Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ವಪಕ್ಷ ಸಭೆ ಬಳಿಕ ಕಠಿಣ‌ ಕ್ರಮ...

ಸರ್ವಪಕ್ಷ ಸಭೆ ಬಳಿಕ ಕಠಿಣ‌ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ: ಸಚಿವ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ19 April 2021 8:05 PM IST
share
ಸರ್ವಪಕ್ಷ ಸಭೆ ಬಳಿಕ ಕಠಿಣ‌ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ: ಸಚಿವ ಆರ್.ಅಶೋಕ್

ಬೆಂಗಳೂರು, ಎ.19: ಎರಡು ತಿಂಗಳು ನಿರ್ಣಾಯಕ ಸಮಯವಾಗಿದೆ. ಬೆಂಗಳೂರಲ್ಲಿ ಕಠಿಣ ನಿಲುವು ತಳೆಯುವ ದೃಷ್ಟಿಯಿಂದ ಈ ಸಭೆ ಕರೆಯಲಾಗಿದೆ. ಕಳೆದ ಬಾರಿ ಹೋಂ‌ ಐಸೋಲೇಷನ್ ಆದವರಿಗೆ ಸೀಲ್ ಹಾಕಲಾಗಿತ್ತು. ಅದನ್ನೇ ಮುಂದುವರಿಸುವಂತೆ ಸೂಚನೆ ಕೊಟ್ಟಿದ್ದಾರೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಆರ್.ಅಶೋಕ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಲ ಸಣ್ಣ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸ್ಟೋರ್ ಮಾಡಲು ಅವಕಾಶ ಇಲ್ಲ. ಅದಕ್ಕಾಗಿ ನೋಡಲ್ ಅಧಿಕಾರಿ ನೇಮಕ‌ ಮಾಡಿ ಸಣ್ಣ ಆಸ್ಪತ್ರೆಗೆ ಮೂರು ಬಾರಿ ಆಕ್ಸಿಜನ್ ಸಿಲಿಂಡರ್ ಸರಬರಾಜು‌ ಮಾಡಲು ಸೂಚನೆ ನೀಡಲಾಗಿದೆ. ಜಿಂದಾಲ್ ಕಂಪನಿ ಜತೆ ಚರ್ಚಿಸಿದ್ದೇವೆ. ಅವರು ಆಕ್ಸಿಜನ್ ಪೂರೈಕೆ ಮಾಡಲು ಸಹಕಾರ ಕೊಡುವುದಾಗಿ ಹೇಳಿದ್ದಾರೆ ಎಂದರು.

ಕಾಳ‌ಸಂತೆಯಲ್ಲಿ ಆಕ್ಸಿಜನ್ ಮಾರಾಟ ಬಗ್ಗೆನೂ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. 50% ಬೆಡ್ ಪಡೆಯಲು ವ್ಯವಸ್ಥೆ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ನೋಡಲ್ ಅಧಿಕಾರಿ ನೇಮಕ ಮಾಡಲಾಗುವುದು. ಹಲವರು ಆತಂಕದಿಂದ ಅಗತ್ಯ ಇಲ್ಲದಿದ್ದರೂ ಆಸ್ಪತ್ರೆ ಹೋಗುತ್ತಿದ್ದಾರೆ. ಹೀಗಾಗಿ ಅವರಿಗಾಗಿ ಇನ್ನು ಮುಂದೆ ಕೋವಿಡ್ ಕೇರ್ ಸೆಂಟರ್ ಶುರು ಮಾಡುತ್ತೇವೆ ಎಂದು ಹೇಳಿದರು.

ಕೋವಿಡೇತರ ಗಂಭೀರ ಆರೋಗ್ಯ ಸ್ಥಿತಿಯಲ್ಲಿಲ್ಲದ ರೋಗಿಗಳನ್ನು ಆಸ್ಪತ್ರೆಗಳಿಂದ 3 ಸ್ಟಾರ್ ಹೊಟೇಲ್ ಗಳಿಗೆ ಶಿಫ್ಟ್ ಮಾಡಿ ಅಲ್ಲೇ ಚಿಕಿತ್ಸೆ ನೀಡಲಾಗುವುದು. ಆ ಮೂಲಕ ಕೋವಿಡ್ ಅಗತ್ಯ ರೋಗಿಗಳಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗುವಂತೆ ವ್ಯವಸ್ಥೆ ಮಾಡಲಾಗುವುದು. ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ಮಾಡಲು 24 ತಾಸು ಅವಕಾಶ ಇದೆ. ರೆಮಿಡಿಸೆವೆರ್ ಔಷಧಿಯನ್ನು ಅಗತ್ಯ ಇರುವವರಿಗೆ ಮಾತ್ರ ನೀಡಲು ಸೂಚನೆ ನೀಡಲಾಗಿದೆ ಎಂದು ಅವರು, 144 ಸೆಕ್ಷನ್ ಹಾಕಲು ಕಾಂಗ್ರೆಸ್ ಸಲಹೆ ನೀಡಿದೆ. ಲಾಕ್ ಡೌನ್ ಮಾಡದಿರುವಂತೆಯೂ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.

ಸಿಎಂ ಸಭೆಯಾದ್ಯಂತ ಆಸ್ಪತ್ರೆಯಲ್ಲಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದರು. ಕೋವಿಡ್ ನಿಯಂತ್ರಣ ಸಂಬಂಧ ನಾಳೆ ಸರ್ವ ಪಕ್ಷ ಸಭೆ ಬಳಿಕ ಕಠಿಣ‌ ಕ್ರಮ ಕೈಗೊಳ್ಳುವ ನಿರ್ಧಾರ ಕೈಗೊಳ್ಳಲಿದ್ದಾರೆ. ಲಾಕ್‌ಡೌನ್ ಬೇಡ ಅನ್ನೋದು ಸಭೆಯಲ್ಲಿನ ಒಮ್ಮತದ ಅಭಿಪ್ರಾಯವಾಗಿತ್ತು. ಪರ್ಯಾಯ ಮಾರುಕಟ್ಟೆ ವ್ಯವಸ್ಥೆ ಮಾಡಲು ತೀರ್ಮಾನ ಮಾಡಲಾಗಿದೆ. ರಾಮ, ರಹೀಮ, ಯೇಸು, ಬುದ್ಧ ಎಲ್ಲರೂ ಒಂದೇ. ಎಲ್ಲರಿಗೂ ಸಮಾನ ಕಾನೂನು ಮಾಡುತ್ತೇವೆ ಎಂದು ಅಶೋಕ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X