Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಜ್ಞರ ಸಮಿತಿ ವರದಿ ನೀಡಿದ್ದರೂ ಕ್ರಮ...

ತಜ್ಞರ ಸಮಿತಿ ವರದಿ ನೀಡಿದ್ದರೂ ಕ್ರಮ ವಹಿಸದೆ ಈಗ ಬೆಲೆ ತೆರುವಂತಾಗಿದೆ: ರಾಜ್ಯ ಸರಕಾರದ ವಿರುದ್ಧ ಸಿ.ಟಿ.ರವಿ ಆಕ್ರೋಶ

''ಜನರು ಸರಕಾರದ ಮೇಲೆ ನಂಬಿಕೆ ಕಳೆದುಕೊಳ್ಳುವಂತಾಗಿದೆ''

ವಾರ್ತಾಭಾರತಿವಾರ್ತಾಭಾರತಿ22 April 2021 5:38 PM IST
share
ತಜ್ಞರ ಸಮಿತಿ ವರದಿ ನೀಡಿದ್ದರೂ ಕ್ರಮ ವಹಿಸದೆ ಈಗ ಬೆಲೆ ತೆರುವಂತಾಗಿದೆ: ರಾಜ್ಯ ಸರಕಾರದ ವಿರುದ್ಧ ಸಿ.ಟಿ.ರವಿ ಆಕ್ರೋಶ

ಬೆಂಗಳೂರು, ಎ. 22: `ಕೊರೋನ ವೈರಸ್ ಸೋಂಕಿನ ಬಗ್ಗೆ ರಾಜ್ಯ ಸರಕಾರ ಗಂಭೀರವಾಗಿ ಆಲೋಚನೆ ಮಾಡುತ್ತಿಲ್ಲ. ತಜ್ಞರ ಸಮಿತಿ ವರದಿ ನೀಡಿದ್ದರೂ ಈ ಬಗ್ಗೆ ಸರಕಾರ ಕ್ರಮ ವಹಿಸದೆ ಒತ್ತಡಗಳಿಗೆ ಮಣಿದ ಪರಿಣಾಮ ಇದೀಗ ಅದಕ್ಕೆ ತಕ್ಕ ಬೆಲೆ ತೆರುವಂತಾಗಿದೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಇಂದಿಲ್ಲಿ ತಮ್ಮ ಸರಕಾರದ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ.

ಗುರುವಾರ ಇಲ್ಲಿನ ಮಾಗಡಿ ರಸ್ತೆಯಲ್ಲಿನ ಸುಮನಹಳ್ಳಿ ವಿದ್ಯುತ್ ಚಿತಾಗಾರಕ್ಕೆ ಖುದ್ದು ಭೇಟಿ ನೀಡಿ ಮಾತನಾಡಿದ ಅವರು, ಇಲ್ಲಿಗೆ ವಾಸ್ತವ ಪರಿಸ್ಥಿತಿಯನ್ನು ನೋಡಲು ಬಂದಿದ್ದೇನೆ. ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಪಕ್ಷದಿಂದ ಸ್ವಯಂ ಸೇವಕರನ್ನು ನಿಯೋಜಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ. ನೂರಕ್ಕೂ ಹೆಚ್ಚು ಸ್ವಯಂ ಸೇವಕರು ಕೊರೋನ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದರು.

ಬೆಂಗಳೂರು ನಗರದಲ್ಲಿ ಚಿತಾಗಾರಗಳಲ್ಲಿ ಒತ್ತಡ ಹೆಚ್ಚಾಗಿದೆ. ಮಾಗಡಿ ರಸ್ತೆಯಲ್ಲಿ ದಿನಕ್ಕೆ 16 ಮೃತದೇಹ ವಿಲೇವಾರಿ ಮಾಡುತ್ತಿದ್ದವರು, ಇದೀಗ 40 ಮೃತದೇಹ ದಹನ ಮಾಡುತ್ತಿದ್ದಾರೆ. ಇದರಿಂದ ಸ್ಮಶಾನದಲ್ಲಿ ಸಿಬ್ಬಂದಿ ಕೆಲಸ ಮಾಡಲು ಆಗುತ್ತಿಲ್ಲ. ಇದೊಂದು ದುರ್ದೈವದ ಸಂಗತಿ. ತಾತ್ಕಾಲಿಕ ಚಿತಾಗಾರ ವ್ಯವಸ್ಥೆ ಕಲ್ಪಿಸಲು ಸರಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಸಿ.ಟಿ.ರವಿ ತಿಳಿಸಿದರು.

ಎಲ್ಲೋ ಬೇರೆ ದೇಶಗಳಲ್ಲಿ ಕೊರೋನ ಸೋಂಕಿನಿಂದ ಆಗುತ್ತಿದ್ದ ಸಾವುಗಳನ್ನು ಕೇಳುತ್ತಿದ್ದ ನಾವಿಂದು ನಮ್ಮ ಮನೆ ಬಾಗಿಲಿನಲ್ಲೇ ಆ ಪರಿಸ್ಥಿತಿಯನ್ನು ನೋಡುತ್ತಿದ್ದೇವೆ. ಏಕಾಏಕಿ ಹದಿನೈದು ಪಟ್ಟು ಸೋಂಕಿತರ ಮತ್ತು ಸಾವಿನ ಪ್ರಮಾಣ ಜಾಸ್ತಿಯಾಗಿದೆ. ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ, ಸಚಿವರಾದ ಸುಧಾಕರ್ ಹಾಗೂ ಆರ್.ಅಶೋಕ್ ಜತೆ ಮಾತನಾಡಿದ್ದೇನೆ. ಜನರು ಸರಕಾರದ ಮೇಲೆ ನಂಬಿಕೆ ಕಳೆದುಕೊಳ್ಳುವಂತಾಗಿದೆ ಎಂದು ಸಿ.ಟಿ.ರವಿ ಬೇಸರ ವ್ಯಕ್ತಪಡಿಸಿದರು.

ಕೊರೋನ ಸೋಂಕಿತರಿಗೆ ಸೂಕ್ತ ಹಾಸಿಗೆ, ಆಕ್ಸಿಜನ್ ಸಿಗದೇ ಇರುವುದು ಕಳವಳಕಾರಿ ಸಂಗತಿ. ಒಂದೇ ವಾರದಲ್ಲಿ ಹದಿನೈದು ಪಟ್ಟು ರೋಗಿಗಳ ಪ್ರಮಾಣದಲ್ಲಿ ಜಾಸ್ತಿಯಾಗಿದೆ. ಅದಕ್ಕೆ ಸರಕಾರ ಪೂರ್ವ ಸಿದ್ಧತೆ ಮಾಡಿಕೊಂಡಿಲ್ಲ ಎಂಬುದು ಎದ್ದು ಕಾಣುತ್ತದೆ. ತಜ್ಞರು ನೀಡಿದ ವರದಿಯನ್ನು ಆಧರಿಸಿ ಯಾರ ಮುಲಾಜಿಗೂ ಒಳಗಾಗದೇ ಬಂದ್ ಮಾಡಬೇಕಿತ್ತು ಎಂದ ಸಿ.ಟಿ.ರವಿ, ಆಕ್ಸಿಜನ್ ಪೂರೈಕೆ ಸಂಬಂಧ ಕೇಂದ್ರ ಸಚಿವರೊಂದಿಗೆ ಚರ್ಚಿಸಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X