Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರದಲ್ಲಿ ರೆಮ್ಡೆಸಿವಿರ್...

ಮಹಾರಾಷ್ಟ್ರದಲ್ಲಿ ರೆಮ್ಡೆಸಿವಿರ್ ವಿಚಾರದಲ್ಲಿ ಬಿಜೆಪಿ ಹೇಗೆ ಶಾಮೀಲಾಯಿತೆಂದು ತಿಳಿದಿಲ್ಲ ಎಂದ ಎಫ್‍ಡಿಎ ಮೂಲಗಳು

ವಾರ್ತಾಭಾರತಿವಾರ್ತಾಭಾರತಿ19 April 2021 6:27 PM IST
share
ಮಹಾರಾಷ್ಟ್ರದಲ್ಲಿ ರೆಮ್ಡೆಸಿವಿರ್ ವಿಚಾರದಲ್ಲಿ ಬಿಜೆಪಿ ಹೇಗೆ ಶಾಮೀಲಾಯಿತೆಂದು ತಿಳಿದಿಲ್ಲ ಎಂದ ಎಫ್‍ಡಿಎ ಮೂಲಗಳು

ಮುಂಬೈ: ರೆಮ್ಡೆಸಿವಿರ್ ಔಷಧಿ  ಪೂರೈಕೆ ವಿಚಾರದಲ್ಲಿ ಮಹಾರಾಷ್ಟ್ರ ಬಿಜೆಪಿ ನಾಯಕರುಗಳಾದ ದೇವೇಂದ್ರ ಫಢ್ನವೀಸ್ ಹಾಗೂ ಪ್ರವೀಣ್ ದರೇಕರ್ ಹೇಗೆ ಶಾಮೀಲಾದರೆಂಬ ಕುರಿತು ತಮಗೆ  ಏನೂ ತಿಳಿದಿಲ್ಲ ಎಂದು ಫುಡ್ ಎಂಡ್ ಡ್ರಗ್ಸ್ ಅಡ್ಮಿನಿಸ್ಟ್ರೇಶನ್ (ಎಫ್‍ಡಿಎ) ಮೂಲಗಳು ತಿಳಿಸಿವೆ.

ಕೋವಿಡ್ ರೋಗಿಗಳ ಚಿಕಿತ್ಸೆಗೆ ಬಳಸುವ ಈ ಔಷಧಿಯ ಅಕ್ರಮ ದಾಸ್ತಾನು ಹಾಗೂ  ಅದು ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂಬ ಆರೋಪಗಳ ಕುರಿತಂತೆ ಮುಂಬೈ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ.

ಬಿಜೆಪಿ ಅಥವಾ ಬೇರೆ ಯಾವುದೇ ರಾಜಕೀಯ ಪಕ್ಷಕ್ಕೆ ಈ ಔಷಧಿ  ತರಿಸಲು ಅನುಮತಿಯನ್ನು ನೀಡಲಾಗಿಲ್ಲ ಎಂದು   ಮಹಾರಾಷ್ಟ್ರ ಸಹಿತ ಹಲವು ರಾಜ್ಯಗಳು ರೆಮ್ಡೆಸೆವಿರ್ ಔಷಧಿ ಪೂರೈಕೆಗಾಗಿ  ಪರದಾಡುತ್ತಿರುವ ಸಂದರ್ಭ ಎಫ್‍ಡಿಎ ಹೇಳಿದೆ.

ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಬಳಕೆಗಾಗಿ ರೆಮ್ಡೆಸೆವಿರ್ ಔಷಧಿಯನ್ನು ಪಡೆಯಲು  ರಾಜ್ಯ ಸರಕಾರ ನಡೆಸುತ್ತಿರುವ ಯತ್ನಗಳಿಗೆ ಬಿಜೆಪಿ ಅಡ್ಡಿಯುಂಟು ಮಾಡುತ್ತಿದೆ ಎಂದು ರವಿವಾರ ರಾಜ್ಯ  ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಹಾಗೂ ಎನ್‍ಸಿಪಿ ವಕ್ತಾರ ನವಾಬ್ ಮಲಿಕ್ ಆರೋಪಿಸಿದ್ದರು.

