Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದಿಂದ ಪರಿಷ್ಕೃತ ಕೋವಿಡ್-19...

ಕೇಂದ್ರದಿಂದ ಪರಿಷ್ಕೃತ ಕೋವಿಡ್-19 ಚಿಕಿತ್ಸಾ ಮಾರ್ಗಸೂಚಿಗಳ ಬಿಡುಗಡೆ

ಉಸಿರಾಟವನ್ನು ಉತ್ತಮಗೊಳಿಸಲು ಇಲ್ಲಿದೆ ತಂತ್ರ

ವಾರ್ತಾಭಾರತಿವಾರ್ತಾಭಾರತಿ23 April 2021 9:42 PM IST
share
ಕೇಂದ್ರದಿಂದ ಪರಿಷ್ಕೃತ ಕೋವಿಡ್-19 ಚಿಕಿತ್ಸಾ ಮಾರ್ಗಸೂಚಿಗಳ ಬಿಡುಗಡೆ

ಹೊಸದಿಲ್ಲಿ,ಎ.23: ಭಾರತದಲ್ಲಿ ಕೊರೋನ ವೈರಸ್ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ನಡುವೆಯೇ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೋವಿಡ್-19 ರೋಗಿಗಳಿಗಾಗಿ ಪರಿಷ್ಕೃತ ಕ್ಲಿನಿಕಲ್ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ. ಮಧ್ಯಮದಿಂದ ತೀವ್ರ ಲಕ್ಷಣಗಳಿರುವ ರೋಗಿಗಳಿಗೆ ರೆಮ್ಡೆಸಿವಿರ್ ಮತ್ತು ತೀವ್ರ ಲಕ್ಷಣಗಳಿರುವವರಿಗೆ ಐಸಿಯು ಘಟಕದಲ್ಲಿ ದಾಖಲಾದ 24ರಿಂದ 48 ಗಂಟೆಗಳಲ್ಲಿ ಟೋಸಿಲಿಜುಮಾಬ್ ಬಳಕೆಯನ್ನು ಅದು ಶಿಫಾರಸು ಮಾಡಿದೆ.

ಮನೆಯಲ್ಲಿದ್ದುಕೊಂಡು ಉಸಿರಾಟ ಸಮಸ್ಯೆಯನ್ನು ಎದುರಿಸುತ್ತಿರುವ ರೋಗಿಗಳಿಗೆ ನೆರವಾಗಲು ‘ಪ್ರೋನಿಂಗ್’ ತಂತ್ರದ ಬಗ್ಗೆ ವಿವರಗಳನ್ನು ಸಚಿವಾಲಯವು ಪ್ರತ್ಯೇಕವಾಗಿ ನೀಡಿದೆ. ಬೆನ್ನಿನ ಮೇಲೆ ಮಲಗಿರುವ ರೋಗಿಗಳನ್ನು ನಿಖರ ಮತ್ತು ಸುರಕ್ಷಿತ ಚಲನೆಗಳ ಮೂಲಕ ಬೋರಲಾಗಿ ಮಲಗಿಸುವುದನ್ನು ಈ ತಂತ್ರವು ಒಳಗೊಂಡಿದೆ. ಇದರಿಂದ ಉಸಿರಾಟ ಸುಗಮಗೊಳ್ಳುತ್ತದೆ ಮತ್ತು ಶ್ವಾಸಕೋಶಗಳಿಗೆ ಹೆಚ್ಚಿನ ಆಮ್ಲಜನಕವು ತಲುಪುತ್ತದೆ.

ಗರ್ಭಿಣಿಯರು,ಆಳ ಅಭಿಧಮನಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯಿಂದ ಬಳಲುತ್ತಿರುವವರು,ಗಂಭೀರ ಹೃದ್ರೋಗಗಳು, ಬೆನ್ನುಮೂಳೆ ಸಮಸ್ಯೆ,ತೊಡೆಮೂಳೆ ಮುರಿತ,ಬಿರುಕು ಇರುವವರು ಪ್ರೋನಿಂಗ್ ವಿಧಾನವನ್ನು ಅನುಸರಿಸಬಾರದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಪರಿಷ್ಕೃತ ಮಾರ್ಗಸೂಚಿಗಳು ಲಕ್ಷಣಗಳ ತೀವ್ರತೆಗೆ ಅನುಗುಣವಾಗಿ ಚಿಕಿತ್ಸಾ ವಿಧಾನಗಳನ್ನು ಸೂಚಿಸಿವೆ.

