Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ಲಸಿಕೆಗೆ ಏಕರೂಪ ದರಕ್ಕೆ...

ಕೋವಿಡ್-19 ಲಸಿಕೆಗೆ ಏಕರೂಪ ದರಕ್ಕೆ ಪ್ರತಿಪಕ್ಷ ನಾಯಕರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 April 2021 8:20 PM IST
share
ಕೋವಿಡ್-19 ಲಸಿಕೆಗೆ ಏಕರೂಪ ದರಕ್ಕೆ ಪ್ರತಿಪಕ್ಷ ನಾಯಕರ ಆಗ್ರಹ

ಹೊಸದಿಲ್ಲಿ,ಎ.23: ಕೊರೋನವೈರಸ್ ಸಾಂಕ್ರಾಮಿಕದ ಭೀಕರ ಎರಡನೇ ಅಲೆಯ ವಿರುದ್ಧ ದೇಶವು ಹೋರಾಡುತ್ತಿರುವ ಈ ಸಂದರ್ಭದಲ್ಲಿ ಲಸಿಕೆಗೆ ಏಕರೂಪ ದರವನ್ನು ನಿಗದಿಗೊಳಿಸುವಂತೆ ಪ್ರತಿಪಕ್ಷ ನಾಯಕರು ಶುಕ್ರವಾರ ಆಗ್ರಹಿಸಿದ್ದಾರೆ.

ಕೇಂದ್ರವು ಲಸಿಕೆ ಅಭಿಯಾನದ ಮೂರನೇ ಹಂತದಡಿ ಲಸಿಕೆ ತಯಾರಿಕೆ ಕಂಪನಿಗಳು ತಮ್ಮ ಶೇ.50ರಷ್ಟು ಉತ್ಪಾದನೆಗಳನ್ನು ರಾಜ್ಯ ಸರಕಾರಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ. ಮೊದಲ 30 ಕೋಟಿ ಜನರಿಗೆ ಮಾತ್ರ ತಾನು ಲಸಿಕೆಯನ್ನು ಉಚಿತವಾಗಿ ಒದಗಿಸುವುದಾಗಿ ಕೇಂದ್ರವು ಹೇಳಿದೆ. ಅದರ ನಂತರ ಲಸಿಕೆಗಳನ್ನು ಪಡೆಯಲು ಶುಲ್ಕ ಪಾವತಿಸಬೇಕಾಗುತ್ತದೆ.

ಸರಕಾರವು ಲಸಿಕೆ ದರಗಳನ್ನು ನಿಯಂತ್ರಣದಿಂದ ಮುಕ್ತಗೊಳಿಸಿದೆ. ಹೀಗಾಗಿ ಲಸಿಕೆ ಪಡೆಯಲು ವೆಚ್ಚ ಎಲ್ಲ ರಾಜ್ಯಗಳಲ್ಲಿ ಒಂದೇ ಆಗಿರುವುದಿಲ್ಲ. ಸರಕಾರಗಳು ಸಬ್ಸಿಡಿ ಒದಗಿಸದಿದ್ದರೆ ಈವರೆಗೆ ಲಸಿಕೆ ಪಡೆಯದವರಿಗೆ ಅವು ತೀರ ದುಬಾರಿಯಾಗಲಿವೆ.
 
ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ತನ್ನ ಕೋವಿಶೀಲ್ಡ್ ಲಸಿಕೆಯ ಪ್ರತಿ ಡೋಸ್ ಅನ್ನು ರಾಜ್ಯ ಸರಕಾರಗಳಿಗೆ 400 ರೂ.ಗಳಿಗೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ 600 ರೂ.ಗಳಿಗೆ ಮಾರಾಟ ಮಾಡುವುದಾಗಿ ಪ್ರಕಟಿಸಿದೆ. ಹಾಲಿ ಖರೀದಿ ಬೇಡಿಕೆಯು ಅಂತ್ಯಗೊಂಡ ಬಳಿಕ ಸೀರಮ್ ಕಂಪನಿಯು ಕೇಂದ್ರಕ್ಕೆ ಕೋವಿಶೀಲ್ಡ್ ಲಸಿಕೆಯನ್ನು ಪ್ರತಿ ಡೋಸ್ಗೆ 400 ರೂ.ನಂತೆ ಮಾರಾಟ ಮಾಡಲಿದೆ. ಈವರೆಗೆ ಕೇಂದ್ರವು ಪ್ರತಿ ಡೋಸ್ಗೆ 150 ರೂ.ನಂತೆ ಖರೀದಿಸುತ್ತಿತ್ತು ಮತ್ತು ಸರಕಾರಿ ಆಸ್ಪತ್ರೆಗಳು ಲಸಿಕೆಯನ್ನು ಉಚಿತವಾಗಿ ವಿತರಿಸಲು ಅವಕಾಶವನ್ನು ನೀಡಿತ್ತು.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆದ ವರ್ಚುಚಲ್ ಸಭೆಯಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಲಸಿಕೆಗಾಗಿ ರಾಜ್ಯ ಸರಕಾರಗಳಿಗೆ ಮತ್ತು ಕೇಂದ್ರಕ್ಕೆ ವಿಭಿನ್ನ ದರಗಳನ್ನು ಆಕ್ಷೇಪಿಸಿದರು. ‘ಒಂದು ದೇಶ ಒಂದು ದರ ’ ನೀತಿಯನ್ನು ಅನುಸರಿಸಬೇಕು ಎಂದು ಅವರು ಆಗ್ರಹಿಸಿದರು.