ಈ ಔಷಧಿಯ ದಾಸ್ತಾನುಗಳನ್ನು ಬೇರೆ ಕಡೆಗೆ ಪೂರೈಸಲು ಯತ್ನಿಸುತ್ತಿದ್ದಾರೆಂಬ ಶಂಕೆಯಿಂದ ಪೊಲೀಸರು ಫಾರ್ಮಾ ಕಂಪೆನಿಯೊಂದರ ಮಾಲಿಕ ಸಹಿತ ಇಬ್ಬರನ್ನು  ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಹಾಗೂ ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಕೋರಿ  ಶನಿವಾರ ರಾತ್ರಿ ಫಡ್ನವೀಸ್ ಹಾಗೂ ದರೇಕರ್ ಪೊಲೀಸರ ಜತೆ ವಾಗ್ವಾದಕ್ಕಿಳಿದಿದ್ದರು.

ಸುಮಾರು 60,000 ವಯಲ್ ರೆಮ್ಡೆಸೆವಿರ್ ಔಷಧಿಯ ಸಾಗಾಟ ಕುರಿತಂತೆ ಪೊಲೀಸರಿಗೆ ಮಾಹಿತಿ ದೊರಕಿದ ನಂತರ ಬ್ರಕ್ ಫಾರ್ಮಾ ಮಾಲಕ ರಾಜೇಶ್ ದೊಕನಿಯಾ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಆದರೆ ಫಡ್ನವೀಸ್ ಹಾಗೂ ದರೇಕರ್ ಅವರ ಹಸ್ತಕ್ಷೇಪದಿಂದಾಗಿ ತನಿಖೆ ಅಪೂರ್ಣವಾಗಿದೆ ಹಾಗೂ ಈ ಔಷಧಿ ಎಲ್ಲಿದೆ ಎಂದು ತಿಳಿಯುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ  ಮಹಾರಾಷ್ಟ್ರಕ್ಕೆ ಈ ಔಷಧಿ ಪೂರೈಸಲು ಎಫ್‍ಡಿಎ 12 ದೊಡ್ಡ ಫಾರ್ಮಾ ಕಂಪೆನಿಗಳನ್ನು ಸಂಪರ್ಕಿಸಿತ್ತು. ಈ ಪೈಕಿ ಬಿಡಿಆರ್ ಫಾರ್ಮಾ ಹಾಗೂ ಬ್ರಕ್ ಮೊದಲು  ಪ್ರತಿಕ್ರಿಯೆ ನೀಡಿದ್ದವು. ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಬ್ರಕ್ ಕಂಪೆನಿ ಮಹಾರಾಷ್ಟ್ರಕ್ಕೆ ಔಷಧಿ ಪೂರೈಸಬೇಕಿದ್ದರೂ ಪೂರೈಕೆಯಾಗಿರಲಿಲ್ಲ.

ರಾಜ್ಯದ ಅಗತ್ಯತೆಗಳಿಗಾಗಿ ಬಿಜೆಪಿ ರಾಜ್ಯ ಘಟಕ ಫಾರ್ಮಾ ಕಂಪೆನಿಗಳನ್ನು ಸಂಪರ್ಕಿಸಿತ್ತು ಎಂಡು ಫಡ್ನವೀಸ್ ಹೇಳಿಕೊಂಡಿದ್ದಾರೆ. ತರುವಾಯ ಈ ಪ್ರಕರಣದಲ್ಲಿ ಶಾಮೀಲಾದ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ರಾಜ್ಯ ಸರಕಾರ ಯೋಚಿಸುತ್ತಿದೆ. ಆದರೆ  ಬೆದರಿಕೆಗಳಿಗೆ  ತಾವು ಭಯ ಪಡುವುದಿಲ್ಲ ಎಂದು ಫಡ್ನವೀಸ್ ಹೇಳಿದ್ದಾರೆ.

ಇನ್ನೊಂದೆಡೆ ಪೊಲೀಸರು ಗುಜರಾತ್‍ನಲ್ಲಿ ಬ್ರಕ್ ಫಾರ್ಮಾ ಅಧಿಕಾರಿ ಹಾಗೂ ಇನ್ನೊಬ್ಬನನ್ನು  ಕಾಳಸಂತೆಯಲ್ಲಿ ಈ ಔಷಧಿ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿಸಿದ್ದಾರೆ. ಈ ಕುರಿತು ಬಿಜೆಪಿ ಇನ್ನೂ ಪ್ರತಿಕ್ರಿಯಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X