Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೃತದೇಹಗಳನ್ನು ಹಸ್ತಾಂತರಿಸಲು ವಿಳಂಬ...

ಮೃತದೇಹಗಳನ್ನು ಹಸ್ತಾಂತರಿಸಲು ವಿಳಂಬ ಮಾಡಿದರೆ ಆಸ್ಪತ್ರೆಗಳ ವಿರುದ್ಧ ಕ್ರಮ: ಅಶ್ವತ್ಥ ನಾರಾಯಣ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ23 April 2021 10:31 PM IST
share
ಮೃತದೇಹಗಳನ್ನು ಹಸ್ತಾಂತರಿಸಲು ವಿಳಂಬ ಮಾಡಿದರೆ ಆಸ್ಪತ್ರೆಗಳ ವಿರುದ್ಧ ಕ್ರಮ: ಅಶ್ವತ್ಥ ನಾರಾಯಣ ಎಚ್ಚರಿಕೆ

ಬೆಂಗಳೂರು, ಎ.23: ನಗರದ ಸರಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಅಥವಾ ಕೋವಿಡ್‍ಯೇತರ ಕಾರಣದಿಂದ ಯಾರೇ ಮೃತಪಟ್ಟರೂ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರ ಮಾಡಿಸುವ ಕೆಲಸ ತ್ವರಿತವಾಗಿ ಆಗಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶುಕ್ರವಾರ ನಗರದಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಔಷಧ ನಿಯಂತ್ರಣ ಇಲಾಖೆಯ ಉಪ ನಿರ್ದೇಶಕ ಸುರೇಶ್ ಸೇರಿದಂತೆ ಇನ್ನಿತರ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಒಂದು ವೇಳೆ ಮೃತದೇಹಗಳನ್ನು ನೀಡುವುದು ತಡ ಮಾಡಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಜರುಗಿಸಿ ಎಂದು ಆದೇಶಿಸಿದರು.

ಆಸ್ಪತ್ರೆಗಳಿಂದ ಮೃತದೇಹಗಳನ್ನು ಸಂಬಂಧಿಕರಿಗೆ ತಡವಾಗಿ ನೀಡುತ್ತಿರುವುದರಿಂದ ಚಿತಾಗಾರಗಳಲ್ಲಿ ಸಮಸ್ಯೆ ಹೆಚ್ಚಾಗುತ್ತಿದೆ. ಒಮ್ಮೆಗೇ ಮೃತದೇಹಗಳನ್ನು ತರುತ್ತಿರುವುದರಿಂದ ಅವುಗಳ ನಿರ್ವಹಣೆ ಕಷ್ಟ ಆಗುತ್ತಿದೆ. ಹೀಗಾಗಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರಿಗೆ ಉಪ ಮುಖ್ಯಮಂತ್ರಿ ಸೂಚಿಸಿದರು.

ಮೃತರ ಸಂಬಂಧಿಕರು ಮೊದಲೇ ದುಃಖದಲ್ಲಿರುತ್ತಾರೆ. ಅವರ ನೋವನ್ನು ಮತ್ತಷ್ಟು ಹೆಚ್ಚಿಸುವ ಕೆಲಸ ಆಗಬಾರದು. ಕೂಡಲೇ ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಮೃತದೇಹವನ್ನು ಹಸ್ತಾಂತರ ಮಾಡಬೇಕು ಎಂದು ಅವರು ಹೇಳಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥ ನಾರಾಯಣ, ನಗರದ 13 ವಿದ್ಯುತ್ ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಿರುವ ಕಾರಣ ಶವಸಂಸ್ಕಾರ ತಡ ಆಗುತ್ತಿದೆ. ಇದನ್ನು ತುರ್ತಾಗಿ ಮಾಡಬೇಕಾಗಿದೆ. ಹೀಗಾಗಿ ಪ್ರಾಯೋಗಿಕವಾಗಿ ಸುಮನಹಳ್ಳಿ ಮತ್ತು ಗಿಡ್ಡ ಹಳ್ಳಿಯಲ್ಲಿ ಗ್ಯಾಸ್ ಚಿತಾಗಾರಗಳನ್ನು ತುರ್ತಾಗಿ ತೆರೆಯಲು ಉದ್ದೇಶಿಸಲಾಗಿದೆ. ಇದು ಯಶಸ್ವಿಯಾದರೆ ಇತರೆ ಕಡೆಯೂ ಆ ವ್ಯವಸ್ಥೆ ಮಾಡಲಾಗುವುದು ಎಂದರು.

