Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಪ್ರೀಂಕೋರ್ಟ್, ಸಿಜೆಐ ವಿರುದ್ಧ...

ಸುಪ್ರೀಂಕೋರ್ಟ್, ಸಿಜೆಐ ವಿರುದ್ಧ ಹರಿಹಾಯ್ದ ನ್ಯಾಯವಾದಿ ದುಶ್ಯಂತ್ ದವೆ

ವಾರ್ತಾಭಾರತಿವಾರ್ತಾಭಾರತಿ24 April 2021 12:07 AM IST
share
ಸುಪ್ರೀಂಕೋರ್ಟ್, ಸಿಜೆಐ ವಿರುದ್ಧ ಹರಿಹಾಯ್ದ ನ್ಯಾಯವಾದಿ ದುಶ್ಯಂತ್ ದವೆ

ಹೊಸದಿಲ್ಲಿ, ಎ.23: ದೇಶದಲ್ಲಿರುವ ಕೊರೋನ ಪರಿಸ್ಥಿತಿಯ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವ ಮತ್ತು ಈ ವಿಷಯದಲ್ಲಿ ತನಗೆ ನೆರವಾಗಲು ಹಿರಿಯ ವಕೀಲ ಹರೀಶ್ ಸಾಳ್ವೆಯನ್ನು ನೇಮಿಸುವ ಸುಪ್ರೀಂಕೋರ್ಟ್ ಮತ್ತು ಮುಖ್ಯನ್ಯಾಯಾಧೀಶ ಎಸ್ಎ ಬೋಬ್ಡೆಯ ನಿರ್ಧಾರಕ್ಕೆ ಹಿರಿಯ ನ್ಯಾಯವಾದಿ ದುಶ್ಯಂತ್ ದವೆ ಆಕ್ಷೇಪ ಸೂಚಿಸಿದ್ದಾರೆ.

ಈ ಪ್ರಕರಣಗಳನ್ನು ತನ್ನ ಕೈಗೆ ತೆಗೆದಿಕೊಂಡಿರುವ ಸುಪ್ರೀಂಕೋರ್ಟ್ ನಡೆಗೆ ನನ್ನ ವಿರೋಧವಿದೆ. ಇಂತಹ ಪ್ರಕರಣಗಳ ಕಾರ್ಯಕಲಾಪ ಹೈಕೋರ್ಟ್ ಗಳಲ್ಲಿ ನಡೆಯುತ್ತಿರುವಾಗ ಸುಪ್ರೀಂಕೋರ್ಟ್ ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ದವೆ ಹೇಳಿದ್ದಾರೆ.

