Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾತಿ ಆಧಾರಿತ ತಾರತಮ್ಯ...

ಜಾತಿ ಆಧಾರಿತ ತಾರತಮ್ಯ ಮುಚ್ಚುಮರೆಯಿಲ್ಲದೆ ವ್ಯವಸ್ಥೆಯಲ್ಲೇ ಬೇರುಬಿಟ್ಟಿದೆ: ನ್ಯಾ ಡಿ.ವೈ ಚಂದ್ರಚೂಡ್

ವಾರ್ತಾಭಾರತಿವಾರ್ತಾಭಾರತಿ15 April 2021 10:24 PM IST
share
ಜಾತಿ ಆಧಾರಿತ ತಾರತಮ್ಯ ಮುಚ್ಚುಮರೆಯಿಲ್ಲದೆ ವ್ಯವಸ್ಥೆಯಲ್ಲೇ ಬೇರುಬಿಟ್ಟಿದೆ: ನ್ಯಾ ಡಿ.ವೈ ಚಂದ್ರಚೂಡ್

ಹೊಸದಿಲ್ಲಿ, ಎ.15: ಅಸ್ಪಶ್ಯತೆ ಮತ್ತಿತರ ಕೆಟ್ಟ ಆಚರಣೆಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ್ದರಿಂದ ಸಂವಿಧಾನ ರಚನೆಯಾಗಿ 70ಕ್ಕೂ ಹೆಚ್ಚು ವರ್ಷ ಕಳೆದ ಬಳಿಕ ದೇಶದಲ್ಲಿ ಜಾತಿ ಆಧಾರಿತ ತಾರತಮ್ಯ ಅಸ್ತಿತ್ವದಲ್ಲಿಲ್ಲ ಎಂದು ಕೆಲವರು ವಾದಿಸಬಹುದು. ಆದರೆ ಮುಚ್ಚುಮರೆಯಿಲ್ಲದ, ಪ್ರತ್ಯಕ್ಷ ತಾರತಮ್ಯವು ಈಗ ನಮ್ಮ ಸಮಾಜದ ವ್ಯವಸ್ಥೆಯಲ್ಲೇ ಬೇರುಬಿಟ್ಟಿದೆ ಎಂದು ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಹೇಳಿದ್ದಾರೆ.

ಬಹಿರಂಗ ತಾರತಮ್ಯವು ಈಗ ವ್ಯವಸ್ಥಿತ ರೂಪದಲ್ಲಿದೆ. ಜಾತಿವಾದಿ, ಸಮರ್ಥರ ಪರವಾಗಿರುವ, ಲಿಂಗವಾದಿ ಶ್ರೇಣಿ ವ್ಯವಸ್ಥೆ ನೆಲೆಸಿದೆ ಎಂದವರು ಹೇಳಿದ್ದಾರೆ. ನ್ಯಾಯವಾದಿಗಳು, ಕಾನೂನು ಸಂಸ್ಥೆಗಳು, ನ್ಯಾಯಾಧೀಶರು ಹಾಗೂ ದೇಶದ ಕಾನೂನು ವೃತ್ತಿಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಕೆಲಸ ಮಾಡುವವರ ಜಾಲಬಂಧ(ನೆಟ್ವರ್ಕ್) ‘ಕಮ್ಯುನಿಟಿ ಫಾರ್ ದಿ ಇರಾಡಿಕೇಷನ್ ಆಫ್ ಡಿಸ್ಕ್ರಿಮಿನೇಷನ್ ಇನ್ ಎಜುಕೇಶನ್ ಆ್ಯಂಡ್ ಎಂಪ್ಲಾಯ್ಮೆಂಟ್(ಸಿಇಡಿಇ)’ನ ಉದ್ಘಾಟನಾ ಕಾರ್ಯಕ್ರಮದಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಉದ್ಯೋಗದ ಸ್ಥಳಗಳಲ್ಲಿ ಮಹಿಳೆಯರು ಕೆಲವು ಕೆಲಸಗಳಿಗೆ ಸಮರ್ಥರಲ್ಲ ಎಂದು ಗ್ರಹಿಸಿ ಕೆಳದರ್ಜೆಯ ಹುದ್ದೆ ನೀಡುವುದು, ಕಡಿಮೆ ವೇತನ, ಹೆಚ್ಚುವರಿ ಕೆಲಸ ನೀಡುವುದು ಮತ್ತಿತರ ಪ್ರಕ್ರಿಯೆಗಳು ಈಗಲೂ ಮುಂದುವರಿದಿದೆ. ಸೇನಾಪಡೆಯಲ್ಲಿ ಮಹಿಳೆಯರನ್ನು ಖಾಯಂ ಸೇವೆಯ ಹುದ್ದೆಗಳಿಗೆ ಪ್ರತಿಬಂಧಿಸಿರುವ ಬಗ್ಗೆ ಸುಪ್ರೀಂಕೋರ್ಟ್ ಕಳೆದ ವರ್ಷ ಬಬಿತಾ ಪೂನಿಯಾ ಪ್ರಕರಣದಲ್ಲಿ ಪ್ರಶ್ನಿಸಿ ಈ ತಾರತಮ್ಯವನ್ನು ಕೊನೆಗೊಳಿಸುವಂತೆ ಸೂಚಿಸಿದೆ ಎಂದು ಚಂದ್ರಚೂಡ್ ಉಲ್ಲೇಖಿಸಿದರು.  

