Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫ್ಘಾನ್ ನಿರ್ಮಾಣದಲ್ಲಿ ಭಾರತ, ಪಾಕ್,...

ಅಫ್ಘಾನ್ ನಿರ್ಮಾಣದಲ್ಲಿ ಭಾರತ, ಪಾಕ್, ರಶ್ಯಕ್ಕೆ ಪ್ರಮುಖ ಪಾತ್ರ: ಬೈಡನ್

ವಾರ್ತಾಭಾರತಿವಾರ್ತಾಭಾರತಿ15 April 2021 9:02 PM IST
share
ಅಫ್ಘಾನ್ ನಿರ್ಮಾಣದಲ್ಲಿ ಭಾರತ, ಪಾಕ್, ರಶ್ಯಕ್ಕೆ ಪ್ರಮುಖ ಪಾತ್ರ: ಬೈಡನ್

ವಾಶಿಂಗ್ಟನ್, ಎ. 15: ಸುಭದ್ರ ಅಫ್ಘಾನಿಸ್ತಾನದ ಪುನರ್ ನಿರ್ಮಾಣದಲ್ಲಿ ಭಾರತ, ಪಾಕಿಸ್ತಾನ, ರಶ್ಯ, ಚೀನಾ ಮತ್ತು ಟರ್ಕಿಗಳು ಪ್ರಮುಖ ಪಾತ್ರ ವಹಿಸಬೇಕಾಗಿವೆ ಎಂದು ಅವೆುರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಹಾಗಾಗಿ, ಯುದ್ಧಗ್ರಸ್ತ ದೇಶಕ್ಕೆ ಶಾಂತಿಯನ್ನು ಮರಳಿಸುವಲ್ಲಿ ಈ ದೇಶಗಳು ಇನ್ನೂ ಹೆಚ್ಚಿನ ಪ್ರಯತ್ನಗಳನ್ನು ಮಾಡಬೇಕಾದ ಅಗತ್ಯವಿದೆ ಎಂಬುದಾಗಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ವರ್ಷದ ಸೆಪ್ಟಂಬರ್ 11ರ ವೇಳೆಗೆ ಅಫ್ಘಾನಿಸ್ತಾನದಲ್ಲಿರುವ ಅಮೆರಿಕದ ಎಲ್ಲ ಸೈನಿಕರು ವಾಪಸಾಗಲಿದ್ದಾರೆ.

‘‘ಅಫ್ಘಾನಿಸ್ತಾನವನ್ನು ಆಧರಿಸಲು ಹೆಚ್ಚಿನದನ್ನು ಮಾಡಬೇಕು ಎಂದು ನಾವು ಈ ವಲಯದಲ್ಲಿರುವ ದೇಶಗಳು, ಅದರಲ್ಲೂ ಮುಖ್ಯವಾಗಿ ಪಾಕಿಸ್ತಾನ, ರಶ್ಯ, ಚೀನಾ, ಭಾರತ ಮತ್ತು ಟರ್ಕಿಗಳನ್ನು ಒತ್ತಾಯಿಸುತ್ತೇವೆ. ಭವಿಷ್ಯದ ಸುಭದ್ರ ಅಫ್ಘಾನಿಸ್ತಾನವು ಈ ದೇಶಗಳ ಹಿತಾಸಕ್ತಿಗೆ ಪೂರಕವಾಗಿದೆ’’ ಎಂದು ಬುಧವಾರ ಶ್ವೇತಭವನದಿಂದ ದೇಶವನ್ನುದ್ದೇಶಿಸಿ ಟಿವಿಯಲ್ಲಿ ಮಾಡಿದ ಭಾಷಣದಲ್ಲಿ ಬೈಡನ್ ಹೇಳಿದರು.

 ಈ ವರ್ಷದ ಸೆಪ್ಟಂಬರ್ 11ರ ವೇಳೆಗೆ ಅಫ್ಘಾನಿಸ್ತಾನದಲ್ಲಿರುವ ಎಲ್ಲ ಅಮೆರಿಕನ್ ಸೈನಿಕರನ್ನು ವಾಪಸ್ ಕರೆಸಿಕೊಳ್ಳುವುದಾಗಿ ಬೈಡನ್ ಈಗಾಗಲೇ ಘೋಷಿಸಿದ್ದಾರೆ. ಆ ವೇಳೆಗೆ, ಅಮೆರಿಕದ ಮೇಲೆ ಅಲ್-ಖಾಯಿದ ಭಯೋತ್ಪಾದಕರು ನಡೆಸಿದ ದಾಳಿಗೆ 20 ವರ್ಷಗಳು ಪೂರ್ಣಗೊಳ್ಳುತ್ತವೆ. ಈ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಅಂದಿನ ತಾಲಿಬಾನ್ ಸರಕಾರದ ನಿಯಂತ್ರಣದಲ್ಲಿದ್ದ ಅಫ್ಘಾನಿಸ್ತಾನದ ಮೇಲೆ ದಾಳಿ ಮಾಡಿತ್ತು.

