ರಾಜ್ಯದಲ್ಲಿ ರವಿವಾರ 34,804 ಮಂದಿಗೆ ಕೊರೋನ ಸೋಂಕು ದೃಢ, 143 ಸೋಂಕಿತರು ಸಾವು

ಬೆಂಗಳೂರು, ಎ.25: ರಾಜ್ಯದಲ್ಲಿ ರವಿವಾರದಂದು 34,804 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 143 ಜನರು ಸೋಂಕಿಗೆ ಬಲಿಯಾಗಿದ್ದು, 6,982 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 13,39,201ಕ್ಕೆ ತಲುಪಿದ್ದು, 1492 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.
ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 14,426ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 2,62,162ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
143 ಸೋಂಕಿತರು ಬಲಿ: ಬಳ್ಳಾರಿ 16, ಬೆಂಗಳೂರು ನಗರ 77, ಬೀದರ್ 2, ಚಾಮರಾಜನಗರ 1, ಚಿತ್ರದುರ್ಗ 1, ದಕ್ಷಿಣ ಕನ್ನಡ 1, ದಾವಣಗೆರೆ 1, ಧಾರವಾಡ 6, ಹಾಸನ 4, ಹಾವೇರಿ 2, ಕಲಬುರಗಿ 7, ಕೋಲಾರ 2, ಮಂಡ್ಯ 3, ಮೈಸೂರು 9, ರಾಯಚೂರು 1, ಶಿವಮೊಗ್ಗ 1, ತುಮಕೂರು 6, ಉತ್ತರ ಕನ್ನಡ 1, ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 34,804 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 390, ಬಳ್ಳಾರಿ 732, ಬೆಳಗಾವಿ 336, ಬೆಂಗಳೂರು ಗ್ರಾಮಾಂತರ 864, ಬೆಂಗಳೂರು ನಗರ 20,733, ಬೀದರ್ 406, ಚಾಮರಾಜನಗರ 284, ಚಿಕ್ಕಬಳ್ಳಾಪುರ 434, ಚಿಕ್ಕಮಗಳೂರು 247, ಚಿತ್ರದುರ್ಗ 100, ದಕ್ಷಿಣ ಕನ್ನಡ 564, ದಾವಣಗೆರೆ 242, ಧಾರವಾಡ 546, ಗದಗ 76, ಹಾಸನ 768, ಹಾವೇರಿ 99, ಕಲಬುರಗಿ 626, ಕೊಡಗು 1077, ಕೋಲಾರ 782, ಕೊಪ್ಪಳ 152, ಮಂಡ್ಯ 814, ಮೈಸೂರು 700, ರಾಯಚೂರು 643, ರಾಮನಗರ 225, ಶಿವಮೊಗ್ಗ 418, ತುಮಕೂರು 1153, ಉಡುಪಿ 319, ಉತ್ತರ ಕನ್ನಡ 243, ವಿಜಯಪುರ 468, ಯಾದಗಿರಿ ಜಿಲ್ಲೆಯಲ್ಲಿ 363 ಪ್ರಕರಣಗಳು ಪತ್ತೆಯಾಗಿವೆ.







