ರಾಜ್ಯದಲ್ಲಿ ಕೋವಿಡ್ ಗೆ ಇಂದು 78 ಮಂದಿ ಬಲಿ: ಸತತ 2ನೇ ದಿನ 14 ಸಾವಿರಕ್ಕೂ ಹೆಚ್ಚು ಪಾಸಿಟಿವ್

ಬೆಂಗಳೂರು, ಎ.16: ರಾಜ್ಯದಲ್ಲಿ ಶುಕ್ರವಾರದಂದು 14,859 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 78 ಜನರು ಸೋಂಕಿಗೆ ಬಲಿಯಾಗಿದ್ದು, 4031 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 11,24,509ಕ್ಕೆ ತಲುಪಿದ್ದು, 577 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.
ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 13,190ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,07,315ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
78 ಸೋಂಕಿತರು ಬಲಿ: ಬಳ್ಳಾರಿ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 57, ಬೀದರ್ 2, ಚಿಕ್ಕಬಳ್ಳಾಪುರ 1, ಕಲಬುರಗಿ 3, ಮಂಡ್ಯ 1, ಮೈಸೂರು 5, ರಾಮನಗರ 1, ಶಿವಮೊಗ್ಗ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 14,859 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 71, ಬಳ್ಳಾರಿ 279, ಬೆಳಗಾವಿ 120, ಬೆಂಗಳೂರು ಗ್ರಾಮಾಂತರ 358, ಬೆಂಗಳೂರು ನಗರ 9917, ಬೀದರ್ 326, ಚಾಮರಾಜನಗರ 68, ಚಿಕ್ಕಬಳ್ಳಾಪುರ 180, ಚಿಕ್ಕಮಗಳೂರು 73, ಚಿತ್ರದುರ್ಗ 57, ದಕ್ಷಿಣ ಕನ್ನಡ 256, ದಾವಣಗೆರೆ 85, ಧಾರವಾಡ 176, ಗದಗ 34, ಹಾಸನ 244, ಹಾವೇರಿ 35, ಕಲಬುರಗಿ 488, ಕೊಡಗು 33, ಕೋಲಾರ 109, ಕೊಪ್ಪಳ 158, ಮಂಡ್ಯ 137, ಮೈಸೂರು 415, ರಾಯಚೂರು 108, ರಾಮನಗರ 100, ಶಿವಮೊಗ್ಗ 67, ತುಮಕೂರು 432, ಉಡುಪಿ 101, ಉತ್ತರ ಕನ್ನಡ 72, ವಿಜಯಪುರ 207, ಯಾದಗಿರಿ ಜಿಲ್ಲೆಯಲ್ಲಿ 153 ಪ್ರಕರಣಗಳು ಪತ್ತೆಯಾಗಿವೆ.
ಕೊರೋನ ರಣಕೇಕೆ: ರಾಜಧಾನಿಯಲ್ಲಿ 57 ಜನರ ಸಾವು
ರಾಜಧಾನಿಯಲ್ಲಿ ಶುಕ್ರವಾರದಂದು 9,917 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 57 ಜನರು ಮೃತಪಟ್ಟಿದ್ದಾರೆ. 2,071 ಸೋಂಕಿತರು ಬಿಡುಗಡೆಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 5,22,438 ಕೊರೋನ ಸೋಂಕಿತರು ದೃಢಪಟ್ಟಿದ್ದು, 5,020 ಜನರು ಸೋಂಕಿಗೆ ಬಲಿಯಾಗಿದ್ದಾರೆ. 4,37,801 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.







