Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಓಟ ನಿಲ್ಲಿಸಿದ 28 ವರ್ಷ ಪ್ರಾಯದ...

ಓಟ ನಿಲ್ಲಿಸಿದ 28 ವರ್ಷ ಪ್ರಾಯದ ಪ್ರಶಸ್ತಿಗಳ ಸರದಾರ: ಕಂಬಳ ಗದ್ದೆಯ ‘ಬೋಳಂತೂರು ಕಾಟಿ’ ಸಾವು

ವಾರ್ತಾಭಾರತಿವಾರ್ತಾಭಾರತಿ20 April 2021 9:53 AM IST
share
ಓಟ ನಿಲ್ಲಿಸಿದ 28 ವರ್ಷ ಪ್ರಾಯದ ಪ್ರಶಸ್ತಿಗಳ ಸರದಾರ: ಕಂಬಳ ಗದ್ದೆಯ ‘ಬೋಳಂತೂರು ಕಾಟಿ’ ಸಾವು

ಬಂಟ್ವಾಳ: ಹತ್ತಾರು ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಕಂಬಳ ಗದ್ದೆಯ ‘ಬೋಳಂತೂರು ಕಾಟಿ’ ಎಂದೇ ಪ್ರಸಿದ್ಧಿ ಪಡೆದಿದ್ದ ಬಂಟ್ವಾಳ ತಾಲೂಕಿನ ಬೋಳಂತೂರು ನಿವಾಸಿ ದಿ. ಗಂಗಾಧರ ರೈ ಯಜಮಾನಿಕೆಯ ಕೋಣ ಸಾವನ್ನಪ್ಪಿದೆ. ಕಂಬಳ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಸುಮಾರು 28 ವರ್ಷ ವಯಸ್ಸಿನ ‘ಬೋಳಂತೂರು ಕಾಟಿ’ ಕೋಣ ಹಲವು ಪ್ರಶಸ್ತಿಗಳ ಸರದಾರ. ಇತ್ತೀಚಿನ ಹಲವು ವರ್ಷಗಳಿಂದ ಕಂಬಳ ಕ್ಷೇತ್ರದಿಂದ ದೂರವಾಗಿದ್ದ ಈ ಕಾಟಿ ಬೋಳಂತೂರಿನಲ್ಲಿ ರವಿವಾರ ತಡರಾತ್ರಿ ಅಸುನೀಗಿದೆ.

3 ವರ್ಷಗಳ ಹಿಂದೆ ಪುತ್ತೂರು ಕಂಬಳದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ‘ಬೋಳಂತೂರು ಕಾಟಿ’ಗೆ 25 ವರ್ಷ ತುಂಬಿದ ಸವಿನೆನಪಿಗಾಗಿ ಅದ್ದೂರಿಯಾಗಿ ಸಮ್ಮಾನ ಮಾಡಲಾಗಿತ್ತು. ಬಾರ್ಕೂರು ದೇವದಾಸ ಗಡಿಯಾರ್ ಈ ಕಾಟಿಯನ್ನು ಬಾಲ್ಯದಲ್ಲಿ ಪೋಷಿಸಿದ್ದು ನೇಗಿಲು ಕಿರಿಯ ವಿಭಾಗದಲ್ಲಿ ಶಿರ್ವ ಕಂಬಳದಲ್ಲಿ ಮೊದಲ ಬಹುಮಾನ ಪಡೆದಿತ್ತು. ಅಂದು ಶಿರ್ವ ವಿಶ್ವನಾಥ ಪ್ರಭು ಕಾಟಿಯನ್ನು ಓಡಿಸಿದ್ದರು. ಬಳಿಕ ಬಾರ್ಕೂರು ಶಾಂತಾರಾಮ ಶೆಟ್ಟಿ ಗರಡಿಯಲ್ಲಿ ಇದು ಪಳಗಿತ್ತು. ಬಾರ್ಕೂರು ಶಾಂತಾರಾಮ ಶೆಟ್ಟಿ ಹಾಗೂ ದೇವದಾಸ ಗಡಿಯಾರ್ ಜತೆ ಸೇರಿ ಮೋಡ ಕೋಣದ ಜೋಡಿಯಾಗಿ ಈ ಕಾಟಿಯನ್ನು ಓಡಿಸಿದ್ದರು. ಸೀನಿಯರ್ ವಿಭಾಗಕ್ಕೆ ಅರ್ಹತೆ ಪಡೆಯುವ ಮೊದಲೇ ಚಾಂಪಿಯನ್ ಗೌರವಕ್ಕೆ ಪಾತ್ರವಾಗಿತ್ತು. ಮುಂದೆ ಬೆಳುವಾಯಿ ಸದಾನಂದ ಶೆಟ್ಟಿ ಈ ಕಾಟಿಯನ್ನು ತಮ್ಮ ಬಳಗಕ್ಕೆ ಸೇರಿಸಿ ಅವರ ಮಾತಿಬೆಟ್ಟು ಕೋಣದ ಜೊತೆ ಸೇರಿಸಿ ಹಗ್ಗ ಹಿರಿಯ ವಿಭಾಗದಲ್ಲಿ ಓಡಿಸಿದ್ದರು.

2001ರಲ್ಲಿ ಬೋಳಂತೂರು ಗಂಗಾಧರ ರೈ ಕಾಟಿ -ಮಾತಿಬೆಟ್ಟು ಜೋಡಿಯನ್ನು ಖರೀದಿಸಿದ್ದು ಪ್ರಾರಂಭದ ಎರಡು ವರ್ಷ ಅಜಿತ್ ಕುಮಾರ್ ಜೈನ್ ಈ ಜೋಡಿಯನ್ನು ಓಡಿಸಿದ್ದರು. ಬಳಿಕ ಅಶೋಕ್ ಕುಮಾರ್ ಜೈನ್ ಓಡಿಸಿದ್ದು ಈ ಸಂದರ್ಭ ಸತತ ಮೂರು ವರ್ಷಗಳ ಕಾಲ ಚಾಂಪಿಯನ್ ಆಫ್ ದಿ ಇಯರ್ ಪ್ರಶಸ್ತಿ ಪಡೆದಿತ್ತು. ಬಳಿಕ ಮಂಜೇಶ್ವರ ಉದ್ಯಾವರ, ಮುನ್ನೆ, ಚಿತ್ರಾಪುರದ ಕುಟ್ಟಿ, ಬಿಳಿಯೂರು, ಗಂಗೆ ಮೊದಲಾದ ಕೋಣಗಳಿಗೆ ಜೋಡಿಯಾಗಿ ಪ್ರಶಸ್ತಿ ಪಡೆದಿದ್ದು ಹಲವು ಮಂದಿ ಕಂಬಳ ಓಟಗಾರರು ಓಡಿಸಿದ್ದರು. ‘ಬೋಳಂತೂರು ಕಾಟಿ’ಯು ಕನೆಹಲಗೆ ವಿಭಾಗದಲ್ಲೂ ಪ್ರಶಸ್ತಿ ಪಡೆದು ಮಿಂಚಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X