Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼನೀವು ತಪ್ಪಾದ ಹಾದಿಯಲ್ಲಿದ್ದೀರಿʼ ಎಂದು...

ʼನೀವು ತಪ್ಪಾದ ಹಾದಿಯಲ್ಲಿದ್ದೀರಿʼ ಎಂದು ಮೋದಿ, ಅಮಿತ್ ಶಾ ಗೆ ಹೇಳಲು ಯತ್ನಿಸಿದ್ದೇನೆ: ಮೇಘಾಲಯ ರಾಜ್ಯಪಾಲ

ವಾರ್ತಾಭಾರತಿವಾರ್ತಾಭಾರತಿ24 April 2021 8:13 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ʼನೀವು ತಪ್ಪಾದ ಹಾದಿಯಲ್ಲಿದ್ದೀರಿʼ ಎಂದು ಮೋದಿ, ಅಮಿತ್ ಶಾ ಗೆ ಹೇಳಲು ಯತ್ನಿಸಿದ್ದೇನೆ: ಮೇಘಾಲಯ ರಾಜ್ಯಪಾಲ

ಹೊಸದಿಲ್ಲಿ: "ನೀವು ತಪ್ಪಾದ ಹಾದಿಯಲ್ಲಿದ್ದೀರಿ ಎಂದು ಪ್ರಧಾನಿ  ಹಾಗೂ ಗೃಹ ಮಂತ್ರಿಗಳಿಗೆ ತಿಳಿ ಹೇಳಲು ನಾನು ಯತ್ನಿಸಿದ್ದೇನೆ ಹಾಗೂ ರೈತರನ್ನು ದಮನಿಸಬೇಡಿ, ಬೆದರಿಸಬೇಡಿ ಹಾಗೂ ಬಲವಂತಪಡಿಸಬೇಡಿ ಎಂದು ಹೇಳಿದ್ದೇನೆ" ಎಂದು  ಮೇಘಾಲಯ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರು  ರೈತರ ಪ್ರತಿಭಟನೆ ಕುರಿತಂತೆ ಹರ್ಯಾಣದ ಪಕ್ಷೇತರ ಶಾಸಕ ಸೋಮ್‌ ಬೀರ್ ಸಂಗ್ವಾನ್ ಅವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಹರ್ಯಾಣಾದ ಬಿಜೆಪಿ-ಜೆಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಈ ಹಿಂದೆ ವಾಪಸ್ ಪಡೆದಿದ್ದ ಸಂಗ್ವಾನ್ ಅವರು ಮಲಿಕ್ ಅವರಿಗೆ  ರೈತ ಹೋರಾಟ  ಕುರಿತಂತೆ ಪತ್ರ ಬರೆದಿದ್ದರು. ಇದಕ್ಕೆ  ಉತ್ತರಿಸಿರುವ ರಾಜ್ಯಪಾಲರು "ರೈತರನ್ನು ದಿಲ್ಲಿಯಿಂದ ಬರಿಗೈಯ್ಯಲ್ಲಿ ಮರಳುಂತೆ ಮಾಡಬಾರದು" ಎಂದು ತಾವು ಪ್ರಧಾನಿ ಮತ್ತು ಗೃಹ ಸಚಿವರಿಗೆ ತಿಳಿಸಿದ್ದಾಗಿ ಹೇಳಿದ್ದಾರೆ.

"ನಾನು ಸನ್ಮಾನ್ಯ ಪ್ರಧಾನಿ ಮತ್ತು ಗೃಹ ಸಚಿವರನ್ನು ರೈತ ಹೋರಾಟಕ್ಕೆ ಸಂಬಂಧಿಸಿದಂತೆ ಭೇಟಿಯಾಗಿ ರೈತರಿಗೆ ನ್ಯಾಯ ಒದಗಿಸಿ ಅವರ ನೈಜ ಬೇಡಿಕೆಗಳನ್ನು ಒಪ್ಪುವಂತೆ ಸಲಹೆ ನೀಡಿದ್ದೇನೆ. ರೈತರ ಹೋರಾಟವನ್ನು  ದಮನಿಸಲು ಸಾಧ್ಯವಿಲ್ಲ, ಕೇಂದ್ರ ಅವರ ಬೇಡಿಕೆಗಳನ್ನು ಒಪ್ಪಬೇಕು. ನಾನು ಮುಂದೆಯೂ ಈ ನಿಟ್ಟಿನಲ್ಲಿ ಶ್ರಮ ಪಡುತ್ತೇನೆ. ನನ್ನಿಂದಾದಷ್ಟು ಸಹಾಯ ಮಾಡುತ್ತೇನೆ," ಎಂದು ರಾಜ್ಯಪಾಲರು ಸಂಗ್ವಾನ್ ಅವರಿಗೆ  ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

"ರೈತರು ಒಂದು ಮಹಾನ್ ಹೋರಾಟವನ್ನು ಶಾಂತಿಯುತವಾಗಿ ನಡೆಸುತ್ತಿದ್ದಾರೆ ಹಾಗೂ ತಮ್ಮ ಹೋರಾಟದಲ್ಲಿ ತಮ್ಮ 300 ಸಹವರ್ತಿಗಳನ್ನು ಕಳೆದುಕೊಂಡಿದ್ದಾರೆ. ಇಷ್ಟೊಂದು ದೊಡ್ಡ ದುರಂತ ನಡೆದರೂ ಕೇಂದ್ರ ಸರಕಾರ ಒಮ್ಮೆ ಕೂಡ ವಿಷಾದ ವ್ಯಕ್ತಪಡಿಸದೇ ಇರುವುದು ಕಳವಳಕಾರಿ. ಇಂತಹ ಧೋರಣೆ ಖಂಡನಾರ್ಹ. ಇನ್ನೊಂದೆಡೆ ಸರಕಾರ ಹೋರಾಟವನ್ನು ಹತ್ತಿಕ್ಕಲು ಹಾಗೂ ಅದಕ್ಕೆ ಕೆಟ್ಟ ಹೆಸರು ತರಲು ಯತ್ನಿಸಿದೆ.  ಸರಕಾರದ ಬಲೆಗೆ ಬೀಳದೆ ತಮ್ಮ ಒಗ್ಗಟ್ಟನ್ನು ಉಳಿಸಿಕೊಂಡಿದ್ದಕ್ಕಾಗಿ ನಾನು ಎಲ್ಲಾ ರೈತರನ್ನು ಅಭಿನಂದಿಸುತ್ತೇನೆ" ಎಂದು ರಾಜ್ಯಪಾಲರು ಶಾಸಕರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X