Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಡಿಹಳ್ಳಿ ಚಂದ್ರಶೇಖರ್ ರಿಗೆ ಕಾರ್ಮಿಕರ...

ಕೋಡಿಹಳ್ಳಿ ಚಂದ್ರಶೇಖರ್ ರಿಗೆ ಕಾರ್ಮಿಕರ ಹೋರಾಟದ ಅನುಭವ ಇದ್ದಂತೆ ಕಾಣುತ್ತಿಲ್ಲ: ಆಯನೂರು ಮಂಜುನಾಥ್

ವಾರ್ತಾಭಾರತಿವಾರ್ತಾಭಾರತಿ14 April 2021 11:25 PM IST
share
ಕೋಡಿಹಳ್ಳಿ ಚಂದ್ರಶೇಖರ್ ರಿಗೆ ಕಾರ್ಮಿಕರ ಹೋರಾಟದ ಅನುಭವ ಇದ್ದಂತೆ ಕಾಣುತ್ತಿಲ್ಲ: ಆಯನೂರು ಮಂಜುನಾಥ್

ಶಿವಮೊಗ್ಗ: ಕಾರ್ಮಿಕ ಹೋರಾಟದ ನೇತೃತ್ವ ವಹಿಸುವುದು ಹುಲಿ ಸವಾರಿ ಇದ್ದಂಗೆ, ಹುಲಿಯನ್ನು ರೇಗಿಸಿ ಕೆಳಗಿಳಿದರೆ ಸವಾರನನ್ನೆ ಹುಲಿ ತಿಂದು ಹಾಕುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಕೋಡಿಹಳ್ಳಿ ಚಂದ್ರಶೇಖರ್ ರಿಗೆ ಪರೋಕ್ಷವಾಗಿ ಎಚ್ಚರಿಸಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ರೈತ ಹೋರಾಟದ ಅನುಭವವಿರಬಹುದು. ಆದರೆ ಕಾರ್ಮಿಕರ ಹೋರಾಟದ ಅನುಭವ ಇದ್ದಂತೆ ಕಾಣುತ್ತಿಲ್ಲ. ಕಾರ್ಮಿಕ ಕಾಯ್ದೆಗಳನ್ನು ತಿಳಿದುಕೊಂಡು ಹೋರಾಟಕ್ಕೆ ಇಳಿಯಬೇಕಾಗುತ್ತದೆ. ಹಿಂದೆ ಮಹರಾಷ್ಟ್ರದಲ್ಲಿ ಬಟ್ಟೆಗಿರಣಿ ಕಾರ್ಮಿಕರು 15 ತಿಂಗಳು ಇದೇ ರೀತಿ ಪಟ್ಟುಹಿಡಿದು ಪ್ರತಿಭಟನೆ ಮಾಡಿದ್ದರಿಂದ ಮಿಲ್‌ಗಳು ಬಂದಾಗಿ ಲಕ್ಷಾಂತರ ಕಾರ್ಮಿಕರು ಬೀದಿಗೆ ಬರಬೇಕಾಯಿತು. ಉದ್ಯೋಗ ಕಳೆದುಕೊಂಡರು ದತ್ತ ಸಾವಂತ್ ಎಂಬ ಹೋರಾಟಗಾರನ ಮಾತುಕೇಳಿ ಕಾರ್ಮಿಕರ ಭವಿಷ್ಯ ಕತ್ತಲಲ್ಲಿ ಮುಳುಗಿಹೋಯಿತು. ದತ್ತಾ ಸಾವಂತ್ ಅಂತಿಮ ಫಲಿತಾಂಶ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಬಾರದಿರಲಿ ಎಂದು ಎಚ್ಚರಿಸಿದರು.

ಪ್ರತಿಷ್ಟೆ ಮತ್ತು ಬಿಗಿ ನಿಲುವು ಬೇಡ ಹೋರಾಟದಲ್ಲಿ 2 ಹೆಜ್ಜೆ ಹಿಂದೆ ಇಡುವುದು ಕೂಡ ತಂತ್ರಗಾರಿಕೆಯ ಭಾಗವಾಗಿದೆ. ಈಗಾಗಲೇ ಸಾರಿಗೆ ನೌಕರರ 8 ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಮಾತುಕತೆಗೆ ಸಿ.ಎಂ. ಕರೆದಾಗ ಹೋಗಿ ಮಾತುಕತೆ ಮೂಲಕವೇ ಬಗೆ ಹರಿಸಿಕೊಳ್ಳುವುದು ಒಳಿತು. ನಾನು ರಾಜಕೀಯ ಪಕ್ಷದ ಶಾಸಕನಾಗಿ ಅಥವಾ ಸರ್ಕಾರದ ಪರವಾಗಿ ಮಾತನಾಡುತ್ತಿಲ್ಲ. ಕಾರ್ಮಿಕ ಹೋರಾಟದಿಂದ ಬಂದ ಕಾರಣ ಅನುಭವದ ಮೂಲಕ ಎಚ್ಚರಿಕೆ ನೀಡುತ್ತಿದ್ದೇನೆ ಎಂದರು.

ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ತಟ್ಟೆ ಲೋಟಕ್ಕೆ ಸೀಮಿತವಾಗಲಿ. ಹೋರಾಟದ ನೇತೃತ್ವ ವಹಿಸಿರುವ ನಾಯಕರು ಎಡವಿದರೆ ಕಾರ್ಮಿಕರ ಕೈಯಲ್ಲಿ ಚೊಂಬು ಕೊಡಲಿದ್ದಾರೆ ಎಂದ ಅವರು, ರಾಜ್ಯದಲ್ಲಿ ಕೊರೋನ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಲಾಕ್‌ಡೌನ್ ಮಾಡುವ ಸಾಧ್ಯತೆ ಇದೆ. ಲಾಕ್‌ಡೌನ್ ಆದರೆ ಯಾರಿಗೂ ಕೆಲಸ ಇರುವುದಿಲ್ಲ, ಉದ್ಯೋಗ ಭದ್ರತೆ ಇಲ್ಲದೇ ಸಂಬಳವೂ ಇಲ್ಲದೇ ಜೀವನ ನಡೆಸುವುದು ಕಷ್ಟವಾಗಲಿದೆ. ಹಾಗಾಗಿ ಪ್ರತಿಷ್ಟೆ ಕೈ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X