Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಧಿಕಾರಿಗಳ ವಿರುದ್ಧ ಹಸಿರು ಪೀಠಕ್ಕೆ...

ಅಧಿಕಾರಿಗಳ ವಿರುದ್ಧ ಹಸಿರು ಪೀಠಕ್ಕೆ ದೂರು: ದಿನೇಶ್ ಗಾಣಿಗ

​‘ಉಡುಪಿ ಜಿಲ್ಲಾಡಳಿತದ ನಿಷ್ಕ್ರೀಯತೆಯಿಂದ ಅಗ್ನಿತೀರ್ಥ ನದಿ ಕಲುಷಿತ’

ವಾರ್ತಾಭಾರತಿವಾರ್ತಾಭಾರತಿ21 April 2021 10:00 PM IST
share

ಕುಂದಾಪುರ, ಎ.21: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಸಮೀಪ ಹರಿಯುವ ಅಗ್ನಿತೀರ್ಥ ನದಿ ಸಂಪೂರ್ಣ ಕಲುಷಿತಗೊಂಡಿರುವುದರಿಂದ ಜಲಚರಗಳು ಸಾಯುತ್ತಿದ್ದು, ಇದಕ್ಕೆ ಜಿಲ್ಲಾಡಳಿತದ ನಿಷ್ಕ್ರೀಯತೆಯೇ ಕಾರಣ. ಇದರ ವಿರುದ್ಧ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಸಾಮಾಜಿಕ ಹೋರಾಟಗಾ ದಿನೇಶ್ ಗಾಣಿಗ ಕೋಟ ತಿಳಿಸಿದ್ದಾರೆ.

ಕುಂದಾಪುರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸಮಾನ ಮನಸ್ಕರು ಕಳೆದ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದು, ಸರಕಾರದಿಂದ ಯಾವುದೇ ನ್ಯಾಯ ದೊರೆತಿಲ್ಲ. ಈ ಸಂಬಂಧ ಉಡುಪಿ ಡಿಸಿ, ಕುಂದಾಪುರ ಎಸಿ, ತಹಶಿಲ್ದಾರ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳ ವಿರುದ್ಧ ಹಸಿರು ಪೀಠಕ್ಕೆ ದೂರು ನೀಡಲಾಗುವುದು ಮತ್ತು ಸಮಾನ ಮಾನಸ್ಕ ರೊಡಗೂಡಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿಯಡಿಯಲ್ಲಿ ದಾವೆ ಹೂಡಿ ಕಾನೂನು ಹೋರಾಟ ನಡೆಸಲಾಗುವುದು ಎಂದರು.

ಅಗ್ನಿತೀರ್ಥ ನದಿಯ ಎರಡೂ ದಡದಲ್ಲಿರುವ ಕಲ್ಯಾಣಮಂಟಪ, ವಸತಿಗೃಹ, ಹೋಟೆಲ್ ಸೇರಿದಂತೆ ಅನೇಕ ವಾಣಿಜ್ಯ ಕಟ್ಟಡಗಳ ತ್ಯಾಜ್ಯ ನೀರು ನದಿಯನ್ನು ಸೇರುತ್ತಿದೆ. ದೇವಸ್ಥಾನಕ್ಕೆ ಪ್ರತಿನಿತ್ಯ ಆಗಮಿಸುವ ಭಕ್ತರು ಉಪಯೋಗಿಸಿ ಎಸೆದಿರುವ ಘನ ತ್ಯಾಜ್ಯ ಗಳು ಕೂಡ ನದಿಯನ್ನು ಸೇರಿಕೊಂಡು ಸೌಪರ್ಣಿಕ ನದಿಯು ವಿಷಪೂರಿತ ಕಲುಷಿತ ತೀರ್ಥವಾಗುತ್ತಿದೆ ಎಂದು ಅವರು ಆರೋಪಿಸಿದರು.

