Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ: ಅಂಗಡಿಗಳನ್ನು ಮುಚ್ಚಿಸಿದ...

​ಉಡುಪಿ: ಅಂಗಡಿಗಳನ್ನು ಮುಚ್ಚಿಸಿದ ನಗರಸಭೆ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ22 April 2021 5:46 PM IST
share
​ಉಡುಪಿ: ಅಂಗಡಿಗಳನ್ನು ಮುಚ್ಚಿಸಿದ ನಗರಸಭೆ ಅಧಿಕಾರಿಗಳು

ಉಡುಪಿ, ಎ.22: ಕೊರೋನ ನಿಯಂತ್ರಣಕ್ಕಾಗಿ ಸರಕಾರ ರಾಜ್ಯಾದ್ಯಂತ ಮೇ 4ರವರೆಗೆ ನಿಷೇಧಾಜ್ಞೆ ಹೇರಿರುವ ಹಿನ್ನೆಲೆಯಲ್ಲಿ ಇಂದು ಅಪರಾಹ್ನದ ಬಳಿಕ ನಗರದೊಳಗೆ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಅಂಗಡಿ-ಮುಂಗಟ್ಟುಗಳನ್ನು ನಗರಸಭೆಯ ಅಧಿಕಾರಿಗಳು ಮುಚ್ಚಿಸಿದರು.

ಅಂಗಡಿಗಳನ್ನು ಮುಚ್ಚುವಂತೆ ಮೈಕ್ ಮೂಲಕ ತಿಳಿಸಿದ ಅಧಿಕಾರಿಗಳು, ಮುಚ್ಚುವ ಲಕ್ಷಣ ಕಾಣಿಸದ ಅಂಗಡಿಗಳಿಗೆ ತೆರಳಿ ಅರ್ಧಗಂಟೆಯೊಳಗೆ ಅಂಗಡಿಯನ್ನು ಮುಚ್ಚುವಂತೆ ತಿಳಿಸಿದರಲ್ಲದೇ, ಇಲ್ಲದೇ ಹೋದರೆ ಕ್ರಿಮಿನಲ್ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಿದರು.

ಕೇವಲ ಆಹಾರ ಸಾಮಗ್ರಿಗಳ ಅಂಗಡಿಗಳು, ಕಟ್ಟಡ ನಿರ್ಮಾಣದ ವಸ್ತುಗಳನ್ನು ಮಾರುವ ಅಂಗಡಿಗಳನ್ನು ಮಾತ್ರ ತೆರೆದಿಡಲು ಅನುಮತಿ ನೀಡಿದರಲ್ಲದೇ, ಎಲೆಕ್ಟ್ರಾನಿಕ್ಸ್, ಬಟ್ಟೆ, ಟಯರ್, ಫ್ಯಾನ್ಸಿ ಸ್ಟೋರ್, ಜ್ಯುವೆಲ್ಲರಿ ಶಾಪ್, ಟೆಕ್ಸ್‌ಟೈಲ್ ಸೇರಿದಂತೆ ಪ್ರತಿಯೊಂದು ಅಂಗಡಿಗಳನ್ನು ಮುಚ್ಚುವಂತೆ ಪ್ರಕಟಿಸುತ್ತಾ ಹೋದರು.

ಈ ವಿಷಯದಲ್ಲಿ ಅವರು ಯಾರಿಗೂ ರಿಯಾಯಿತಿಗಳನ್ನು ನೀಡಲಿಲ್ಲ. ಹೊಟೇಲ್, ಬೇಕರಿಗಳಲ್ಲೂ ತಿಂಡಿಗಳನ್ನು ಅಲ್ಲಿ ತಿನ್ನಲು ಅವಕಾಶ ನೀಡದೇ, ಕೇವಲ ಪಾರ್ಸೆಲ್‌ಗಳನ್ನು ಮಾತ್ರ ನೀಡುವಂತೆ ತಾಕೀತು ಮಾಡಿದರು. ಅಲ್ಲೂ ಜನರು ಸೇರದಂತೆ ಜಾಗೃತೆ ವಹಿಸುವಂತೆ ಅವರು ತಿಳಿಸಿದರು.

ಮಾಲ್‌ಗಳನ್ನು ತೆರೆಯಲು ಅವಕಾಶವೇ ಇಲ್ಲ ಎಂದ ಅವರು, ಮೇ 4ರವರೆಗೆ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಉಳಿದ ಯಾರಿಗೂ ಅಂಗಡಿ ತೆರೆಯಲು ಅವಕಾಶವಿಲ್ಲ. ತೆರೆದರೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ತಿಳಿಸಿದರು.

ಒಂದು ರೀತಿಯಲ್ಲಿ ಇದು ಲಾಕ್‌ಡೌನ್ ಹೇರಿದಂತೆ ಆಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮಾತ್ರ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ಉಳಿದವರು ಹೊಟ್ಟೆಗೆ ಏನು ತಿನ್ನಬೇಕು ಎಂದು ಅಧಿಕಾರಿಗಳ ಪ್ರಕಟಣೆಯನ್ನು ಕೇಳುತಿದ್ದ ಸಾರ್ವಜನಿಕರು ಪರಸ್ಪರ ಮಾತನಾಡಿಕೊಳ್ಳುತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X