Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಸಣ್ಣ ಮಕ್ಕಳಿಗೆ ಆ್ಯಂಟಿಬಯಾಟಿಕ್‌ಗಳನ್ನು...

ಸಣ್ಣ ಮಕ್ಕಳಿಗೆ ಆ್ಯಂಟಿಬಯಾಟಿಕ್‌ಗಳನ್ನು ನೀಡುವುದನ್ನು ತಪ್ಪಿಸಿ,ಅವು ಹಾನಿಗೆ ಕಾರಣವಾಗುತ್ತವೆ

ವಾರ್ತಾಭಾರತಿವಾರ್ತಾಭಾರತಿ16 April 2021 12:32 AM IST
share
ಸಣ್ಣ ಮಕ್ಕಳಿಗೆ ಆ್ಯಂಟಿಬಯಾಟಿಕ್‌ಗಳನ್ನು ನೀಡುವುದನ್ನು ತಪ್ಪಿಸಿ,ಅವು ಹಾನಿಗೆ ಕಾರಣವಾಗುತ್ತವೆ

 ನೋವು ಮತ್ತು ತೊಂದರೆಯನ್ನುಂಟು ಮಾಡುವ ಬ್ಯಾಕ್ಟೀರಿಯಾ ಸೋಂಕುಗಳಿಗೆ ಚಿಕಿತ್ಸೆ ನೀಡಲು ಆ್ಯಂಟಿಬಯಾಟಿಕ್‌ಗಳನ್ನು ಬಳಸಲಾಗುತ್ತದೆ. ವಯಸ್ಕರು ಆ್ಯಂಟಿಬಯಾಟಿಕ್‌ಗಳನ್ನು ಸೇವಿಸುವುದು ಸಾಮಾನ್ಯವಾಗಿದ್ದರೂ ಕೆಲವೊಮ್ಮೆ ಪುಟ್ಟಮಕ್ಕಳಿಗೂ ಅನಾರೋಗ್ಯವಿದ್ದಾಗ ಇವುಗಳನ್ನು ನೀಡಲಾಗುತ್ತದೆ. ಆದರೆ ಪುಟ್ಟ ಮಕ್ಕಳಿಗೆ ಆಗಾಗ್ಗೆ ಆ್ಯಂಟಿಬಯಾಟಿಕ್‌ಗಳನ್ನು ನೀಡುವುದರಿಂದ ಹಲವಾರು ರೀತಿಗಳಲ್ಲಿ ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ ಎನ್ನುವುದು ನಿಮಗೆ ಗೊತ್ತೇ? ಹೌದು,ಎಳವೆಯಲ್ಲಿ ಆ್ಯಂಟಿಬಯಾಟಿಕ್‌ಗಳ ಸೇವನೆಯು ನಂತರದ ವರ್ಷಗಳಲ್ಲಿ ಬದುಕಿನಲ್ಲಿ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತದೆ.

ಅಮೆರಿಕದ ರುಜೆರ್ಸ್‌ನ ಸೆಂಟರ್ ಫಾರ್ ಅಡ್ವಾನ್ಸಡ್ ಬಯೊಟಿಕ್ನಾಲಜಿಯು ಇತ್ತೀಚಿಗೆ ಶಿಶುಗಳ ಮೇಲೆ ಆ್ಯಂಟಿಬಯಾಟಿಕ್‌ಗಳ ಪರಿಣಾಮಗಳನ್ನು ವಿಶ್ಲೇಷಿಸಲು ಅಧ್ಯಯನವೊಂದನ್ನು ನಡೆಸಿತ್ತು. ಶೈಶವಾವಸ್ಥೆಯಲ್ಲಿ ಆ್ಯಂಟಿಬಯಾಟಿಕ್‌ಗಳ ಸೇವನೆಯು ಕರುಳಿನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡುತ್ತದೆ ಎನ್ನುವುದನ್ನು ಈ ಅಧ್ಯಯನವು ಬೆಳಕಿಗೆ ತಂದಿದೆ. ರೋಗ ನಿರೋಧಕ ವ್ಯವಸ್ಥೆಯು ಅಲರ್ಜಿಕಾರಕಗಳನ್ನು ಎದುರಿಸುವ ಸಾಮರ್ಥ್ಯವನ್ನು ಹೆಚ್ಚಿಸಲು ನೆರವಾಗುವ ಕರುಳಿನಲ್ಲಿಯ ಟಿ-ಕೋಶಗಳಿಗೆ ಈ ಆ್ಯಂಟಿಬಯಾಟಿಕ್‌ಗಳು ತುಂಬಲಾಗದ ಹಾನಿಯನ್ನುಂಟು ಮಾಡುತ್ತದೆ ಎಂದು ಅಧ್ಯಯನ ವರದಿಯು ಹೇಳಿದೆ.

