Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಎಸೆಸೆಲ್ಸಿ ವಿದ್ಯಾರ್ಥಿಗಳ...

ಪುತ್ತೂರು: ಎಸೆಸೆಲ್ಸಿ ವಿದ್ಯಾರ್ಥಿಗಳ ಮನೆಗೆ ಇಮಾಮರ ಭೇಟಿ

ಪರೀಕ್ಷೆ ತಯಾರಿಗೆ ಉಸ್ತಾದರ ಸ್ಫೂರ್ತಿ: ಶಿಕ್ಷಣ ಸಚಿವರಿಂದ ಶ್ಲಾಘನೆ ►ಪುತ್ತೂರು ಕಮ್ಯುನಿಟಿ ಸೆಂಟರ್ ಮೂಲಕ ಶೈಕ್ಷಣಿಕ ಜಾಗೃತಿ-ಆಂದೋಲನ

ವಾರ್ತಾಭಾರತಿವಾರ್ತಾಭಾರತಿ20 April 2021 10:08 AM IST
share
ಪುತ್ತೂರು: ಎಸೆಸೆಲ್ಸಿ ವಿದ್ಯಾರ್ಥಿಗಳ ಮನೆಗೆ ಇಮಾಮರ ಭೇಟಿ

ಮಂಗಳೂರು: ಪುತ್ತೂರು ತಾಲೂಕಿನ ಎಸೆಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಸ್ಫೂರ್ತಿ ನೀಡಲು ಕಳೆದ ಕೆಲವು ಸಮಯಗಳಿಂದ ಮಸೀದಿಯ ಇಮಾಮರು ಮನೆ ಮನೆಗೆ ಭೇಟಿ ನೀಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಪುತ್ತೂರಿನ ಕಮ್ಯುನಿಟಿ ಸೆಂಟರ್ ಮೂಲಕ ಉಸ್ತಾದರು ಹಮ್ಮಿಕೊಂಡ ಜಾಗೃತಿ ಮೂಡಿಸುವ ಅಭಿಯಾನ-ಆಂದೋಲನಕ್ಕೆ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಹಲವು ಮಸೀದಿಗಳ ಮೌಲಾನಗಳು ಎಸೆಸೆಲ್ಸಿ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಕಲಿಕೆಗೆ ಪ್ರೇರಣೆ ನೀಡುವುದು, ಕಲಿಕೆಯ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಳ್ಳುವುದು, ಶಿಕ್ಷಣದ ಮಹತ್ವ ಸಾರುವುದನ್ನು ಗಮನಿಸಿ ತುಂಬಾ ಸಂತೋಷವಾಗಿದೆ. ಮೌಲಾನಗಳ ಈ ವಿಭಿನ್ನ ಯೋಚನೆಯು ರಾಜ್ಯದ ಪ್ರತೀ ಜಿಲ್ಲೆಯಲ್ಲೂ ಆಗಬೇಕಾಗಿದೆ. ಶೈಕ್ಷಣಿಕ ಅಭಿವೃದ್ಧಿಯ ಆಂದೋಲಕ್ಕೆ ಮೌಲಾನಗಳ ಈ ಅನುಕರಣೀಯ ಪ್ರಯತ್ನಕ್ಕೆ ಶಿಕ್ಷಣ ಇಲಾಖೆ ಮತ್ತು ಸರಕಾರ ಸಂಪೂರ್ಣ ಸಹಕಾರ ನೀಡುವುದಾಗಿ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪುತ್ತೂರು ತಾಲೂಕು ಶಿಕ್ಷಣಾಧಿಕಾರಿ ಲೊಕೇಶ್ ಎಸೆಸೆಲ್ಸಿ ಕಲಿಯುವ ಸುಮಾರು 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಅವರ ಕಲಿಕೆಯ ಉನ್ನತಿಗೆ ಶ್ರಮಿಸುತ್ತಿರುವುದನ್ನು ಗಮನಿಸಿದ ಕಮ್ಯುನಿಟಿ ಸೆಂಟರ್‌ನ ಹನೀಫ್ ಪುತ್ತೂರು ಮತ್ತು ಇಮ್ತಿಯಾಝ್ ಸ್ಥಳೀಯ ಜಮಾಅತ್ ಆಡಳಿತ ಕಮಿಟಿಯ ಸಹಕಾರದೊಂದಿಗೆ ಕೂರ್ನಡ್ಕ ಮೊಹಲ್ಲಾ ಖಾಝಿ ಅಲ್‌ಹಾಜ್ ಅಬ್ದುಲ್ ಖಾದರ್ ಅಲ್‌ಖಾಸಿಮಿ ಬಂಬ್ರಾಣ ಉಸ್ತಾದ್, ಬನ್ನೂರು ಮಸೀದಿಯ ಖತೀಬ್ ಮಜೀದ್ ಸಖಾಫಿ ಮಲ್ಲಿ, ಕಲ್ಲೇಗ ಮಸೀದಿಯ ಖತೀಬ್ ಅಬೂಬಕರ್ ಸಿದ್ದೀಕ್ ಜಲಾಲಿ, ಬಳ್ನಾಡ್ ಮಸೀದಿಯ ಖತೀಬ್ ನಿಯಾಝ್ ದಾರಿಮಿ ಮತ್ತಿತರರು 11 ಶಾಲೆಗಳಲ್ಲಿ ಪ್ರೇರಣಾ ಶಿಬಿರ, ಸ್ಟಡಿ ಸ್ಕಿಲ್ ಟ್ರೈನಿಂಗ್, ಪರೀಕ್ಷೆಯನ್ನು ಎದುರಿಸುವ ಸಾಮರ್ಥ್ಯದ ತರಬೇತಿ ನೀಡಿದ್ದಾರೆ. ಇದರಿಂದ ಸುಮಾರು 1,300 ವಿದ್ಯಾರ್ಥಿಗಳು ಪ್ರಯೋಜ ಪಡೆದಿದ್ದಾರೆ. ಇದಕ್ಕೆ ಶಿಕ್ಷಣಾಧಿಕಾರಿ ಲೋಕೇಶ್ ಕೂಡ ಸಾಥ್ ನೀಡಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾದ ಉಮರ್ ಯು.ಎಚ್., ರಫೀಕ್ ಮಾಸ್ಟರ್ ಮತ್ತು ಮೌಲಾನ ಅಝಾದ್ ಶಾಲೆಯ ಪ್ರಾಂಶುಪಾಲ ತೌಫೀಕ್ ಪ್ರೇರಣಾ ಶಿಬಿರ ನಡೆಸಿ ಕೊಡುತ್ತಿದ್ದಾರೆ.

