Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಸ್ಸಿ-ಎಸ್ಟಿ ಕೆನೆ ಪದರ ಮಹತ್ವದ್ದಲ್ಲ,...

ಎಸ್ಸಿ-ಎಸ್ಟಿ ಕೆನೆ ಪದರ ಮಹತ್ವದ್ದಲ್ಲ, ಅಸಮಾನತೆ ಇನ್ನೂ ನಿಚ್ಚಳವಾಗಿದೆ

ದಲಿತ ಚೇಂಬರ್ ಆಫ್ ಕಾಮರ್ಸ್

ವಾರ್ತಾಭಾರತಿವಾರ್ತಾಭಾರತಿ14 April 2021 10:52 PM IST
share
ಎಸ್ಸಿ-ಎಸ್ಟಿ ಕೆನೆ ಪದರ ಮಹತ್ವದ್ದಲ್ಲ, ಅಸಮಾನತೆ ಇನ್ನೂ ನಿಚ್ಚಳವಾಗಿದೆ

ಹೊಸದಿಲ್ಲಿ, ಎ.14: ಮೀಸಲು ವರ್ಗಗಳಲ್ಲಿ ಖಾಲಿ ಹುದ್ದೆಗಳು,ಹೆಚ್ಚುತ್ತಿರುವ ಸಾಮಾಜಿಕ ಅಸಮಾನತೆಗಳು ಮತ್ತು ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿಯ ಅಗತ್ಯ;ಇದು ಸ್ವಾತಂತ್ರ್ಯಾನಂತರದ ಏಳು ದಶಕಗಳಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಏಳಿಗೆಯ ಕುರಿತು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸೂಚನೆಯ ಮೇರೆಗೆ ದಲಿತ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಡಿಐಸಿಸಿಐ)ಯು ಸಿದ್ಧಪಡಿಸಿರುವ ವರದಿಯಲ್ಲಿ ವ್ಯಕ್ತವಾಗಿರುವ ಕೆಲವು ಅಭಿಪ್ರಾಯಗಳು.

ಕೆನೆ ಪದರ ಪರಿಕಲ್ಪನೆಯನ್ನು ತಳ್ಳಹಾಕಿರುವ ವರದಿಯು, 200 ಮಿಲಿಯನ್ಗೂ ಅಧಿಕ ದಲಿತ ಜನಸಂಖ್ಯೆಯಲ್ಲಿ ಕೆನೆ ಪದರದ ಲಾಭವನ್ನು ಪಡೆದುಕೊಂಡವರ ಸಂಖ್ಯೆ ನಗಣ್ಯವಾಗಿದೆ ಎಂದು ಹೇಳಿದೆ.

ಎಸ್ಸಿ ಮತ್ತು ಎಸ್ಟಿಗಳ ನಿಖರ ಸ್ಥಿತಿ ಮತ್ತು ಕಳೆದ ಏಳು ದಶಕಗಳಲ್ಲಿ ಅವರು ಎಲ್ಲಿಗೆ ತಲುಪಿದ್ದಾರೆ ಎನ್ನುವುದರ ವಿಶ್ಲೇಷಣೆಯು ಈ ವರದಿಯ ಗುರಿಯಾಗಿದೆ. ಸರಕಾರವು ನೀತಿ ಬೆಂಬಲವನ್ನು ಸೃಷ್ಟಿಸುವಂತಾಗಲು ಡಿಐಸಿಸಿಐ ಕಳೆದ ಫೆಬ್ರವರಿಯಲ್ಲಿ ಕೆಲವು ಸಲಹೆಗಳೊಂದಿಗೆ ಕರಡು ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸಿತ್ತು. ಅಂತಿಮ ಕರಡನ್ನು ಶೀಘ್ರವೇ ಸಲ್ಲಿಸಲಾಗುವುದು ಎಂದು ಡಿಐಸಿಸಿಐನ ಸ್ಥಾಪಕಾಧ್ಯಕ್ಷ ಮಿಲಿಂದ ಕಾಂಬ್ಳೆ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

 ಸಚಿವಾಲಯವು ಕರಡು ವರದಿಯನ್ನು ಸ್ವೀಕರಿಸಿರುವುದನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕಾರ್ಯದರ್ಶಿ ಆರ್.ಸುಬ್ರಮಣ್ಯಂ ಅವರು ದೃಢಪಡಿಸಿದರು.

ಎಸ್ಸಿ,ಎಸ್ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯಿದ್ದರೂ ಸರಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಈ ಸ್ಥಾನಗಳನ್ನು ಸೂಕ್ತವಾಗಿ ಭರ್ತಿ ಮಾಡಲಾಗಿಲ್ಲ ಎಂದು ವರದಿಯು ಅಂಕಿಸಂಖ್ಯೆಗಳ ಸಹಿತ ವಿವರಿಸಿದೆ.

ಈ ಸಮುದಾಯಗಳ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮುಂದುವರಿದ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಕೆನೆ ಪದರ ಪರಿಕಲ್ಪನೆಯನ್ನು ತಿರಸ್ಕರಿಸಿರುವ ವರದಿಯು,ಇಂತಹ ಯಾವುದೇ ವಿಷಯವೇ ಇಲ್ಲ. ಸರಕಾರಿ ಹುದ್ದೆಗಳಲ್ಲಿರುವ ಪರಿಶಿಷ್ಟ ಜಾತಿಗಳಿಗೆ ಸೇರಿದ ಗ್ರೂಪ್ ಎ ಮತ್ತು ಗ್ರೂಪ್ ಬಿ ನೌಕರರ ಸಂಖ್ಯೆ ಸುಮಾರು 3,38,606ರಷ್ಟಿದೆ. ಸುಮಾರು ಒಂದು ಸಾವಿರ ದಲಿತರು ಶಾಸಕಾಂಗಗಳಲ್ಲಿ ಸ್ಥಾನಗಳನ್ನು ಹೊಂದಿದ್ದಾರೆ. ಇದು ಪರಿಶಿಷ್ಟ ಜಾತಿಗಳ ಕೆನೆಪದರ. 200 ಮಿಲಿಯನ್ ಜನಸಂಖ್ಯೆಗೆ ಇದು ನಗಣ್ಯವಾಗಿದೆ ಎಂದು ವರದಿಯು ತಿಳಿಸಿದೆ.

ಉದ್ಯೋಗಾವಕಾಶಗಳು ಮೀಸಲಾತಿಯ ಸಂಪೂರ್ಣ ಸಾಮರ್ಥ್ಯಕ್ಕೆ ಹೆಚ್ಚಿದರೂ ಅದು ಜನಸಂಖ್ಯೆಯ ಶೇ.1ಕ್ಕಿಂತ ಹೆಚ್ಚಾಗುವುದಿಲ್ಲ. ಇಡೀ ಜನಸಂಖ್ಯೆಗೆ ಲಾಭದಾಯಕವಾಗಲು ನಾವು ಹಲವಾರು ಕ್ಷೇತ್ರಗಳಲ್ಲಿ ಗುರುತಿಸಿರುವ ಉದ್ಯಮಾವಕಾಶಗಳು ಏಕೈಕ ಮೂಲವಾಗಿವೆ ಎಂದು ಡಿಐಸಿಸಿಐ ಅಧ್ಯಕ್ಷ ರವಿಕುಮಾರ ನಾರಾ ಸುದ್ದಿಸಂಸ್ಥಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X