ನಾವು ಜೀವ ನೀಡಬೇಕಾದವರು, ಈಗ ಆಕ್ಸಿಜನ್ ಕೂಡ ನೀಡಲಾಗುತ್ತಿಲ್ಲ: ಮಾತನಾಡುತ್ತಲೇ ಕಣ್ಣೀರಿಟ್ಟ ದಿಲ್ಲಿ ಆಸ್ಪತ್ರೆ ಸಿಇಒ
ವೀಡಿಯೋ ವೀಕ್ಷಿಸಿ

ಹೊಸದಿಲ್ಲಿ: ದೇಶದಾದ್ಯಂತ ಕೋವಿಡ್ ಸೋಂಕು ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದೆ. ದೈನಂದಿನ ಮೂರು ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿವೆ. ದಿಲ್ಲಿಯಲ್ಲಿ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಹಲವಾರು ಆಸ್ಪತ್ರೆಗಳು ಆಕ್ಸಿಜನ್ ಕೊರತೆಯನ್ನೆದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ದಿಲ್ಲಿಯ ಶಾಂತಿ ಮುಖಂಡ್ ಆಸ್ಪತ್ರೆಯ ಸಿಇಒ ಸುನೀಲ್ ಸಾಗರ್ ಕಣ್ಣೀರಿಟ್ಟಿದ್ದಾರೆ.
"ನಾವು ಜನರ ಜೀವವುಳಿಸಬೇಕಾದವರು. ಈಗಾಗಲೇ ನಮ್ಮ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಡಿಸ್ಚಾರ್ಜ್ ಮಾಡಿ ಕರೆದುಕೊಂಡು ಹೋಗುವಂತೆ ಸೂಚಿಸಿದ್ದೇವೆ. ನಮ್ಮಿಂದ ಆಕ್ಸಿಜನ್ ಕೂಡಾ ಕೊಡಲು ಸಾಧ್ಯವಾಗುತ್ತಿಲ್ಲ. ಇದುವರೆಗೆ ಇಂತಹಾ ಪರಿಸ್ಥಿತಿ ಉಂಟಾಗಿರಲಿಲ್ಲ" ಎಂದು ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಸುನೀಲ್ ಕಣ್ಣೀರಿಟ್ಟಿದ್ದಾರೆ.
#WATCH | Sunil Saggar, CEO, Shanti Mukand Hospital, Delhi breaks down as he speaks about Oxygen crisis at hospital. Says "...We're hardly left with any oxygen. We've requested doctors to discharge patients, whoever can be discharged...It (Oxygen) may last for 2 hrs or something." pic.twitter.com/U7IDvW4tMG
— ANI (@ANI) April 22, 2021