ರೋಗಿಯ ಉಸಿರಾಟ ದರವು ಪ್ರತಿ ನಿಮಿಷಕ್ಕೆ 30ಕ್ಕಿಂತ ಹೆಚ್ಚಿರುವ ಅಥವಾ ಅವರ ಶರೀರದಲ್ಲಿ ಆಮ್ಲಜನಕದ ಮಟ್ಟ ಕೋಣೆಯಲ್ಲಿನ ಗಾಳಿಯ ಶೇ.90ಕ್ಕಿಂತ ಕಡಿಮೆಯಿರುವ ತೀವ್ರ ಪ್ರಕರಣಗಳಲ್ಲಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಬೇಕು ಎಂದು ತಿಳಿಸಿರುವ ಮಾರ್ಗಸೂಚಿಗಳು, ಮಧ್ಯಮ ಸ್ವರೂಪದ ಲಕ್ಷಣಗಳನ್ನು ಹೊಂದಿರುವ ರೋಗಿಗಳನ್ನು ವಾರ್ಡ್ಗಳಿಗೆ ದಾಖಲಿಸುವಂತೆ ಶಿಫಾರಸು ಮಾಡಿವೆ.

ಲಕ್ಷಣಗಳು ಕಾಣಿಸಿಕೊಂಡ ಏಳು ದಿನಗಳೊಳಗೆ, ರೋಗವು ಆರಂಭಿಕ ಹಂತದಲ್ಲಿದ್ದರೆ ಮಾತ್ರ ಪ್ಲಾಸ್ಮಾ ಥೆರಪಿಯನ್ನು ಬಳಸಬಹುದು ಎಂದು ಅದು ತಿಳಿಸಿದೆ. ಮೂತ್ರಪಿಂಡ ಅಥವಾ ಯಕೃತ್ತಿನ ತೀವ್ರ ಸಮಸ್ಯೆಯಿರುವ ರೋಗಿಗಳು ರೆಮ್ಡೆಸಿವಿರ್ ತೆಗೆದುಕೊಳ್ಳಬಾರದು. ಆಮ್ಲಜನಕ ಯಂತ್ರವನ್ನು ಅಳವಡಿಸಿರದ ಅಥವಾ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗಾಗಿ ಅದನ್ನು ಬಳಸಬಾರದು ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸೌಮ್ಯ ರೋಗಲಕ್ಷಣಗಳೊಂದಿಗೆ ಮನೆಯಲ್ಲಿ ಪ್ರತ್ಯೇಕವಾಗಿರುವವವರು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು ಮತ್ತು ಕೈಗಳ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಲಕ್ಷಣಗಳಿರುವ ರೋಗಿಗಳು ತಮಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಸಂಪರ್ಕದಲ್ಲಿರಬೇಕು ಮತ್ತು ಶರೀರದ ಉಷ್ಣತೆ ಹಾಗೂ ಆಮ್ಲಜನಕ ಮಟ್ಟದ ಮೇಲೆ ನಿಗಾಯಿರಿಸಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಉಸಿರಾಟಕ್ಕೆ ತೊಂದರೆ, ತೀವ್ರ ಜ್ವರ, ತೀವ್ರ ಕೆಮ್ಮು, ವಿಶೇಷವಾಗಿ ಐದು ದಿನಗಳಿಗೂ ಹೆಚ್ಚು ಮುಂದುವರಿದರೆ ತಕ್ಷಣ ವೈದ್ಯಕೀಯ ನೆರವನ್ನು ಪಡೆದುಕೊಳ್ಳುವಂತೆ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X