Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಎಂಗಳ ಸಭೆಯಲ್ಲಿ ಶಿಷ್ಟಾಚಾರ...

ಸಿಎಂಗಳ ಸಭೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಕೇಜ್ರಿವಾಲ್: 'ಇದು ಸರಿಯಲ್ಲ' ಎಂದು ಪ್ರಧಾನಿ ಆಕ್ಷೇಪ

ಸಂಪ್ರದಾಯ ಪಾಲಿಸದ್ದಕ್ಕೆ ದಿಲ್ಲಿ ಸಿಎಂ ವಿಷಾದ

ವಾರ್ತಾಭಾರತಿವಾರ್ತಾಭಾರತಿ23 April 2021 7:59 PM IST
share
ಸಿಎಂಗಳ ಸಭೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಕೇಜ್ರಿವಾಲ್: ಇದು ಸರಿಯಲ್ಲ ಎಂದು ಪ್ರಧಾನಿ ಆಕ್ಷೇಪ

ಹೊಸದಿಲ್ಲಿ, ಎ.23: ದೇಶದಲ್ಲಿ ಕೊರೋನ ಸೋಂಕು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಶುಕ್ರವಾರ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ರೊಂದಿಗೆ ನಡೆಸಿದ ಆಂತರಿಕ ಸಂವಾದ ಟಿವಿಯಲ್ಲಿ ನೇರ ಪ್ರಸಾರವಾದ ಬಗ್ಗೆ ಕೇಜ್ರೀವಾಲ್ ಅವರ ಕಚೇರಿ ವಿಷಾದ ಸೂಚಿಸಿದೆ. ಸಭೆಯಲ್ಲಿ ಮಾತನಾಡಿದ್ದ ಕೇಜ್ರೀವಾಲ್ ‘ರಾಜಧಾನಿ ದಿಲ್ಲಿಯಲ್ಲಿ ಆಮ್ಲಜನಕದ ಸಮಸ್ಯೆ ಬಿಗಡಾಯಿಸುತ್ತಿದೆ. 

ದಿಲ್ಲಿಯ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದ ಬಹುದೊಡ್ಡ ದುರಂತವೊಂದು ಸಂಭವಿಸಬಹುದು. ಆಮ್ಲಜನಕ ಪೂರೈಕೆದಾರರನ್ನು ದಿಲ್ಲಿ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ‘ಸರ್, ದಯಮಾಡಿ. ನಿಮ್ಮ ಮಾರ್ಗದರ್ಶನದ ಅಗತ್ಯವಿದೆ’ ಎಂದು ಹೇಳಿದ್ದರು. ಇದು ಕೆಲಹೊತ್ತು ಟಿವಿಯಲ್ಲಿ ನೇರಪ್ರಸಾರ ಆಗಿತ್ತು. ಆಂತರಿಕ ಸಭೆಯ ಸಂವಾದವನ್ನು ನೇರ ಪ್ರಸಾರ ಮಾಡಿರುವುದಕ್ಕೆ ಪ್ರಧಾನಿ ಮೋದಿ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಕೇಜ್ರೀವಾಲ್ ವಿಷಾದ ಸೂಚಿಸಿದ್ದಾರೆ. 

ಸಭೆಯ ವಿವರವನ್ನು ಪ್ರಸಾರ ಮಾಡಬಾರದು ಎಂಬ ಸೂಚನೆಯನ್ನು ಕೇಂದ್ರ ಸರಕಾರ ನೀಡದ ಕಾರಣ ಮುಖ್ಯಮಂತ್ರಿ ಕೇಜ್ರೀವಾಲ್ ಆಡಿದ ಮಾತುಗಳು ಟಿವಿಯಲ್ಲಿ ಪ್ರಸಾರವಾಗಿದೆ. ಈ ಸಭೆಯಲ್ಲಿ ಪ್ರಸ್ತಾವವಾದ ವಿಷಯಗಳು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯವಾದ್ದರಿಂದ ಪ್ರಸಾರವಾಗಿದೆ. ಆದರೂ ಅನಾನುಕೂಲವಾಗಿದ್ದರೆ ವಿಷಾದಿಸ್ತುತೇವೆ ಎಂದು ಕೇಜ್ರೀವಾಲ್ರ ಕಚೇರಿ ಹೇಳಿದೆ.