ಪ್ರತಿ ಚಿತಾಗಾರಕ್ಕೂ 15 ಸ್ಟ್ರೆಚರ್ ಗಳನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಚಿತಾಗಾರಕ್ಕೂ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಸಮಸ್ಯೆಗಳಿದ್ದರೆ ಬಗೆಹರಿಸಬೇಕೆಂದು ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ನಗರದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೋಂಕಿತರಿಗೆ, ಅದರಲ್ಲೂ ಮನೆಯಲ್ಲೇ ಕ್ವಾರೆಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಕೊಡಮಾಡುವ ಮೆಡಿಕಲ್ ಕಿಟ್ ಕೊರತೆ ಉಂಟಾಗಿದೆ. ಕೂಡಲೇ ಈ ಕಿಟ್‍ಗಳನ್ನು ಖರೀದಿ ಮಾಡಲು ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ತಲಾ 2 ಲಕ್ಷ ರೂ. ನೀಡಲಾಗಿದೆ ಎಂದು ಅವರು ಹೇಳಿದರು.

ಈ ಅನುದಾನ ಸಾಕಾಗುವುದಿಲ್ಲ. ಹೀಗಾಗಿ ವಿಧಾನಸಭಾ ಕ್ಷೇತ್ರವಾರು, ಬಿಬಿಎಂಪಿ ವಿಭಾಗವಾರು ಇನ್ನೂ ಹೆಚ್ವಿನ ಅನುದಾನ ಅಗತ್ಯ ಇದೆ. ತಕ್ಷಣ ಒದಗಿಸಬೇಕು ಎಂದು ಮುಖ್ಯ ಆಯುಕ್ತರಿಗೆ ಸೂಚಿಸಿದ್ದು, ಅವರು ಹಣ ಒದಗಿಸುವ ಭರವಸೆ ನೀಡಿದ್ದಾರೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಎಲ್ಲಿಯೂ ಕೋವಿಡ್ ಪೀಡಿತ ಜನರಿಗೆ ರೆಮ್‍ಡಿಸಿವಿರ್ ಸೇರಿ ಯಾವುದೇ ಔಷಧ ಅಥವಾ ಕಿಟ್‍ಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೋವಿಡ್ ಸಹಾಯವಾಣಿ 1912 ಸಂಖ್ಯೆಗೆ ಕರೆಗಳು ಹೆಚ್ಚಾಗಿವೆ. ಸಹಾಯವಾಣಿ ಕೇಂದ್ರದಲ್ಲಿ ಸದ್ಯಕ್ಕೆ ಕರೆ ಸ್ವೀಕರಿಸಲು 30 ಜನರಿದ್ದು, ಇನ್ನೂ 30 ಜನರನ್ನು ನಿಯೋಜಿಸುವಂತೆ ಸೂಚಿಸಿದ್ದೇನೆ. ಕರೆ ಮಾಡುವ ವ್ಯಕ್ತಿಗಳ ಸಮಸ್ಯೆಗಳನ್ನು ಆಲಿಸಿ ಕೂಡಲೇ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ತಿಳಿಸಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ 7 ಕಡೆ ಕೋವಿಡ್ ಲಸಿಕೆಯನ್ನು ತಯಾರಿಸಲಾಗುತ್ತಿದೆ. ಅಲ್ಲಿಂದ ಲಸಿಕೆ ಬಂದ ಮೇಲೆ ಅದನ್ನು ಸರಿಯಾದ ರೀತಿಯಲ್ಲಿ ಶೇಖರಿಸಿಟ್ಟು ಸಮರ್ಪಕವಾಗಿ ವಿತರಣೆ ಮಾಡಬೇಕು. ದಿಲ್ಲಿಯಲ್ಲಿ ಆದಂತೆ ಯಾವುದೇ ರೀತಿಯಲ್ಲೂ ವ್ಯತ್ಯಯ ಆಗಬಾರದು. ಇನ್ನೂ ರಾಜ್ಯದಲ್ಲಿ 280 ಆಸ್ಪತ್ರೆಗಳಿಂದ ರೆಮ್‍ಡಿಸಿವಿರ್ ಔಷಧಿಗೆ ಬೇಡಿಕೆ ಬಂದಿದೆ. ಆ ಬೇಡಿಕೆ ಅನುಸಾರ ಒದಗಿಸಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X