Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಿಗೆ ನೌಕರರ ವಿರುದ್ಧ 31 ಎಫ್‍ಐಆರ್...

ಸಾರಿಗೆ ನೌಕರರ ವಿರುದ್ಧ 31 ಎಫ್‍ಐಆರ್ ದಾಖಲು: 47 ನೌಕರರ ಬಂಧನ

ವಾರ್ತಾಭಾರತಿವಾರ್ತಾಭಾರತಿ15 April 2021 10:58 PM IST
share
ಸಾರಿಗೆ ನೌಕರರ ವಿರುದ್ಧ 31 ಎಫ್‍ಐಆರ್ ದಾಖಲು: 47 ನೌಕರರ ಬಂಧನ

ಬೆಂಗಳೂರು, ಎ.15: ಬೇಡಿಕೆ ಈಡೇರಿಕೆ ಸಂಬಂಧ ರಾಜ್ಯ ಸರಕಾರ ಸೂಕ್ತ ಭರವಸೆ ನೀಡದ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿದಿದ್ದು, ಎ.15ರಂದು ಸರಕಾರಿ ಬಸ್‍ಗಳಿಗೆ ಕಲ್ಲು ತೂರಿದ ಆರೋಪದ ಮೇಲೆ ಸಾರಿಗೆ ನೌಕರರ ವಿರುದ್ಧ ಪೊಲೀಸರು 31 ಎಫ್‍ಐಆರ್ ಗಳನ್ನು ದಾಖಲಿಸಿದ್ದಾರೆ.

ಗುರುವಾರ ಕೆಎಎಸ್ಸಾರ್ಟಿಸಿ 28, ಬಿಎಂಟಿಸಿ 1, ಎನ್‍ಇಕೆಆರ್‍ಟಿಸಿ 2 ಸೇರಿ ಒಟ್ಟು 31 ಎಫ್‍ಐಆರ್ ಗಳನ್ನು ಸಾರಿಗೆ ನೌಕರರ ವಿರುದ್ಧ ದಾಖಲು ಮಾಡಲಾಗಿದ್ದು, 47 ನೌಕರರನ್ನು ಕೆಸ್ಮಾ ಅಡಿ ಪೊಲೀಸರು ಬಂಧಿಸಿದ್ದಾರೆ.

ಎ.15ರಂದು 2006 ಕೆಎಸ್ಸಾರ್ಟಿಸಿ ಬಸ್‍ಗಳು ಸಂಚರಿಸಿದರೆ, 707 ಬಿಎಂಟಿಸಿ, 786 ಎನ್‍ಇಕೆಆರ್‍ಟಿಸಿ, 644 ಎನ್‍ಡಬ್ಲ್ಯೂಕೆಆರ್‍ಟಿಸಿ ಬಸ್‍ಗಳು ರಾಜ್ಯದಲ್ಲಿ ಸಂಚರಿಸಿವೆ.

2,237 ನೌಕರರ ಹೆಸರು ಉಲ್ಲೇಖಿಸಿ ಆದೇಶ ಹೊರಡಿಸಿದ ಬಿಎಂಟಿಸಿ, 'ಮುಷ್ಕರದಲ್ಲಿ ಪಾಲ್ಗೊಂಡು ಸಾರ್ವಜನಿಕರಿಗೆ ನೌಕರರು ತೊಂದರೆ ಉಂಟುಮಾಡಿದ್ದಾರೆ, ಅಲ್ಲದೇ ಹಿರಿಯ ನೌಕರರಾಗಿ ಸಂಸ್ಥೆ ವಿಶ್ವಾಸ ಕಳೆದುಕೊಂಡು ಸಂಸ್ಥೆಯು ಆರ್ಥಿಕವಾಗಿ ನಷ್ಟ ಅನುಭವಿಸುವಂತೆ ಮಾಡಿದ್ದಾರೆ. ಈ ಹಿನ್ನೆಲೆ 2,237 ಸಾರಿಗೆ ನೌಕರರು ಎ.15ರ ಸಂಜೆ 5ರೊಳಗೆ ತಮ್ಮ ಡಿಪೋಗಳಿಗೆ ಹಾಜರಾಗಬೇಕು. ಜೊತೆಗೆ ಯಾವ ಕಾರಣಕ್ಕೆ ನಿಮ್ಮ ಮೇಲೆ ಶಿಸ್ತು ಕ್ರಮ ಜರುಗಿಸಬಾರದು ಎಂದು ಲಿಖಿತ ಸಮಜಾಯಿಷಿ ನೀಡಬೇಕು' ಎಂದು ಹೇಳಿದ್ದರೂ ನೌಕರರು ಡಿಪೋಗಳಿಗೆ ಹಾಜರಾಗಿ ಸಮಜಾಯಿಷಿ ನೀಡುವ ಕೆಲಸವನ್ನು ಮಾಡಿಲ್ಲ. ಇದರಿಂದ, ಸರಕಾರ ಹಾಗೂ ನೌಕರರ ಮಧ್ಯದ ಪ್ರತಿಷ್ಠೆಯಿಂದಾಗಿ ಜನಸಾಮಾನ್ಯರಿಗೆ ತೊಂದರೆ ಉಂಟಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X