Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೆರ್ಮುದೆಯಲ್ಲಿ ಅಗ್ನಿ ಅನಾಹುತ ಪ್ರಕರಣ:...

ಪೆರ್ಮುದೆಯಲ್ಲಿ ಅಗ್ನಿ ಅನಾಹುತ ಪ್ರಕರಣ: ಸುಗಂಧ ದ್ರವ್ಯ ಫ್ಯಾಕ್ಟರಿಯ ರಾಸಾಯನಿಕ ಪದಾರ್ಥಗಳ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ25 April 2021 8:04 PM IST
share

ಮಂಗಳೂರು, ಎ.25: ಮಂಗಳೂರು ಎಸ್‌ಇಝಡ್ ಕಾರಿಡಾರಿನಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅನಾಹುತದಿಂದ ಹಾನಿಗೊಳಗಾಗಿರುವ ‘ಕ್ಯಾಟಸಿಂತ್’ ಸುಗಂಧ ದ್ರವ್ಯ ಫ್ಯಾಕ್ಟರಿಯಲ್ಲಿ ಅಳಿದುಳಿದ ಅಪಾಯಕಾರಿ ರಾಸಾಯನಿಕ ಪದಾರ್ಥಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ರವಿವಾರ ಭರದಿಂದ ಸಾಗಿತು.

ಮಂಗಳೂರಿನ ಅಗ್ನಿಶಾಮಕದಳ ಹಾಗೂ ಎಸ್‌ಇಝಡ್‌ನ ಅಗ್ನಿಶಾಮಕ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳಾಂತರಿಸಲಾಯಿತು. ಅಗ್ನಿ ಅನಾಹುತದಿಂದ ಘಟಕದ ಕೆಲವೆಡೆ ವಾಲ್ವ್‌ಗಳಲ್ಲಿ ರಾಸಾಯನಿಕ ಪದಾರ್ಥಗಳ ಸೋರಿಕೆ ರಾತ್ರಿಯಿಡೀ ಆಗುತ್ತಲೇ ಇತ್ತು ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಟಾಲ್ವಿನ್, ಫಾರ್ಮಲ್ ಡಿಹೈಡ್ರೆಡ್, ಎಚ್‌ಸಿಎಲ್ ಮುಂತಾದ ರಾಸಾಯನಿಕ ಪದಾರ್ಥಗಳನ್ನು ಸಂಗ್ರಹಿಸಿಡಲಾಗಿತ್ತು. ಅವುಗಳನ್ನು ಬೇರೆ ಟ್ಯಾಂಕರ್‌ಗೆ ಸ್ಥಳಾಂತರಿಸಲಾಗಿದೆ.

ಕ್ಯಾಟಸಿಂತ್ ಫ್ಯಾಕ್ಟರಿಯಲ್ಲಿ ನಾಲ್ಕು ಘಟಕಗಳಿವೆ. ಆ ಪೈಕಿ ಒಂದರಲ್ಲಿ ಮಾತ್ರವೇ ಕೆಲಸ ನಡೆಯುತ್ತಿತ್ತು, ಉಳಿದವುಗಳಲ್ಲಿ ಉತ್ಪಾದನೆ ಆರಂಭಗೊಂಡಿರಲಿಲ್ಲ. ಶನಿವಾರ ಸಂಭವಿಸಿದ ಅಗ್ನಿ ಅನಾಹುತವು ಪರಿಸರದಲ್ಲಿ ಭಾರೀ ಆತಂಕ ಸೃಷ್ಟಿಸಿತ್ತು. ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಂದಿಸಲಾಗಿತ್ತು.

ಸ್ಥಾವರದ ಅನೇಕ ಯಂತ್ರೋಪಕರಣ, ಪೈಪ್‌ಲೈನ್‌ಗೆ ಸ್ವಲ್ಪ ಹಾನಿಯಾಗಿದೆ. ಆದರೆ ಈವರೆಗೆ ನಷ್ಟದ ಅಂದಾಜು ಮಾಡಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಬೆಂಕಿ ಅನಾಹುತದ ಬಗ್ಗೆ ಬಜ್ಪೆ ಠಾಣೆಗೆ ಇನ್ನೂ ಯಾವುದೇ ದೂರು ಬಂದಿಲ್ಲ ಎಂದು ಮಂಗಳೂರು ಉತ್ತರ ವಲಯ ಎಸಿಪಿ ಎಸ್.ಮಹೇಶ್ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X