Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಲಹೊರುವ ಪದ್ದತಿ ನಿರ್ಮೂಲನೆಗೆ ರೊಬೋಟ್...

ಮಲಹೊರುವ ಪದ್ದತಿ ನಿರ್ಮೂಲನೆಗೆ ರೊಬೋಟ್ ಯಂತ್ರ ಬಳಕೆಯಾಗಲಿ: ಹಿರಿಯ ವಕೀಲ ಎಂ.ಜೇಮ್ಸ್

ವಾರ್ತಾಭಾರತಿವಾರ್ತಾಭಾರತಿ18 April 2021 11:07 PM IST
share

ಬೆಂಗಳೂರು, ಎ.18: ರಾಜ್ಯದಲ್ಲಿ ಮಲಹೊರುವ ಪದ್ದತಿ ಶಾಶ್ವತವಾಗಿ ನಿರ್ಮೂಲನೆ ಮಾಡಲು ರೊಬೋಟ್ ಯಂತ್ರಗಳನ್ನು ಬಳಕೆ ಮಾಡುವುದೊಂದೆ ಪರಿಹಾರವೆಂದು ಹಿರಿಯ ವಕೀಲ ಎಂ.ಜೇಮ್ಸ್ ಅಭಿಪ್ರಾಯಿಸಿದ್ದಾರೆ.

