Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಮದ್ಯ ಸಾಗಿಸುತ್ತಿದ್ದ...

ಚಿಕ್ಕಮಗಳೂರು: ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ; ಬಿಯರ್ ಬಾಟಲಿಗಳಿಗೆ ಮುಗಿಬಿದ್ದ ಜನತೆ

ವಾರ್ತಾಭಾರತಿವಾರ್ತಾಭಾರತಿ20 April 2021 8:49 PM IST
share
ಚಿಕ್ಕಮಗಳೂರು: ಮದ್ಯ ಸಾಗಿಸುತ್ತಿದ್ದ ಲಾರಿ ಪಲ್ಟಿ; ಬಿಯರ್ ಬಾಟಲಿಗಳಿಗೆ ಮುಗಿಬಿದ್ದ ಜನತೆ

ಚಿಕ್ಕಮಗಳೂರು, ಎ.20: ಬಿಯರ್ ಬಾಟಲುಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ನಡೆದಿದ್ದು, ಮದ್ಯಕ್ಕಾಗಿ ಜನರು ಮುಗಿಬಿದ್ದ ಘಟನೆ ವರದಿಯಾಗಿದೆ.

ಲಾರಿ ಪಲ್ಟಿಯಾದ ಪರಿಣಾಮ ಮದ್ಯದ ಬಾಟಲಿಗಳು ರಸ್ತೆಗೆ ಉರುಳಿ ಬಿದ್ದುದನ್ನು ಕಂಡ ಗ್ರಾಮದ ಜನರು ಮದ್ಯದ ಬಾಟಲಿಗಳನ್ನು ಹೆಕ್ಕಿಕೊಳ್ಳಲು ಮುಗಿಬಿದ್ದಿದ್ದಾರೆ.

ಕಿಂಗ್‍ಫಿಶರ್ ಕಂಪೆನಿಯ ಬಿಯರ್ ಬಾಟಲಿಗಳನ್ನು ತುಂಬಿಕೊಂಡು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಲಾರಿ ಮಂಗಳವಾರ ಮಧ್ಯಾಹ್ನ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ವೇಳೆ ಲಾರಿಯಲ್ಲಿದ್ದ ಮದ್ಯದ ಬಾಟಲಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ. ಇದನ್ನು ಕಂಡ ಗ್ರಾಮದ ಯುವಕರೂ ಸೇರಿದಂತೆ ವಯೋವೃದ್ಧರು, ಮಹಿಳೆಯರು ಒಮ್ಮೆಲೆ ಲಾರಿಗೆ ಮುತ್ತಿಗೆ ಹಾಕಿ ಕೈಗೆ ಸಿಕ್ಕಷ್ಟು ಬಿಯರ್ ಬಾಟಲಿಗಳನ್ನು ಕೊಂಡೊಯ್ದಿದ್ದಾರೆ.

ಸುದ್ದಿ ತಿಳಿದ ಮತ್ತಷ್ಟು ಜನರು ಪಲ್ಟಿಯಾಗಿದ್ದ ಲಾರಿಯಲ್ಲಿದ್ದ ಬಾಕ್ಸ್ ಗಟ್ಟಲೆ ಬಿಯರ್ ಬಾಟಲಿಗಳನ್ನು ಹೊತ್ತೊಯ್ಯಲು ಆಗಮಿಸಿದ್ದರಿಂದ ಸ್ಥಳದಲ್ಲಿ ಜನಜಂಗುಳಿ ನಿರ್ಮಾಣವಾಗಿತ್ತು. ಕೂಡಲೇ ಸ್ಥಕ್ಕೆ ತರೀಕೆರೆ ಪೊಲೀಸರು ಬಂದು ಜನರನ್ನು ನಿಯಂತ್ರಿಸಲು ಪ್ರಯತ್ನಿಸಿದರಾದರೂ ಅಷ್ಟರಲ್ಲಾಗಲೇ ಲಾರಿಯಲ್ಲಿದ್ದ ಅರ್ಧದಷ್ಟು ಬಿಯರ್ ಬಾಟಲಿಗಳು ನಾಪತ್ತೆಯಾಗಿದ್ದವು. ಪೊಲೀಸರು ಲಾಠಿ ಬೀಸಿದರೂ ಜನರು ಮಾತ್ರ ಲಾಠಿ ಏಟು ತಿನ್ನುತ್ತಲೇ ಬಿಯರ್ ಬಾಟಲಿಗಳಿಗಾಗಿ ತಡಕಾಡುತ್ತಿದ್ದ ದೃಶ್ಯ ಕಂಡು ಬಂತು.

ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಮತ್ತೋರ್ವ ಸಿಬ್ಬಂದಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮದ ಜನರು ಪಲ್ಟಿಯಾಗಿ ಬಿದ್ದಿದ್ದ ಲಾರಿಯಲ್ಲಿನ ಬಿಯರ್ ಬಾಟಲಿಗಳನ್ನು ಪೊಲೀಸರ ಲಾಠಿಗೂ ಬಗ್ಗದೇ ಆರಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X