Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 45 ವರ್ಷದೊಳಗಿನವರಿಗೂ ಕೋವಿಡ್ ಲಸಿಕೆ:...

45 ವರ್ಷದೊಳಗಿನವರಿಗೂ ಕೋವಿಡ್ ಲಸಿಕೆ: ಕೇಂದ್ರ ಸಚಿವ ಸದಾನಂದ ಗೌಡ

ವಾರ್ತಾಭಾರತಿವಾರ್ತಾಭಾರತಿ14 April 2021 11:33 PM IST
share
45 ವರ್ಷದೊಳಗಿನವರಿಗೂ ಕೋವಿಡ್ ಲಸಿಕೆ: ಕೇಂದ್ರ ಸಚಿವ ಸದಾನಂದ ಗೌಡ

ಬೆಂಗಳೂರು, ಎ.14: ಕೇಂದ್ರ ಸರಕಾರವು ಸದ್ಯ 45 ವರ್ಷ ಮೇಲ್ಪಟ್ಟವರಿಗಷ್ಟೇ ಉಚಿತ ಲಸಿಕೆ ಒದಗಿಸುತ್ತಿದೆ. 45 ವರ್ಷದೊಳಗಿನವರಿಗೂ ಲಸಿಕೆ ನೀಡುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಬುಧವಾರ ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆಯ 2ನೇ ಡೋಸ್ ತೆಗೆದುಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 45 ವರ್ಷ ಮೇಲ್ಪಟ್ಟವರೆಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆ ಕರೆ ನೀಡಿದರು.

ದೇಶದಲ್ಲಿ ಕೋವಿಶೀಲ್ಡ್ ಹಾಗೂ ಕೊವಾಕ್ಸಿನ್ ಲಸಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿವೆ. ಇದುವರೆಗೆ ಸುಮಾರು 22 ಕೋಟಿ ಡೋಸ್ ಉತ್ಪಾದನೆ ಮಾಡಲಾಗಿದೆ. ಈಗಾಗಲೇ 11 ರಿಂದ 12 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ. ಕೊರೋನ ನಿಯಂತ್ರಿಸಲು ಭಾರತದ ನೆರವು ಕೇಳಿದ 90 ದೇಶಗಳಿಗೆ 6 ಕೋಟಿ ಡೋಸ್ ಒದಗಿಸಲಾಗಿದೆ ಎಂದು ಅವರು ಹೇಳಿದರು.

ಈಗ ರಷ್ಯಾದಿಂದ ಸ್ಪುಟ್ನಿಕ್-V ಲಸಿಕೆ ಆಮದು ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಇದರಿಂದ ಮುಂಬರುವ ದಿನಗಳಲ್ಲಿ ಲಸಿಕಾ ಅಭಿಯಾನವನ್ನು ಇನ್ನೂ ವೇಗವಾಗಿ ಮತ್ತು ವಿಸ್ತ್ರತವಾಗಿ ಕೈಗೊಳ್ಳಲು ನೆರವಾಗಲಿದೆ ಎಂದು ಸದಾನಂದಗೌಡ ಹೇಳಿದರು.

ಕೊರೋನ ಚಿಕಿತ್ಸೆಯಲ್ಲಿ ಬಳಸುವ ರೆಮ್ಡೆಸಿವಿರ್ ಚುಚ್ಚುಮದ್ದಿನ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಅದರ ರಫ್ತು ನಿಷೇಧಿಸಲಾಗಿದೆ. ದೇಶದ ಏಳು ಫಾರ್ಮಾ ಕಂಪನಿಗಳು ಇದರ ಉತ್ಪಾದನೆಯ ಲೈಸನ್ಸ್ ಹೊಂದಿವೆ. ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹೆಚ್ಚು ದಿನ ಸಂಗ್ರಹಿಸಿಡಲು ಆಗುವುದಿಲ್ಲ. ಮೂರು ತಿಂಗಳೊಳಗೇ ಅದರ ಬಳಕೆಯಾಗಬೇಕು ಎಂದು ಅವರು ತಿಳಿಸಿದರು.

ದೇಶೀಯವಾಗಿ ಬೇಡಿಕೆ ಕಡಿಮೆಯಾಗಿದ್ದರಿಂದ ತಮ್ಮಲ್ಲಿರುವ ದಾಸ್ತಾನನ್ನು ಈ ಕಂಪನಿಗಳು ರಫ್ತು ಮಾಡುತ್ತಿದ್ದವು. ಉತ್ಪಾದನೆಯನ್ನೂ ಕಡಿತಗೊಳಿಸಿದ್ದವು. ಆದರೆ ಈಗ ಸೋಂಕು ಹೆಚ್ಚಾಗುತ್ತಿರುವುದರಿಂದ ಉತ್ಪಾದನೆಯನ್ನು ಹೆಚ್ಚಿಸುವಂತೆ ಈ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಫಾರ್ಮಾಸ್ಯುಟಿಕಲ್ ಇಲಾಖೆಯನ್ನೂ ನಿರ್ವಹಿಸುವ ಸದಾನಂದ ಗೌಡ ಹೇಳಿದರು.

ಲಸಿಕಾ ಅಭಿಯಾನ ಅತ್ಯಂತ ಚೆನ್ನಾಗಿಯೇ ನಡೆದಿದೆ. ಹೆಚ್ಚೆಚ್ಚು ಜನರಿಗೆ ಲಸಿಕೆ ನೀಡುವುದಷ್ಟೇ ಇದರ ಉದ್ದೇಶ ಅಲ್ಲ. ಇದರ ಬಗ್ಗೆ ಅಪನಂಬಿಕೆ ವ್ಯಕ್ತಪಡಿಸುವಂತಹ ಕೆಲಸಗಳು ಆಗಬಾರದು. ಮೊದಲ ಡೋಸ್ ತೆಗೆದುಕೊಂಡ ಸುಮಾರು 40 ದಿನಗಳ ನಂತರ ನಾನು ಈಗ ಎರಡನೇ ಡೋಸ್ ತೆಗೆದುಕೊಂಡಿದ್ದೇನೆ. ಯಾವುದೇ ಅಡ್ಡ ಪರಿಣಾಮವಾಗಿಲ್ಲ ಎಂದ ಅವರು, ಇದೇ ವೇಳೆ ಸುಮಾರು 11 ಸಾವಿರ ಜನರಿಗೆ ಯಶಸ್ವಿಯಾಗಿ ಲಸಿಕೆ ಹಾಕಿದ ಕೆ.ಸಿ.ಜನರಲ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯನ್ನು ಅಭಿನಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X