Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ ಚಿತಾಗಾರಗಳ ಮುಂದೆ ಸರತಿ...

ಬೆಂಗಳೂರಿನ ಚಿತಾಗಾರಗಳ ಮುಂದೆ ಸರತಿ ಸಾಲಿನಲ್ಲಿ ಆಂಬ್ಯುಲೆನ್ಸ್ ಗಳು: ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ವಾರ್ತಾಭಾರತಿವಾರ್ತಾಭಾರತಿ22 April 2021 8:26 PM IST
share
ಬೆಂಗಳೂರಿನ ಚಿತಾಗಾರಗಳ ಮುಂದೆ ಸರತಿ ಸಾಲಿನಲ್ಲಿ ಆಂಬ್ಯುಲೆನ್ಸ್ ಗಳು: ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ಬೆಂಗಳೂರು, ಎ.22: ಪಾಲಿಕೆಯ ಎಲ್ಲ 12 ವಿದ್ಯುತ್ ಚಿತಾಗಾರಗಳ ಮುಂದೆಯೂ ಕೊರೋನ ಸೋಂಕಿನಿಂದ ಜೀವ ಕಳೆದುಕೊಂಡವರ ಶವಗಳನ್ನು ಹೊತ್ತ ಆಂಬ್ಯುಲೆನ್ಸ್ ಗಳು ಸಾಲು ಸಾಲಾಗಿ ನಿಂತಿದ್ದು, ಮತ್ತೊಂದು ಕಡೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಜತೆಗೆ ಅಂತಿಮ ಸಂಸ್ಕಾರಕ್ಕೆ ರಾತ್ರಿ, ಹಗಲು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊರೋನ ಸೋಂಕಿತರು ಮತ್ತು ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ. ಸೋಂಕಿತರನ್ನು ದಾಖಲು ಮಾಡಿಕೊಳ್ಳಲು ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ ಹಾಗೂ ಮೃತರನ್ನು ಸಕಾಲದಲ್ಲಿ ಸುಡಲು ಸ್ಮಶಾನದಲ್ಲಿ ಆಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳು ಕೇಳಿಬರುತ್ತಿವೆ/

ಕೆಂಗೇರಿ, ಸುಮನಹಳ್ಳಿ, ಪೀಣ್ಯ, ಮೇಡಿ ಅಗ್ರಹಾರ, ಹೆಬ್ಬಾಳ ಕೆಂಪಾಪುರ, ಕೂಡ್ಲು, ಪಣತ್ತೂರು, ಕಲ್ಲಹಳ್ಳಿ, ಹರಿಶ್ಚಂದ್ರಘಾಟ್, ಮೈಸೂರು ರಸ್ತೆ, ಬನಶಂಕರಿ, ವಿಲ್ಸನ್ ಗಾರ್ಡನ್ ಚಿತಾಗಾರಗಳ ಮುಂದೆ ಸರತಿ ಸಾಲಿನಲ್ಲಿ ಆಂಬ್ಯುಲೆನ್ಸ್ ಗಳು ನಿಂತಿವೆ. ಚಿತಾಗಾರಗಳ ಸಿಬ್ಬಂದಿಗಳು ಶವಗಳನ್ನು ಸುಡುವ ಕಾರ್ಯವನ್ನು ಮುಂದುವರಿಸಿದ್ದಾರೆ. ಇದರ ಮಧ್ಯೆ ವಿದ್ಯುತ್ ಪದೇ ಪದೇ ಕೈಕೊಡುತ್ತಿದೆ. ಮೃತದೇಹ ದಹನ ಮಾಡಲು ಅಧಿಕಾರಿಗಳು, ರಾಜಕಾರಣಿಗಳು ಕರೆ ಮಾಡಿ ಪ್ರಭಾವ ಬಳಸಿ ತಮ್ಮ ಸಂಬಂಧಿಕರ ಮೃತದೇಹ ಮೊದಲು ದಹನ ಮಾಡಿ ಎನ್ನುತ್ತಿದ್ದಾರೆ ಎಂದು ದೂರಲಾಗಿದ್ದು, ಇದರಿಂದ ಕೆಲಸ ಮಾಡಲು ಕಷ್ಟವಾಗುತ್ತಿದೆ ಎಂದು ಸಿಬ್ಬಂದಿ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಜನಸಾಮಾನ್ಯರು ದಿನಗಟ್ಟಲೇ ಕಾದು ಕುಳಿತುಕೊಂಡರೂ ಮೃತದೇಹಗಳು ದಹನ ಆಗುತ್ತಿಲ್ಲ ಎಂದು ಹಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. 'ಹತ್ತಾರು ಆಸ್ಪತ್ರೆ ತಿರುಗಿದರೂ ಬೆಡ್ ಸಿಗಲಿಲ್ಲ. ಒಂದು ಆಸ್ಪತ್ರೆಯಲ್ಲಿ ಕಾಲಿಗೆ ಬಿದ್ದರೂ ಬೆಡ್ ಕೊಡಲಿಲ್ಲ. ಕೊನೆಗೆ ವಿಜಯನಗರದ ಆಸ್ಪತ್ರೆಗೆ ದಾಖಲಿಸಿದರೆ ಒಂದೇ ದಿನಕ್ಕೆ 1.14 ಲಕ್ಷ ಬಿಲ್ ಮಾಡಿದ್ದಾರೆ. ಆದರೂ ಆಕ್ಸಿಜನ್ ಸಿಗದೆ ಸಾವನ್ನಪ್ಪಿದರು. ಎ.21ರ ರಾತ್ರಿ 10 ಗಂಟೆಯಿಂದ ಸುಮನಹಳ್ಳಿ ಚಿತಾಗಾರದ ಬಳಿ ಬಂದು ಪೊಲೀಸ್ ಸಿಬ್ಬಂದಿ ಕಾಯುತ್ತಿದ್ದರು. ಆದರೂ ಎ.22ರ ಮಧ್ಯಾಹ್ನ ಆದರೂ ಅಂತ್ಯಕ್ರಿಯೆ ನೆರವೇರಿಸಲು ಆಗಲಿಲ್ಲ ಎಂದು ಚಿತಾಗಾರದ ಬಳಿ ಇದ್ದವರೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಒಂದು ಶವವನ್ನು ದಹನ ಮಾಡಲು ಕನಿಷ್ಠ 2 ರಿಂದ 3 ಗಂಟೆ ಬೇಕಾಗುತ್ತದೆ. ಈ ಹಿಂದೆ 2 ರಿಂದ 3 ಶವಗಳ ಸಂಸ್ಕಾರ ನಡೆಯುತ್ತಿತ್ತು. ಆದರೆ, ಕಳೆದ ಒಂದು ವಾರದಿಂದ ಪ್ರತಿ ಚಿತಾಗಾರದಲ್ಲೂ 20 ರಿಂದ 30 ಶವಗಳನ್ನು ಸುಡುತ್ತಿದ್ದರೂ ಸಾಕಾಗುತ್ತಿಲ್ಲ. ಚಿತಾಗಾರದ ಸಿಬ್ಬಂದಿ ಅಂತ್ಯ ಸಂಸ್ಕಾರ ನೆರವೇರಿಸಿ ಹೈರಾಣಾಗುತ್ತಿದ್ದಾರೆ.

