Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈದ್ಯಕೀಯ ಆಮ್ಲಜನಕದ ಉತ್ಪಾದನೆಯನ್ನು...

ವೈದ್ಯಕೀಯ ಆಮ್ಲಜನಕದ ಉತ್ಪಾದನೆಯನ್ನು ದ್ವಿಗುಣಗೊಳಿಸಲಾಗುತ್ತಿದೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ

ವಾರ್ತಾಭಾರತಿವಾರ್ತಾಭಾರತಿ18 April 2021 9:13 PM IST
share
ವೈದ್ಯಕೀಯ ಆಮ್ಲಜನಕದ ಉತ್ಪಾದನೆಯನ್ನು ದ್ವಿಗುಣಗೊಳಿಸಲಾಗುತ್ತಿದೆ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ

ಹೊಸದಿಲ್ಲಿ,ಎ.18: ವೈದ್ಯಕೀಯ ದರ್ಜೆಯ ಆಮ್ಲಜನಕದ ಉತ್ಪಾದನೆಯನ್ನು ದ್ವಿಗುಣಗೊಳಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ರವಿವಾರ ಇಲ್ಲಿ ತಿಳಿಸಿದರು.

ಭಾರತದಲ್ಲಿ ಹಾಲಿ ಸುಮಾರು 20 ಲಕ್ಷ ಜನರು ಕೊರೋನವೈರಸ್ ಸೋಂಕುಪೀಡಿತರಾಗಿದ್ದು,ಹಲವಾರು ರಾಜ್ಯಗಳು ಎಲ್ಲ ಕೈಗಾರಿಕಾ ಅಮ್ಲಜನಕ ಉತ್ಪಾದನೆಯನ್ನು ವೈದ್ಯಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳುತ್ತಿದ್ದರೂ ದೇಶಾದ್ಯಂತ ಆಮ್ಲಜನಕದ ಕೊರತೆ ಕಾಡುತ್ತಿದೆ. ಮಹಾರಾಷ್ಟ್ರ ಮತ್ತು ದಿಲ್ಲಿಯಂತಹ ರಾಜ್ಯಗಳು ಆಮ್ಲಜನಕ ಪೂರೈಕೆಯ ಕೊರತೆಯ ಬಗ್ಗೆ ಈಗಾಗಲೇ ದೂರಿಕೊಂಡಿವೆ. ತಾನು 50,000 ಟನ್‌ಗಳಷ್ಟು ವೈದ್ಯಕೀಯ ಆಮ್ಲಜನಕವನ್ನು ಆಮದು ಮಾಡಿಕೊಳ್ಳುವುದಾಗಿ ಸರಕಾರವು ಗುರುವಾರ ತಿಳಿಸಿತ್ತು.

ಕೇಂದ್ರವು 2020ರಲ್ಲಿ 201.58 ಕೋ.ರೂ.ಗಳ ವೆಚ್ಚದಲ್ಲಿ ಎಲ್ಲ ರಾಜ್ಯಗಳ ಆಸ್ಪತ್ರೆಗಳಲ್ಲಿ 162 ಪ್ರೆಷರ್ ಸ್ವಿಂಗ್ ಎಡ್ಸಾರ್ಪ್ಶನ್ ಪ್ಲಾಂಟ್ (ಪಿಎಸ್‌ಎಪಿ)ಗಳನ್ನು ಮಂಜೂರು ಮಾಡಿದ್ದು,ಇವು ವೈದ್ಯಕೀಯ ಆಮ್ಲಜನಕ ಸಾಮರ್ಥ್ಯವನ್ನು 154.10 ಟನ್‌ಗಳಷ್ಟು ಹೆಚ್ಚಿಸಲಿವೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.

ಪಿಎಸ್‌ಎಪಿಗಳು ಆಮ್ಲಜನಕವನ್ನು ತಯಾರಿಸುತ್ತವೆ ಮತ್ತು ವೈದ್ಯಕೀಯ ಆಮ್ಲಜನಕದ ತಮ್ಮ ಅಗತ್ಯಕ್ಕಾಗಿ ಸ್ವಾವಲಂಬಿಯಾಗಲು ಆಸ್ಪತ್ರೆಗಳಿಗೆ ನೆರವಾಗುತ್ತವೆ.

ಈ ಪೈಕಿ 33 ಪಿಎಸ್‌ಎಪಿಗಳನ್ನು ಮಧ್ಯಪ್ರದೇಶ (5),ಹಿಮಾಚಲ ಪ್ರದೇಶ (4),ಚಂಡಿಗಡ,ಗುಜರಾತ ಮತ್ತು ಉತ್ತರಾಖಂಡ (ತಲಾ 3),ಬಿಹಾರ,ಕರ್ನಾಟಕ ಮತ್ತು ತೆಲಂಗಾಣ (ತಲಾ 2) ಹಾಗೂ ಆಂಧ್ರಪ್ರದೇಶ, ದಿಲ್ಲಿ, ಹರ್ಯಾಣ, ಕೇರಳ, ಮಹಾರಾಷ್ಟ್ರ, ಪುದುಚೇರಿ, ಪಂಜಾಬ್ ಮತ್ತು ಉತ್ತರ ಪ್ರದೇಶ (ತಲಾ 1)ಗಳಲ್ಲಿ ಸ್ಥಾಪಿಸಲಾಗಿದೆ. ಮೇ ಅಂತ್ಯದೊಳಗೆ ಉಳಿದ ಪಿಎಸ್‌ಎಪಿಗಳನ್ನು ಸ್ಥಾಪಿಸಲಾಗುವುದು. ಇವುಗಳ ವೆಚ್ಚವನ್ನು ಕೇಂದ್ರವೇ ಸಂಪೂರ್ಣವಾಗಿ ಭರಿಸುತ್ತದೆ ಎಂದು ಸಚಿವಾಲಯವು ತಿಳಿಸಿದೆ.

100ಕ್ಕೂ ಅಧಿಕ ಪಿಎಸ್‌ಎಪಿಗಳ ಸ್ಥಾಪನೆಗೆ ರಾಜ್ಯಗಳು ಕೋರಿದ್ದು,ಇವುಗಳನ್ನೂ ಮಂಜೂರು ಮಾಡಲಾಗುತ್ತದೆ ಎಂದು ಅದು ತಿಳಿಸಿದೆ.

ತನ್ಮಧ್ಯೆ,ರವಿವಾರ ಬೆಳಿಗ್ಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,61,500 ಹೊಸ ಕೊರೋನವೈರಸ್ ಪ್ರಕರಣಗಳು ವರದಿಯಾಗಿದ್ದು,ಇದು ಸಾರ್ವಕಾಲಿಕ ದೈನಂದಿನ ದಾಖಲೆಯಾಗಿದೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,47,88,109ಕ್ಕೇರಿದೆ. ಈ ಅವಧಿಯಲ್ಲಿ 1,501 ಸಾವುಗಳು ದಾಖಲಾಗಿದ್ದು,ಒಟ್ಟು ಸಾವುಗಳ ಸಂಖ್ಯೆ 1,77,150ಕ್ಕೆ ತಲುಪಿದೆ. ದೇಶದಲ್ಲಿ ಸತತ ನಾಲ್ಕನೇ ದಿನ ಎರಡು ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ದಾಖಲಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X