ರವಿವಾರ ಬೆಂಗಳೂರು ದಲಿತ್ ಫೋರಂ ವತಿಯಿಂದ ಆಯೋಜಿಸಿದ್ದ ಶೋಷಿತ ವರ್ಗಗಳ ಸಬಲೀಕರಣಕ್ಕಾಗಿ ಕ್ರಿಯಾಯೋಜನೆಗಳು ಎಂಬ ವಿಷಯದ ಕುರಿತು ಮಾತನಾಡಿದ ಅವರು, ಪ್ರತಿ ನಾಲ್ಕು ದಿನಕ್ಕೆ ಒಬ್ಬ ಪೌರಕಾರ್ಮಿಕರು ಮಲಗುಂಡಿಗೆ ಇಳಿದು ಸಾವನ್ನಪ್ಪುತ್ತಿದ್ದಾರೆ. ಆದರೂ ಈ ಬಗ್ಗೆ ನಮ್ಮ ಅಡಳಿತ ವರ್ಗಕ್ಕೆ ಗಂಭೀರತೆಯೇ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇರಳದಲ್ಲಿ ರೊಬೋಟ್ ಯಂತ್ರಗಳ ಮೂಲಕ ಮಲದ ಗುಂಡಿಗಳನ್ನು ಸ್ವಚ್ಚ ಮಾಡುವಂತಹ ಕಾರ್ಯ ನಡೆಯುತ್ತಿದೆ. ದೇಶದ ಇತರೆ ನಗರಪಾಲಿಕೆಗಳಲ್ಲೂ ಕೇರಳ ಮಾದರಿಯಲ್ಲಿ ಯಂತ್ರಗಳನ್ನು ಬಳಸಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಈ ಯಂತ್ರ ಬಳಕೆಯಾಗುತ್ತಿಲ್ಲ. ರಾಜ್ಯ ಸರಕಾರಕ್ಕೆ ಈ ಬಗ್ಗೆ ಆಸಕ್ತಿಯಿಲ್ಲ.  ಹೀಗಾಗಿ ಆಸಕ್ತರು ಈ ಯಂತ್ರಗಳನ್ನು ಕೊಂಡು ಸರಕಾರಕ್ಕೆ ಬಾಡಿಗೆ ಕೊಡುವುದರ ಮೂಲಕ ಮಲದ ಗುಂಡಿಗೆ ಮನಷ್ಯನನ್ನು ಇಳಿಸುವುದನ್ನು ತಪ್ಪಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ 70-80ರಲ್ಲಿ ದಲಿತ ಚಳವಳಿಯನ್ನು ರೂಪಗೊಂಡ ಬಗೆ, ಅದರಲ್ಲಿ ಸಕ್ರಿಯವಾಗಿ ಭಾಗವಹಿಸಿದವರ ವಿವರಗಳನ್ನು ದಾಖಲಿಸುವ ಕಾರ್ಯ ಆಗಬೇಕಾಗಿದೆ. ಇದಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯದ ಸಂಶೋಧನಾ ವಿದ್ಯಾರ್ಥಿಗಳಿಗೆ ಸ್ಕಾಲರ್‍ಶಿಪ್ ನೀಡಿ ಅಧ್ಯಯನಕ್ಕೆ ಪ್ರೋತ್ಸಾಹಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಅಂಬೇಡ್ಕರ್ ಕುರಿತು ಇಂಗ್ಲಿಷ್‍ನಲ್ಲಿ ಸಾಕಷ್ಟು ಬರಹಗಳಿದ್ದು, ಅವೆಲ್ಲವೂ ಕನ್ನಡಕ್ಕೆ ಅನುವಾದಗೊಳ್ಳಬೇಕಾಗಿದೆ. ಹೀಗಾಗಿ ದಲಿತ ಸಮುದಾಯದ ಯುವಜನತೆಗೆ ಅನುವಾದ ಕ್ಷೇತ್ರದಲ್ಲಿ ವಿಫುಲವಾದ ಅವಕಾಶಗಳಿದ್ದು, ಅವುಗಳೆಲ್ಲವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಜೈಲುಗಳಲ್ಲಿ ಶೇ.60ರಷ್ಟು ದಲಿತ ಜನರೆ ಇದ್ದಾರೆ. ನಾನಾ ಕಾರಣಗಳಿಗಾಗಿ ಜೈಲುವಾಸ ಅನುಭವಿಸುತ್ತಿದ್ದಾರೆ. ಇವರಲ್ಲಿ ಹಲವು ಮಂದಿಗೆ ಬೇಲ್‍ಗೆ ಹಣ ಒದಗಿಸಲು ಸಾಧ್ಯವಾಗದೆ ಜೈಲಿನಲ್ಲಿ ಕೊಳೆಯುತ್ತಿದ್ದಾರೆ. ಹೀಗಾಗಿ ಬೇಲ್‍ಗಾಗಿ ಹಣವನ್ನು ಒಟ್ಟುಗೂಡಿಸಿ, ದಲಿತ ಯುವಕರನ್ನು ಜೈಲಿನಿಂದ ಹೊರತರಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಈ ವೇಳೆ ಬೆಂಗಳೂರು ದಲಿತ ಫೋರಂನ ಅಧ್ಯಕ್ಷ ಗಜೇಂದ್ರ, ಸಾಮಾಜಿಕ ಹೋರಾಟಗಾರ ಮಂಗಳೂರು ವಿಜಯ ಮತ್ತಿತರರಿದ್ದರು.

ದಲಿತ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕಾದರೆ ಹಿಂದೂ ಧರ್ಮದಿಂದ ಹೊರಬಂದು ಬೌದ್ಧ ದಮ್ಮವನ್ನು ಸ್ವೀಕರಿಸುವುದೊಂದೇ ಮಾರ್ಗವಾಗಿದೆ. ಸಂಸ್ಕೃತಿ, ಆಚಾರ, ವಿಚಾರಗಳಲ್ಲಿ ಬುದ್ಧ ತತ್ವಗಳನ್ನು ಪಾಲಿಸುವ ಮೂಲಕ ದಲಿತ ಕುಟುಂಬಗಳು ಶಿಕ್ಷಿತರು, ಸ್ವಾಭಿಮಾನಿ ಜೀವನದೆಡೆಗೆ ಸಾಗಬೇಕಾಗಿದೆ.

-ಜೇಮ್ಸ್, ಹಿರಿಯ ವಕೀಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X