ಇದರ ಮಧ್ಯೆ ಆಂಬ್ಯುಲೆನ್ಸ್ ನವರು ಮೃತದೇಹಗಳನ್ನು ಸಾಗಿಸಲು ಬೇಕಾಬಿಟ್ಟಿ ಹಣ ಕೇಳುತ್ತಿರುವ ಘಟನೆಗಳು ನಡೆಯುತ್ತಿವೆ ಎಂಬ ಆರೋಪಗಳಿವೆ. ರಾಜಧಾನಿಯಲ್ಲಿ ಕೊರೋನ ಸಾವುಗಳು ಒಂದೆಡೆಯಾದರೆ ಈ ಪರಿಸ್ಥಿತಿಯ ಲಾಭ ಪಡೆಯಲು ಆಂಬ್ಯುಲೆನ್ಸ್ ಚಾಲಕರು 15 ರಿಂದ 20 ಸಾವಿರ ರೂ.ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಹೆಣ ಸಾಗಿಸಲು ಎ.21ರಂದು ಮಹಿಳೆಯೊಬ್ಬರಿಂದ 60 ಸಾವಿರ ರೂ. ಬೇಡಿಕೆ ಇಟ್ಟಾಗ ಆ ಮಹಿಳೆ ತನ್ನ ತಾಳಿ ಮಾರಲು ಮುಂದಾಗಿದ್ದುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇಂತಹ ಅನೇಕ ಮನಕಲಕುವ ಘಟನೆಗಳು ನಡೆದಿವೆ.

ಪ್ರತಿ ಚಿತಾಗಾರದ ಮುಂದೆ ಸಂಬಂಧಿಕರ ಆಕ್ರಂದನ ಹೇಳ ತೀರದಾಗಿದೆ. ತಾಯಿಯನ್ನು ಕಳೆದುಕೊಂಡ ಮಗಳು, ಅಪ್ಪನನ್ನು ಕಳೆದುಕೊಂಡ ಮಗ, ಸಂಬಂಧಿಕರನ್ನು ಕಳೆದುಕೊಂಡವರು, ಸತ್ತವರನ್ನು ಸಮಾಧಾನವಾಗಿ ಕಳುಹಿಸಿಕೊಡಲೂ ಸಾಧ್ಯವಾಗುತ್ತಿಲ್ಲ ಎಂಬ ಗೋಳು ಅಲ್ಲಲ್ಲಿ ಕಂಡುಬರುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X