ಸಮುದಾಯದ ಭವಿಷ್ಯದ ಹಿತದೃಷ್ಟಿಯಿಂದ ಮಕ್ಕಳಿಗೆ ಸಕಾಲಕ್ಕೆ ಮಾರ್ಗದರ್ಶನ ನೀಡುವುದು ನಮ್ಮ ಜವಾಬ್ದಾರಿಯಾಗಿದೆ. ಅದಕ್ಕಾಗಿ ನಾವೆಲ್ಲಾ ಸೇರಿ ಮನೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ನಮ್ಮ ಉದ್ದೇಶ ಈಡೇರುವ ವಿಶ್ವಾಸವಿದೆ.

ಅಬೂಬಕರ್ ಸಿದ್ದೀಕ್ ಜಲಾಲಿ

ಖತೀಬ್, ಕಲ್ಲೆಗ ಜುಮಾ ಮಸೀದಿ

ಕೊರೋನ ಕಾಲದ ಸುದೀರ್ಘ ರಜೆಯಿಂದ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮತ್ತು ಕಲಿಕಾ ಸಾಮರ್ಥ್ಯದ ಕೊರತೆ ಎದ್ದು ಕಾಣುತ್ತಿರುವುದನ್ನು ಮನಗಂಡ ನಾನು ಶಿಕ್ಷಕರ ಸಹಕಾರದಿಂದ ಎಸೆಸೆಲ್ಸಿ ವಿದ್ಯಾರ್ಥಿಗಳ ಮನೆ ಮನೆಗೆ ಭೇಟಿ ನೀಡಿ ಕಲಿಕೆಗೆ ಉತ್ತೇಜನ ನೀಡುವುದನ್ನು ಕಂಡ ಸಾಮಾಜಿಕ ಕಳಕಳಿಯ ಸ್ಥಳೀಯ ಮುಸ್ಲಿಮರು ನಮ್ಮ ಜೊತೆ ಕೈ ಜೋಡಿಸಿದರು. ಅವರೊಂದಿಗೆ ಮಸೀದಿಯ ಧರ್ಮಗುರುಗಳು ಕೂಡ ಮನೆ ಮನೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡಿರುವುದು ಒಳ್ಳೆಯ ಬೆಳವಣಿಗೆ.

 ಲೋಕೇಶ್, ಶಿಕ್ಷಣಾಧಿಕಾರಿ ಪುತ್ತೂರು ತಾಲೂಕು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X