ಈಗ ಅಫ್ಘಾನಿಸ್ತಾನದಲ್ಲಿ 2,500ಕ್ಕೂ ಅಧಿಕ ಅಮೆರಿಕ ಸೈನಿಕರಿದ್ದಾರೆ. ಬರಾಕ್ ಒಬಾಮ ಆಡಳಿತದ ವೇಳೆ ಅಲ್ಲಿ ಒಂದು ಲಕ್ಷಕ್ಕೂ ಅಧಿಕ ಅಮೆರಿಕ ಸೈನಿಕರಿದ್ದರು.

 ಅಫ್ಘಾನಿಸ್ತಾನದಲ್ಲಿ ಪ್ರಸಕ್ತ ನೆಲೆಸಿರುವ ವಿವಾದಕ್ಕೆ ಸೈನಿಕ ಪರಿಹಾರವಿಲ್ಲ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ಈ ಸಮಸ್ಯೆಗೆ ರಾಜತಾಂತ್ರಿಕ ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಎಂದು ಅವರು ಪ್ರತಿಪಾದಿಸಿದರು.

ಇದು ಬಹು-ತಲೆಮಾರಿನ ಯುದ್ಧವಲ್ಲ

‘‘ಅಫ್ಘಾನಿಸ್ತಾನ ಯುದ್ಧವು ಬಹು-ತಲೆಮಾರಿನ ಕಾರ್ಯಯೋಜನೆಯಲ್ಲ. ನಮ್ಮ ಮೇಲೆ ದಾಳಿ ಮಾಡಲಾಯಿತು. ನಾವು ಸ್ಪಷ್ಟ ಗುರಿಗಳನ್ನು ಇಟ್ಟು ಯುದ್ಧ ಮಾಡಿದೆವು. ಆ ಗುರಿಗಳನ್ನು ನಾವು ಸಾಧಿಸಿದ್ದೇವೆ’’ ಎಂದು ಬೈಡನ್ ಹೇಳಿದರು.

‘‘ಅಲ್-ಖಾಯಿದ ನಾಯಕ ಉಸಾಮ ಬಿನ್ ಲಾದನ್‌ನನ್ನು 2011ರಲ್ಲಿ ಅಮೆರಿಕದ ಪಡೆಗಳು ಕೊಂದವು ಹಾಗೂ ಆ ಸಂಘಟನೆಯನ್ನು ಈಗ ಅಫ್ಘಾನಿಸ್ತಾನದಲ್ಲಿ ಕೆಳ ದರ್ಜೆಗೆ ಇಳಿಸಲಾಗಿದೆ’’ ಎಂದರು.

ಮೊದಲ 3 ತಿಂಗಳಲ್ಲಿ 1,800 ನಾಗರಿಕರ ಸಾವು-ನೋವು

ಕಾಬೂಲ್ (ಅಫ್ಘಾನಿಸ್ತಾನ), ಎ. 15: ಅಫ್ಘಾನಿಸ್ತಾನದಲ್ಲಿ ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿರುವಂತೆಯೇ, 2021ರ ಮೊದಲ ಮೂರು ತಿಂಗಳಲ್ಲಿ ಸರಕಾರಿ ಪಡೆಗಳು ಮತ್ತು ತಾಲಿಬಾನ್ ಉಗ್ರರ ನಡುವೆ ನಡೆದ ಸಂಘರ್ಷದಲ್ಲಿ ಸುಮಾರು 1,800 ನಾಗರಿಕರು ಮೃತಪಟ್ಟಿದ್ದಾರೆ ಅಥವಾ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ಬುಧವಾರ ತಿಳಿಸಿದೆ.

ಜನವರಿಯಿಂದ ಮಾರ್ಚ್ ತಿಂಗಳ ಕೊನೆಯವರೆಗೆ, 573 ನಾಗರಿಕರು ಹತರಾಗಿದ್ದಾರೆ ಹಾಗೂ 1,210 ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಅಫ್ಘಾನಿಸ್ತಾನದಲ್ಲಿರುವ ತಂಡ ವರದಿಯೊಂದರಲ್ಲಿ ಹೇಳಿದೆ. ಇದು ಕಳೆದ ವರ್ಷದ ಇದೇ ಅವಧಿಯಲ್ಲಿ ದಾಖಲಾದ ಅಂಕಿಸಂಖ್ಯೆಗಳಿಗಿಂತ 29 ಶೇಕಡ ಹೆಚ್ಚಳವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X