾಪಾಸು ಪಡೆಯಬೇಕು. ಜಿಲ್ಲೆಯ ಅಭಿವೃದ್ಧಿಗೆ ದೇಶಪಾಂಡೆಯವರ ಕೊಡುಗೆಯನ್ನು ಯಾರೂ ಅಲ್ಲಗಳೆಯಲಾರರು ಎಂದರು. 

ಈ ಸಂದರ್ಭದಲ್ಲಿ ಎಫ್. ಕೆ. ಮೊಗೇರ, ವೆಂಕ್ಟಯ್ಯ ಭೈರುಮನೆ, ಮಹೇಶ ನಾಯ್ಕ, ಕರೀಮ್ ಸಾಬ್, ನಾಗೇಶ ದೇವಡಿಗ, ಸಚಿನ್ ನಾಯ್ಕ, ಸುಲೇಮಾನ್ ಕೆ., ಮುಂತಾದವರು ಉಪಸ್ಥಿತರಿದ್ದರು.  
 







 




 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X