‘ಎಂ ಬಯೊ’ಜರ್ನಲ್ ಈ ಅಧ್ಯಯನ ವರದಿಯನ್ನು ಪ್ರಕಟಿಸಿದೆ. ಆ್ಯಂಟಿಬಯಾಟಿಕ್‌ಗಳು ಕರುಳಿನಲ್ಲಿಯ ಸೂಕ್ಷ್ಮಜೀವಿಗಳನ್ನು ಬದಲಿಸುವ ಮೂಲಕ ಹೇಗೆ ಕರುಳಿನ ಆರೋಗ್ಯವನ್ನು ಹದಗೆಡಿಸುತ್ತವೆ ಎನ್ನುವುದನ್ನು ವರದಿಯು ವಿವರಿಸಿದೆ. ನಮ್ಮ ಶರೀರದಲ್ಲಿ ಕೋಟ್ಯಂತರ ಒಳ್ಳೆಯ ಮತ್ತು ಆರೋಗ್ಯಕರ ಸೂಕ್ಷ್ಮಜೀವಿಗಳು ವಾಸವಾಗಿರುತ್ತವೆ ಮತ್ತು ಇವು ನಮ್ಮ ಸರ್ವಾಂಗೀಣ ಆರೋಗ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹಲವರು ಅನಾರೋಗ್ಯಗಳನ್ನು,ವಿಶೇಷವಾಗಿ ಬೊಜ್ಜು,ಮಲಬದ್ಧತೆ,ಕರುಳಿನ ಕಾಯಿಲೆಗಳಂತಹ ಹೊಟ್ಟೆಯ ಸಮಸ್ಯೆಗಳನ್ನು ಈ ಸೂಕ್ಷ್ಮಜೀವಿಗಳು ದೂರವಿಡುತ್ತವೆ. ಆ್ಯಂಟಿಬಯಾಟಿಕ್‌ಗಳು ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಸೋಂಕಿಗೆ ಚಿಕಿತ್ಸೆ ನೀಡಲು ನೆರವಾಗುತ್ತವೆ ನಿಜ,ಆದರೆ ಅವುಗಳ ಅತಿಯಾದ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಶಿಶುಗಳಲ್ಲಿ ಆ್ಯಂಟಿಬಯಾಟಿಕ್‌ಗಳ ಸೇವನೆಯು ಜೀವಿತವಿಡೀ ಕರುಳಿನ ಸೂಕ್ಷ್ಮಜೀವಿಗಳಿಗೆ ಹಾನಿಯನ್ನುಂಟು ಮಾಡುತ್ತದೆ ಮತ್ತು ಇದು ಮಗುವಿನ ಮುಂದಿನ ವರ್ಷಗಳಲ್ಲಿ ವಿವಿಧ ಕರುಳಿನ ಕಾಯಿಲೆಗಳಿಗೆ ಗುರಿಯಾಗುವ ಅಪಾಯವನ್ನು ಒಡ್ಡುತ್ತದೆ. ಇದು ತುಂಬಲಾರದ ಹಾನಿಯನ್ನುಂಟು ಮಾಡುತ್ತದೆ ಮತ್ತು ಯಾವುದೇ ಚಿಕಿತ್ಸೆಯಿಂದಲೂ ಪೂರ್ವಸ್ಥಿತಿಯನ್ನು ಮರಳಿಸಲು ಸಾಧ್ಯವಿಲ್ಲ.

ಹಾಲೂಡಿಸುವ ತಾಯಂದಿರ ಮೂಲಕ ನವಜಾತ ಶಿಶುಗಳು ಆ್ಯಂಟಿ ಬಯಾಟಿಕ್‌ಗಳಿಗೆ ಒಡ್ಡಿಕೊಳ್ಳುತ್ತವೆ. ಅಂದರೆ ತಾಯಿಯು ಆ್ಯಂಟಿಬಯಾಟಿಕ್‌ಗಳನ್ನು ಸೇವಿಸಿದ್ದರೆ ಶಿಶುವೂ ಪ್ರತಿಕೂಲ ಪರಿಣಾಮಕ್ಕೊಳಗಾದ ಸೂಕ್ಷ್ಮಜೀವಿಗಳನ್ನು ಪಡೆಯುತ್ತವೆ ಎನ್ನುವುದನ್ನು ನಾವು ಅಧ್ಯಯನದಲ್ಲಿ ಕಂಡುಕೊಂಡಿದ್ದೇವೆ. ಇದರಿಂದ ಕರುಳಿನಲ್ಲಿ ಟಿ-ಜೀವಕೋಶಗಳನ್ನು ಉತ್ಪಾದಿಸುವ ಸಾಮರ್ಥ್ಯವು ಕಡಿಮೆಯಾಗುತ್ತದೆ ಮತ್ತು ದೀರ್ಘಕಾಲದಲ್ಲಿ ಹಾನಿಗೆ ಕಾರಣವಾಗುತ್ತದೆ ಎಂದು ಅಧ್ಯಯನ ತಂಡದ ಮಾರ್ಟಿನ್ ಬ್ಲೇಸರ್ ವರದಿಯಲ್ಲಿ ಹೇಳಿದ್ದಾರೆ.

* ಚಂಚಲ್ ಸೆಂಗಾರ್

ಕೃಪೆ: onlymyhealth.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X