ವರ್ಷದ ಮಳೆಗಾಲದ ಮೂರು ತಿಂಗಳನ್ನು ಹೊರತುಪಡಿಸಿ ಉಳಿದ ಋತುಗಳಲ್ಲಿ ನೀರಿನ ನಿರಂತರ ಹರಿಯುವಿಕೆ ಇಲ್ಲದೆ ಇರುವುದರಿಂದ ವಿಷಪೂರಿತ ನೀರನ್ನು ಕುಡಿದು ಇಲ್ಲಿನ ಅಮುಲ್ಯ ಮತ್ಸ ಸಂಪತ್ತು, ಜಲಚರಗಳು ಹಾಗೂ ಮೂಕಾಂಬಿಕಾ ಅಭಯರಣ್ಯದ ಪ್ರಾಣಿ-ಸಂಕುಲಗಳು ದೊಡ್ಡ ಪ್ರಮಾಣದಲ್ಲಿ ಜೀವ ಕಳೆದುಕೊಳ್ಳುತ್ತಿವೆ. ಪರಿಸರದ ಜನರು ಸಾಂಕ್ರಾಮಿಕ ಕಾಯಿಲೆ ಗಳಿಗೆ ತುತ್ತಾಗುತ್ತಿದ್ದಾರೆ ಎಂದು ಅವರು ದೂರಿದರು.

ಸಾಮಾಜಿಕ ಕಾರ್ಯಕರ್ತ ಹರೀಶ್ ತೋಳಾರ್ ಕೊಲ್ಲೂರು ಮಾತನಾಡಿ, ಸೌಪರ್ಣಿಕ ನದಿಯ ಮಾಲೀನ್ಯತೆಯ ಬಗ್ಗೆ ಅರಿವು ಇಲ್ಲದ ಭಕ್ತರು ಈ ವಿಷಪೂರಿತ ನೀರಿನಲ್ಲೇ ಪುಣ್ಯ ಸ್ನಾನ ಮಾಡುವುದರಿಂದ ಚರ್ಮ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಕುರಿತು ಸಾಕಷ್ಟು ದೂರುಗಳನ್ನು ನೀಡಿದ್ದರೂ ಯಾವುದೇ ಸರಕಾರದ ಪರಿಹಾರಕ್ಕೆ ಸೂಕ್ತವಾಗಿ ಸ್ಪಂದಿಸಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ವಿವೇಕ್ ಜಿ.ಸುವರ್ಣ, ಧನಂಜಯ್ ಕುಂದಾಪುರ, ರಾಜೇಂದ್ರ ಸಂಗಮ್ ಹಾಜರಿದ್ದರು.

ನದಿ, ಅರಣ್ಯ ಭೂಮಿ ಅತಿಕ್ರಮಣ

ನದಿ ಹಾಗೂ ಅರಣ್ಯ ಭೂಮಿಯನ್ನು ಅತಿಕ್ರಮಿಸಿ, ಅನಧಿಕೃತ ವಸತಿಗೃಹ ಹಾಗೂ ಹೋಟೆಲ್‌ಗಳನ್ನು ನಿರ್ಮಿಸಲಾಗಿದೆ. ಕೊಲ್ಲೂರು ಗ್ರಾಮದ ಸರ್ವೇ ನಂಬ್ರ: 56ರಲ್ಲಿರುವ ಒಟ್ಟು 15,764.48 ಎಕರೆ ಭೂಮಿಯಲ್ಲಿ 2.20 ಎಕರೆ ಕೊಲ್ಲೂರು ದೇವಸ್ಥಾನದ ಭೂಮಿಯಾಗಿದೆ. 0.20ಎಕರೆ ಸ್ಮಶಾನಕ್ಕೆ ಮೀಸಲಿಡ ಲಾಗಿದೆ. ಬಾಕಿ ಉಳಿದಿರುವ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಇದರಲ್ಲಿ 866.75 ಎಕರೆ ಸಂರಕ್ಷಿತ ಅರಣ್ಯ ಪ್ರದೇಶವಾಗಿದೆ ಎಂದು ಹರೀಶ್ ತೋಳಾರ್ ಕೊಲ್ಲೂರು ತಿಳಿಸಿದರು.

ವನ್ಯಜೀವಿ ಸಂರಕ್ಷಣಾ ಕಾಯ್ದೆಗೆ ವಿರೋಧ ಸಂರಕ್ಷಣಾ ಮೀಸಲು ಅರಣ್ಯ ಭೂಮಿಯನ್ನು ಹಾಗೂ ನದಿ ಪ್ರದೇಶವನ್ನು ಅತಿಕ್ರಮಿಸಿ ಕೋಟ್ಯಾಂತರ ರೂಪಾಯಿ ಸಾರ್ವಜನಿಕರ ಹಣವನ್ನು ವೆಚ್ಚ ಮಾಡಿರುವವರ ಕುರಿತು ಸರಕಾರ ಐಎಎಸ್ ಅಥವಾ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆಯನ್ನು ನಡೆಸಬೇಕು ಎಂದು ಅವರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X