‘ಆಮ್ಲಜನಕದ ಕೊರತೆಯಿಂದ ಜನತೆ ತೀವ್ರ ಸಂಕಷ್ಟದಲ್ಲಿದ್ದಾರೆ. ಮುಂದಿನ ದಿನದಲ್ಲಿ ಬಹುದೊಡ್ಡ ದುರಂತ ಸಂಭವಿಸುವ ಆತಂಕವಿದ್ದು ನಮ್ಮನ್ನು ಎಂದಿಗೂ ಕ್ಷಮಿಸಲು ನಮಗೆ ಸಾಧ್ಯವಾಗದು. ದಿಲ್ಲಿಗೆ ಬರುವ ಆಮ್ಲಜನಕದ ಲಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಎಲ್ಲಾ ಮುಖ್ಯಮಂತ್ರಿಗಳಿಗೆ ಸೂಚಿಸಬೇಕೆಂದು ನಿಮಗೆ ಕೈಮುಗಿದು ಕೇಳಿಕೊಳ್ಳುತ್ತಿದ್ದೇನೆ. ದಿಲ್ಲಿಯಲ್ಲಿ ಆಮ್ಲಜನಕ ಉತ್ಪಾದಿಸುವ ಕಾರ್ಖಾನೆಗಳು ಇಲ್ಲವೆಂದ ಮಾತ್ರಕ್ಕೆ ದಿಲ್ಲಿಯವರಿಗೆ ಆಮ್ಲಜನಕ ಪೂರೈಕೆ ಇಲ್ಲವೇ? ದಿಲ್ಲಿಗೆ ಆಮ್ಲಜನಕ ಸಾಗಿಸುವ ಲಾರಿಯನ್ನು ಬೇರೆ ರಾಜ್ಯದಲ್ಲಿ ತಡೆಹಿಡಿದಾಗ ಕೇಂದ್ರ ಸರಕಾರದ ಯಾವ ಅಧಿಕಾರಿಯ ಜತೆ ನಾನು ಮಾತನಾಡಬೇಕು ದಯವಿಟ್ಟು ಸಲಹೆ ನೀಡಿ. ಮಾನ್ಯ ಪ್ರಧಾನಿಯವರೇ, ದಿಲ್ಲಿಗೆ ಬರಬೇಕಿದ್ದ ಆಮ್ಲಜನಕದ ಸಾಗಿಸುವ ಲಾರಿಗಳನ್ನು ತಡೆಹಿಡಿದಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಫೋನ್ ಕರೆ ಮಾಡಿ ಆಮ್ಲಜನಕವನ್ನು ದಿಲ್ಲಿಗೆ ತಲುಪಿಸಲು ದಯವಿಟ್ಟು ಕ್ರಮ ಕೈಗೊಳ್ಳಿ. ಆಮ್ಲಜನಕದ ಸಮಸ್ಯೆ ಪರಿಹರಿಸಲು ರಾಷ್ಟ್ರೀಯ ನೀತಿಯನ್ನು ರೂಪಿಸಿ. ದಿಲ್ಲಿಯಲ್ಲಿ ಆಮ್ಲಜನಕದ ಕೊರತೆ ಸಮಸ್ಯೆ ಪರಿಹರಿಸಲು ಪಶ್ಚಿಮ ಬಂಗಾಳ ಮತ್ತು ಒಡಿಶಾದಿಂದ ಆಮ್ಲಜನಕವನ್ನು ವಿಮಾನದ ಮೂಲಕ ಪರಿಹರಿಸಲು ಕ್ರಮ ಕೈಗೊಳ್ಳಬೇಕು ’ ಎಂದು ಕೇಜ್ರೀವಾಲ್ ಆಗ್ರಹಿಸಿದ್ದರು.

ಇದು ಆಂತರಿಕ ಸಂವಾದವಾಗಿದ್ದು ಟಿವಿಯಲ್ಲಿ ಪ್ರಸಾರದ ಉದ್ದೇಶದ ಕಾರ್ಯಕ್ರಮವಲ್ಲ. ಇದನ್ನು ಪ್ರಸಾರ ಮಾಡುವ ಮೂಲಕ ಕೇಜ್ರೀವಾಲ್ ಮತ್ತಷ್ಟು ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಸರಕಾರದ ಮೂಲಗಳು ಪ್ರತಿಕ್ರಿಯಿಸಿವೆ. ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಿಯವರ ಖಾಸಗಿ ಸಂವಾದ ಟಿವಿಯಲ್ಲಿ ಪ್ರಸಾರವಾಗಿದೆ. ಪರಿಸ್ಥಿತಿ ಸುಧಾರಿಸಲು ತಾವು ಕೈಗೊಂಡ ಉಪಕ್ರಮಗಳ ಬಗ್ಗೆ ಎಲ್ಲಾ ಮುಖ್ಯಮಂತ್ರಿಗಳೂ ವಿವರಿಸಿದ್ದರೆ, ಕೇಜ್ರೀವಾಲ್ ಯಾವುದೇ ಪರಿಹಾರದ ಸಲಹೆ ನೀಡುವ ಬದಲು ಇದರಲ್ಲೂ ರಾಜಕೀಯ ಮಾಡಿ ಹೊಣೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸಿದ್ದಾರೆ . ಈ ಹಿಂದೆ ಪ್ರಧಾನಿ ನಡೆಸಿದ್ದ ಸಭೆಯ ಸಂದರ್ಭ ಕೇಜ್ರೀವಾಲ್ ಆಕಳಿಸಿದ್ದರು ಹಾಗೂ ನಕ್ಕಿದ್ದರು ಎಂದು ಮೂಲಗಳು ಟೀಕಿಸಿವೆ. 

ಸಂಯಮ ಕಾಯ್ದುಕೊಳ್ಳಬೇಕು: ಮೋದಿ

ಆಂತರಿಕ ಸಭೆಯ ಚರ್ಚೆ ಟಿವಿಯಲ್ಲಿ ನೇರಪ್ರಸಾರವಾಗುತ್ತಿರುವ ಬಗ್ಗೆ ಪ್ರಧಾನಿ ಮೋದಿ ತೀವ್ರ ಆಕ್ಷೇಪ ಸೂಚಿಸಿದರು. ಏನು ನಡೆಯುತ್ತಿದೆ, ಕೆಲವು ಮುಖ್ಯಮಂತ್ರಿಗಳು ತಮ್ಮ ಮಾತುಗಳನ್ನು ನೇರ ಪ್ರಸಾರ ಮಾಡಿರುವುದು ಶಿಷ್ಟಾಚಾರಕ್ಕೆ ವಿರುದ್ಧವಾಗಿದೆ. ಇದು ಸರಿಯಲ್ಲ. ಸಂಯಮ ಕಾಯ್ದುಕೊಳ್ಳಬೇಕು’ ಎಂದು ಮೋದಿ ಸೂಚಿಸಿದರು. ಓಕೆ ಸರ್. ಮುಂದಿನ ದಿನದಲ್ಲಿ ನಾವು ಜಾಗರೂಕರಾಗಿರುತ್ತೇವೆ’ ಎಂದು ಕೇಜ್ರೀವಾಲ್ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X