Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಎವರ್ ಗಿವನ್’ನಿಂದ 900 ಮಿಲಿಯ ಡಾ....

‘ಎವರ್ ಗಿವನ್’ನಿಂದ 900 ಮಿಲಿಯ ಡಾ. ಪರಿಹಾರ ಕೋರಿದ ಸೂಯೆಝ್ ಪ್ರಾಧಿಕಾರ

ಪರಿಹಾರ ಪಾವತಿವರೆಗೆ ಹಡಗು ಮುಟ್ಟುಗೋಲು

ವಾರ್ತಾಭಾರತಿವಾರ್ತಾಭಾರತಿ14 April 2021 8:54 PM IST
share
‘ಎವರ್ ಗಿವನ್’ನಿಂದ 900 ಮಿಲಿಯ ಡಾ. ಪರಿಹಾರ ಕೋರಿದ ಸೂಯೆಝ್ ಪ್ರಾಧಿಕಾರ

ಕೈರೋ (ಈಜಿಪ್ಟ್), ಎ. 14: ಸುಮಾರು ಒಂದು ವಾರ ಕಾಲ ಸೂಯೆಝ್ ಕಾಲುವೆಯಲ್ಲಿ ಅಡ್ಡಕ್ಕೆ ಸಿಕ್ಕಿಹಾಕಿಕೊಂಡು ಸರಕು ಹಡಗುಗಳ ಸಂಚಾರವನ್ನು ತಡೆಹಿಡಿದ ದೈತ್ಯ ಹಡಗು ‘ಎವರ್ ಗಿವನ್’ನ ಮಾಲೀಕರು 900 ಮಿಲಿಯ ಡಾಲರ್ (ಸುಮಾರು 6,760 ಕೋಟಿ ರೂಪಾಯಿ) ಪರಿಹಾರ ನೀಡಬೇಕು ಎಂದು ಸೂಯೆಝ್ ಕಾಲುವೆ ಪ್ರಾಧಿಕಾರದ ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಅದೇ ವೇಳೆ, ಹಡಗು ಕಂಪೆನಿಯು ಪರಿಹಾರ ನೀಡುವವರೆಗೆ, ನ್ಯಾಯಾಲಯದ ಆದೇಶದಂತೆ ಹಡಗನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

2 ಲಕ್ಷ ಟನ್ ಭಾರದ ಹಡಗು ಸೂಯೆಝ್ ಕಾಲುವೆಯಲ್ಲಿ ಸಾಗುತ್ತಿದ್ದಾಗ ಮಾರ್ಚ್ 23ರಂದು ಬಿರುಗಾಳಿಗೆ ಸಿಲುಕಿ ಅಡ್ಡಕ್ಕೆ ಸಿಕ್ಕಿಹಾಕಿಕೊಂಡಿತ್ತು. ಅದನ್ನು ಬಿಡಿಸಲು ಆರು ದಿನಗಳ ನಿರಂತರ ಪ್ರಯತ್ನಗಳು ನಡೆದಿದ್ದವು.

ಇದರಿಂದಾಗಿ ಪ್ರತಿದಿನ ಯುರೋಪ್ ಮತ್ತು ಏಶ್ಯ ನಡುವೆ ಸಾಗುವ 9.6 ಬಿಲಿಯ ಡಾಲರ್ (ಸುಮಾರು 72,130 ಕೋಟಿ ರೂಪಾಯಿ) ಮೌಲ್ಯದ ಸರಕು ಬಾಕಿಯಾಗಿತ್ತು ಎಂದು ಸಮುದ್ರಯಾನ ದತ್ತಾಂಶ ಕಂಪೆನಿ ‘ಲಾಯ್ಡ್ಸಾ ಲಿಸ್ಟ್’ ಹೇಳಿದೆ. ಅದೂ ಅಲ್ಲದೆ, ಈ ಅವಧಿಯಲ್ಲಿ, ಕಾಲುವೆಯ ಬಳಕೆಗಾಗಿ ಈಜಿಪ್ಟ್‌ಗೆ ಪತಿ ದಿನ ಬರಬೇಕಾಗಿದ್ದ 12 (ಸುಮಾರು 90 ಕೋಟಿ ರೂಪಾಯಿ)ರಿಂದ 15 ಮಿಲಿಯ ಡಾಲರ್ (ಸುಮಾರು 113 ಕೋಟಿ ರೂಪಾಯಿ) ವರಮಾನವೂ ನಷ್ಟವಾಗಿದೆ.

900 ಮಿಲಿಯ ಡಾಲರ್ ಪರಿಹಾರ ನೀಡಲು ಹಡಗು ಕಂಪೆನಿಯು ವಿಫಲವಾಗಿರುವುದರಿಂದ ಹಡಗನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೂಯೆಝ್ ಕಾಲುವೆ ಪ್ರಾಧಿಕಾರದ ಅಧ್ಯಕ್ಷ ಉಸಾಮ ರಾಬಿಈ ಹೇಳಿರುವುದಾಗಿ ಈಜಿಪ್ಟ್‌ನ ಸರಕಾರಿ ಒಡೆತನದ ಪತ್ರಿಕೆ ‘ಅಲ್-ಅಹ್ರಮ್’ ವರದಿ ಮಾಡಿದೆ.

ನ್ಯಾಯಾಲಯಕ್ಕೆ ಹೋಗುವ ಇಂಗಿತ ವ್ಯಕ್ತಪಡಿಸಿದ ಹಡಗು ಕಂಪೆನಿ

‘ಎಂವಿ ಎವರ್ ಗಿವನ್’ ಹಡಗು ಸೂಯೆಝ್ ಕಾಲುವೆಯನ್ನು ಆರು ದಿನಗಳ ಕಾಲ ತಡೆದಿರುವುದಕ್ಕಾಗಿ 900 ಮಿಲಿಯ ಡಾಲರ್ ಪರಿಹಾರ ಕೋರಿರುವ ವಿಚಾರದಲ್ಲಿ ಈಜಿಪ್ಟ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಹಡಗಿನ ಜಪಾನ್ ಮಾಲೀಕರು ಹೇಳಿದ್ದಾರೆ.

‘‘ಹಡಗಿನ ಹಣೆಬರಹ ಇನ್ನು ನ್ಯಾಯಾಲಯದಲ್ಲಿ ಇತ್ಯರ್ಥಗೊಳ್ಳಬೇಕಾಗಿದೆ’’ ಎಂದು ಹಡಗಿನ ಮಾಲೀಕ ಕಂಪೆನಿಯ ವಕ್ತಾರೆಯೊಬ್ಬರು ಬುಧವಾರ ಎಎಫ್‌ಪಿ ಸುದ್ದಿಸಂಸ್ಥೆಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X