ಲಸಿಕೆಗಳಿಗೆ ವಿಭಿನ್ನ ದರಗಳನ್ನು ನಿಗದಿಗೊಳಿಸಿರುವ ಸರಕಾರದ ನಿರ್ಧಾರವು ತಾರತಮ್ಯದಿಂದ ಕೂಡಿದೆ ಎಂದು ಹೇಳಿದ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು,ಅದನ್ನು ರಾಜ್ಯ ಸರಕಾರಗಳು ಸರ್ವಾನುಮತದಿಂದ ತಿರಸ್ಕರಿಸಬೇಕು. ತಯಾರಕರೊಂದಿಗೆ ಏಕರೂಪ ದರವನ್ನು ನಿಗದಿಗೊಳಿಸಲು ರಾಜ್ಯ ಸರಕಾರಗಳು ಜಂಟಿಯಾಗಿ ಬೆಲೆ ಸಂಧಾನ ಸಮಿತಿಯೊಂದನ್ನು ರಚಿಸಬೇಕು ಎಂದು ಸಲಹೆ ನೀಡಿದರು. ಕೇಂದ್ರವು ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದೆ ಮತ್ತು ಕಾರ್ಪೊರೇಟ್ ಲಾಭಬಡುಕತನಕ್ಕೆ ಶರಣಾಗುತ್ತಿದೆ ಎಂದು ಅವರು ಆರೋಪಿಸಿದರು.

ಸರಕಾರದ ನಿರ್ಧಾರವು ಅತ್ಯಂತ ವಿಲಕ್ಷಣವಾಗಿದೆ ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ಹಾಗೂ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು,ಇದು ಲಸಿಕೆಯ ಅಕ್ರಮ ದಾಸ್ತಾನಿಗೆ ಕಾರಣವಾಗಲಿದೆ ಎಂದು ಎಚ್ಚರಿಕೆ ನೀಡಿದರು. ಒಂದೇ ಲಸಿಕೆಗೆ ಕೇಂದ್ರಕ್ಕೆ 150 ರೂ.,ರಾಜ್ಯ ಸರಕಾರಗಳಿಗೆ 400 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ 600 ರೂ.;ಹೀಗೆ ಮೂರು ವಿಭಿನ್ನ ದರಗಳನ್ನು ನಿಗದಿಗೊಳಿಸಿರುವ ಸಕಾರದ ನಿರ್ಧಾರವು ಜನರನ್ನು ಹೆಚ್ಚಿನ ಸಂಕಷ್ಟಕ್ಕೆ ತಳ್ಳಿದೆ. ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ‘ಒಂದು ದೇಶ ಒಂದು ಲಸಿಕೆ ಒಂದು ದರ ’ ನೀತಿಯ ಅಗತ್ಯವಿದೆ ಎಂದರು.

ಈ ಹಿಂದೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ಅವರು ಎಲ್ಲರಿಗೂ ಉಚಿತವಾಗಿ ಲಸಿಕೆಯನ್ನು ಒದಗಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.
18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ಒದಗಿಸುವುದಾಗಿ ಮಧ್ಯಪ್ರದೇಶ,ಕೇರಳ,ಛತ್ತೀಸ್ಗಡ,ಉತ್ತರ ಪ್ರದೇಶ, ಬಿಹಾರ, ಸಿಕ್ಕಿಂ, ಅಸ್ಸಾಂ, ಜಾರ್ಖಂಡ್, ಪಂಜಾಬ್,ಹಿಮಾಚಲ ಪ್ರದೇಶ ಮತ್ತು ಗೋವಾ ರಾಜ್ಯಗಳು ಈಗಾಗಲೇ ಪ್ರಕಟಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X