ಪತಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕೋಟೂರು

ಬೆಂಗಳೂರು, ಎ.13: ಮದುವೆಯಾದರೂ ತನ್ನೊಂದಿಗೆ ಸಂಸಾರ ನಡೆಸುತ್ತಿಲ್ಲ ಎಂದು ಆರೋಪಿಸಿ ಬಿಗ್ ಬಾಸ್-7 ಸೀಸನ್ ಸ್ಪರ್ಧಿಯಾಗಿದ್ದ ಚೈತ್ರಾ ಕೊಟೂರು ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪತಿ ನಾಗಾರ್ಜುನ್ ವಿರುದ್ಧ ಪತ್ನಿ ದೂರು ನೀಡಿದ ಮೇರೆಗೆ ಬಸವನಗುಡಿ ಮಹಿಳಾ ಪೊಲೀಸರು ಗಂಭೀರ ಸ್ವರೂಪವಲ್ಲದ ಅಪರಾಧ (ಎನ್ಸಿಆರ್) ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮದುವೆಯಾಗಿ ವಂಚನೆ ಮಾಡಿರುವ ನಾಗಾರ್ಜುನ್ ತನ್ನ ಜೊತೆ ಸಂಸಾರ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಅವರನ್ನ ಕರೆಸಿ ಬುದ್ಧಿವಾದ ಹೇಳಿ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Next Story