ಈ ವಿಷಯದ ಬಗ್ಗೆ ತುಂಬಾ ತಡವಾಗಿ ಸುಪ್ರೀಂಕೋರ್ಟ್ ಗಮನ ಹರಿಸಿದೆ ಮತ್ತು ಪ್ರಾಮುಖ್ಯ ವಿಷಯಗಳ ಬಗ್ಗೆ ವಿಚಾರಣೆ ನಡೆಸುತ್ತಿಲ್ಲ. ಸುಪ್ರೀಂಕೋರ್ಟ್ನ ಉದ್ದೇಶವೇನು? ಟಾಟಾ ಮತ್ತು ಸೈರಸ್ ಮಿಸ್ತ್ರಿ ನಡುವಿನ ಪ್ರಕರಣವನ್ನು ನೀವು ತಿಂಗಳುಗಟ್ಟಲೆ ನಿರ್ವಹಿಸಿ ಸಾಳ್ವೆ ವಾದಿಸಿದ್ದ ಟಾಟಾ ಸಂಸ್ಥೆಯ ಪರ ತೀರ್ಪು ಪ್ರಕಟಿಸಿದ್ದೀರಿ. 370ನೇ ವಿಧಿ, ಸಿಎಎ ಪ್ರಕರಣಗಳನ್ನು ನಿರ್ಧರಿಸಲು ನೀವು ಬಯಸುತ್ತಿಲ್ಲ. ಜೈಲಿನಲ್ಲಿ ಕೊಳೆಯುತ್ತಿರುವ ಸಾವಿರಾರು ನಾಗರಿಕರ ಜಾಮೀನು ಅರ್ಜಿಯ ವಿಚಾರಣೆಗೆ ನೀವು ಮುಂದಾಗುತ್ತಿಲ್ಲ. ಕೋವಿಡ್ ಪರಿಸ್ಥಿತಿ ನಿರ್ವಹಿಸಲು ಸರಕಾರದ ಸಿದ್ಧತೆಯ ಬಗ್ಗೆ ನಿರ್ಧರಿಸಲು ನೀವು ಬಯಸುತ್ತಿಲ್ಲ . ಈಗ ಕೊರೋನ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಗಂಭೀರ ಪ್ರಮಾದ ಎಸಗಿದ್ದೀರಿ ಎಂದು ದವೆ ಆಕ್ಷೇಪಿಸಿದ್ದಾರೆ. ಅಲ್ಲದೆ ಲಂಡನ್ನಲ್ಲಿ ನೆಲೆಸಿರುವ ಮತ್ತು ಭಾರತದ ಪರಿಸ್ಥಿತಿಯ ಬಗ್ಗೆ ತಿಳುವಳಿಕೆ ಇಲ್ಲದ ಹರೀಶ್ ಸಾಳ್ವೆಯನ್ನು ಆ್ಯಮಿಕಸ್ ಕ್ಯೂರಿಯಾಗಿ ನೇಮಿಸಿರುವುದನ್ನೂ ಅವರು ಪ್ರಶ್ನಿಸಿದ್ದಾರೆ.

ಸಾಳ್ವೆ ಮತ್ತು ಬೋಬ್ಡೆ ಒಟ್ಟಿಗೆ ಶಾಲೆಗೆ ಹೋದವರು. ಅವರಿಬ್ಬರೂ ಆತ್ಮೀಯ ಮಿತ್ರರು. ಪ್ರತೀ ಮೂರನೇ ಪ್ರಕರಣದಲ್ಲಿ ಸಾಳ್ವೆಯನ್ನು ಆ್ಯಮಿಕಸ್ ಕ್ಯೂರಿಯಾಗಿ ಬೋಬ್ಡೆ ನೇಮಿಸ್ತುತಿದ್ದಾರೆ. ಈ ದೇಶದಲ್ಲಿ ಇನ್ನೂ ಅತ್ಯುತ್ತಮ ನ್ಯಾಯವಾದಿಗಳಿದ್ದಾರೆ. ಸಾಳ್ವೆ ಅನಿವಾಸಿ ಭಾರತೀಯನಾಗಿದ್ದು ಅವರು ಭಾರತದಲ್ಲಿ ಈಗಿರುವ ಪರಿಸ್ಥಿತಿಗಿಂತ ವಿಭಿನ್ನ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ದವೆ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಪೀಠ, ನಮ್ಮ ಆದೇಶವನ್ನು ಓದದೆ ನೀವು ನಮ್ಮ ಮೇಲೆ ಆರೋಪಿಸುತ್ತಿದ್ದೀರಿ. ಸಾಳ್ವೆಯ ನೇಮಕದ ಬಗ್ಗೆ ಹಲವು ಹಿರಿಯ ನ್ಯಾಯವಾದಿಗಳ ಪ್ರತಿಕ್ರಿಯೆ ನಮಗೆ ನೋವು ತಂದಿದೆ. ಆ್ಯಮಿಕಸ್ ಕ್ಯೂರಿಯಾಗಿ ಸಾಳ್ವೆಯ ನೇಮಕ ನ್ಯಾಯಪೀಠದ ಎಲ್ಲಾ ನ್ಯಾಯಾಧೀಶರ ಸರ್ವಾನುಮತದ ನಿರ್ಧಾರವಾಗಿತ್ತು ಎಂದು ನ್ಯಾಯಪೀಠ ಉತ್ತರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X