ಕಾನೂನು ಶಾಲೆಗಳಿಗೆ ಸೇರುವ ಮುನ್ನವೇ ತಾರತಮ್ಯ ಆರಂಭವಾಗುತ್ತದೆ. ಪ್ರವೇಶ ಪರೀಕ್ಷೆ ಇಂಗ್ಲಿಷ್ನಲ್ಲಿ ಮಾತ್ರ ಇರುತ್ತದೆ. ಉನ್ನತ ಗುಣಮಟ್ಟದ ಇಂಗ್ಲಿಷ್ ಮಾಧ್ಯಮದ ಶಿಕ್ಷಣ ಪಡೆಯಲು ಶಕ್ತರಾದ ಅನುಕೂಲಸ್ತರ, ಸ್ಥಿತಿವಂತರ ಮಕ್ಕಳು ಮಾತ್ರ ಅರ್ಹತೆ ಪಡೆಯಲಿ ಎಂಬುದು ಇದರ ಉದ್ದೇಶವಾಗಿರುತ್ತದೆ. ಇಂಗ್ಲಿಷ್ ಮಾಧ್ಯಮದ ಶಿಕ್ಷಣ ಪಡೆಯಲು ಸಾಧ್ಯವಾಗದ, ಸರಕಾರಿ ಶಾಲೆಯಲ್ಲಿ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ಮುಂದುವರಿಸಿದ ಬಡ, ಮಧ್ಯಮವರ್ಗದ ವಿದ್ಯಾರ್ಥಿಗಳು ಉನ್ನತ ಕಾನೂನು ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯಲು ಸಾಧ್ಯವಾಗದ ವ್ಯವಸ್ಥೆಯಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಮಹಿಳೆಯರ ಪ್ರಾತಿನಿಧ್ಯ ಕಡಿಮೆ ಇರುವುದಕ್ಕೆ ಇದೂ ಪ್ರಮುಖ ಕಾರಣವಾಗಿದೆ.

ಉದ್ಯೋಗ, ಶಿಕ್ಷಣಕ್ಕೆ ಸೇರುವಾಗ ಸಂದರ್ಶನದಲ್ಲಿ ಮಹಿಳೆಯರಲ್ಲಿ ಮದುವೆಯ ಬಗ್ಗೆ, ಮಕ್ಕಳ ಪಾಲನೆ, ಪೋಷಣೆಯ ಬಗ್ಗೆ ಪದೇಪದೇ ಪ್ರಶ್ನಿಸಲಾಗುತ್ತದೆ. ಕಾನೂನು ಪದವಿಯನ್ನು ವೃತ್ತಿಯನ್ನಾಗಿಸಲು ಬಯಸುತ್ತೀರಾ ಅಥವಾ ಕೆಲ ಸಮಯದವರೆಗಿನ ಹವ್ಯಾಸವೆಂದು ಪರಿಗಣಿಸುತ್ತೀರಾ ಎಂದು ಪ್ರಶ್ನಿಸಲಾಗುತ್ತದೆ. ಪುರುಷರನ್ನು ಈ ರೀತಿ ಯಾರೂ ಪ್ರಶ್ನಿಸುವುದಿಲ್ಲ. ಸುಪ್ರೀಂಕೋರ್ಟ್ನಲ್ಲಿ ಕೂಡಾ ಆದಿವಾಸಿಗಳ, ಬಹುಜನರ, ದಲಿತರ, ಮಹಿಳೆಯರ ಅಥವಾ ಅಂಗವಿಕಲರ ಪ್ರಾತಿನಿಧ್ಯ ಅತ್ಯಲ್ಪವಾಗಿದೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X