Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಚ್ಚನಾಡಿ ಪ್ರದೇಶವನ್ನು ‘ಇಕೋ ಸ್ನೇಹಿ...

ಪಚ್ಚನಾಡಿ ಪ್ರದೇಶವನ್ನು ‘ಇಕೋ ಸ್ನೇಹಿ ವಲಯ’ವನ್ನಾಗಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ14 April 2021 9:25 PM IST
share
ಪಚ್ಚನಾಡಿ ಪ್ರದೇಶವನ್ನು ‘ಇಕೋ ಸ್ನೇಹಿ ವಲಯ’ವನ್ನಾಗಿಸಲು ಮನವಿ

ಮಂಗಳೂರು, ಎ.14: ಪದೇ ಪದೇ ಚರ್ಚೆಯ ಕೇಂದ್ರ ಬಿಂದುವಾಗುತ್ತಿರುವ ಪಚ್ಚನಾಡಿ ಕಸ ವಿಲೇವಾರಿ ಕೇಂದ್ರವನ್ನು ‘ಇಕೋ ಸ್ನೇಹಿ ವಲಯ’ವನ್ನಾಗಿಸಬೇಕು ಎಂದು ಪಚ್ಚನಾಡಿ ಸಂರಕ್ಷಣಾ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

 ಇತ್ತೀಚೆಗೆ ಸಂಭವಿಸಿದ ದುರಂತವು ಎಲ್ಲರಿಗೂ ಪಾಠವಾಗಬೇಕು. ಯಾಕೆಂದರೆ ಇಲ್ಲಿ ಬೆಂಕಿ ಅವಘಡ ಸಂಭವಿಸಿರುವುದು ಇದು ಮೊದಲನೆಯದಲ್ಲ. ಕಳೆದ ವರ್ಷ ವಿಲೇವಾರಿ ಕೆಂದ್ರದ ಮುಂಭಾಗ ಕಸದ ರಾಶಿಗೆ ಬೆಂಕಿ ಬಿದ್ದಿತ್ತು. ಇದರಿಂದ ದಟ್ಟವಾದ ಹೊಗೆ ಮತ್ತು ಪರಿಸರ ಮಾಲಿನ್ಯದಿಂದಾಗಿ ಸುತ್ತಮುತ್ತಲಿನ ಜನ 3 ದಿನಗಳ ಕಾಲ ಸಂಕಷ್ಟ ಅನುಭವಿಸಿದ್ದರು. ಮೊನ್ನೆಯ ಬೆಂಕಿ ಅವಘಡದಿಂದ ದಟ್ಟ ಹೊಗೆಯು ಪರಿಸರದ ನೂರಾರು ಮನೆಯೊಳಗೆ ಸೇರಿ ಜನರು ಪರದಾಡುವಂತಾಗಿತ್ತು. ಅಲ್ಲದೆ ಅನೇಕ ಮಂದಿ ಉಸಿರಾಟದ ತೊಂದರೆಗೂ ಒಳಗಾಗಿದ್ದಾರೆ. ಈ ವಿಲೇವಾರಿ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದರೆ ಬೆಂಕಿ ನಂದಿಸಲು ಸಮರ್ಪಕ ವ್ಯವಸ್ಥೆಗಳಿಲ್ಲ. ಸೂಕ್ತ ಬೆಳಕಿನ ವ್ಯವಸ್ಥೆಯೂ ಇಲ್ಲ. ಇಲ್ಲಿ ಪ್ಲಾಸ್ಟಿಕ್ ಜೊತೆಗೆ ರಸಾಯನಿಕ ಪದಾರ್ಥಗಳನ್ನು ಉಪಯೋಗಿಸಿದ ವಸ್ತುಗಳೂ ಬರುತ್ತವೆ. ಇದಕ್ಕೆ ಬೆಂಕಿ ಬಿದ್ದಾಗ ಬರುವ ಹೊಗೆ ಅಪಾಯಕಾರಿಯಾಗಿದೆ. ಇಲ್ಲಿನ ಪೂರ್ಣ ಪ್ರಮಾಣದ ಕಸಕ್ಕೆ ಬೆಂಕಿ ಬಿದ್ದರೆ ಭಾರೀ ಸಾವು ನೋವು ಸಂಭವಿಸಬಹುದು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಹಾಗಾಗಿ ಇಲ್ಲಿ ಜಾಸ್ತಿ ಕಸ ಶೇಖರಣೆ ಮಾಡಬಾರದು. ಕಸದ ರಾಶಿ ಆಗಾಗ ವಿಲೇವಾರಿ ಮಾಡಬೇಕು. ಘಟಕದೊಳಗೆ ಪ್ರಖರ ವಿದ್ಯುತ್ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಬೆಂಕಿ ನಂದಿಸಲು ಭಾರೀ ಗಾತ್ರದ ನೀರಿನ ಪೈಪ್ ಜೋಡಿಸಬೇಕು. ಘಟಕದೊಳಗೆ ಸಿಸಿ ಕ್ಯಾಮರಾ ಅಳವಡಿಸಬೇಕು. ಘಟಕದ ಹಿಂಭಾಗದ ಮೈದಾನ ಪ್ರದೇಶಕ್ಕೆ ತಾಗಿಕೊಂಡಿರುವ ಕಾಂಪೌಂಡ್ ಎತ್ತರಿಸಬೇಕು. ಅಗ್ನಿ ಶಾಮಕದಳದ ವಾಹನಗಳು ಘಟಕದೊಳಗೆ ಸರಾಗವಾಗಿ ಹೋಗುವಂತೆ ವ್ಯವಸ್ಥೆ ಮಾಡಬೇಕು. ರಜಾ ದಿನಗಳಲ್ಲಿ ವಿಲೇವಾರಿ ಘಟಕದ ಮೇಲೆ ಕಣ್ಗಾವಲು ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ನಿಯೋಗ ಮನವಿ ಮಾಡಿದೆ.

 ಸಮಿತಿಯ ಮುಖಂಡರಾದ ಎಂಜಿ ಹೆಗಡೆ. ಬಿಎಸ್ ಚಂದ್ರು, ಸ್ಟಾನ್ಲಿ ಆಲ್ವಾರಿಸ್, ವೆರೋನಿಕಾ ಪಿಂಟೋ, ಸಂದೇಶ್ ಸಂತೋಷ್ ನಗರ, ಸಜಿತ್ ಸಂತೋಷ್ ನಗರ, ಅಜಿತ್ ವಾಮಂಜೂರು, ಶಿವಪ್ಪ ಪಚ್ಚನಾಡಿ, ವಿಲ್ಸನ್ ವಾಮಂಜೂರು, ನವೀನ್ ಸಂತೋಷ್ ನಗರ, ಹರೀಶ್ ಪಚ್ಚನಾಡಿ ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X