Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹತ್ತು ರಾಜ್ಯಗಳಲ್ಲಿ ಶೇ.74.53 ಹೊಸ...

ಹತ್ತು ರಾಜ್ಯಗಳಲ್ಲಿ ಶೇ.74.53 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ25 April 2021 10:43 PM IST
share
ಹತ್ತು ರಾಜ್ಯಗಳಲ್ಲಿ ಶೇ.74.53 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ಹೊಸದಿಲ್ಲಿ, ಎ.25: ದೇಶಾದ್ಯಂತ ದಾಖಲಾಗುತ್ತಿರುವ ದೈನಂದಿನ ಕೋವಿಡ್ 19 ಸೋಂಕಿನ ಪ್ರಕರಣಗಳ ಪೈಕಿ ಶೇ.74.53 ಪ್ರಕರಣಗಳು ಕರ್ನಾಟಕ, ಕೇರಳ,ಮಹಾರಾಷ್ಟ್ರ, ಉತ್ತರಪ್ರದೇಶ ಹಾಗೂ ದಿಲ್ಲಿ ಸೇರಿದಂತೆ ಹತ್ತು ರಾಜ್ಯಗಳಲ್ಲಿ ವರದಿಯಾಗುತ್ತಿವೆಯೆಂದು ಕೇಂದ್ರ ಆರೋಗ್ಯ ಸಚಿವಾಲಯವು ರವಿವಾರ ತಿಳಿಸಿದೆ.

ಕಳೆದ 24 ತಾಸುಗಳಲ್ಲಿ ಭಾರತದಲ್ಲಿ 3,49,691 ಹೊಸ ಕೊರೋನ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದು ದಿನದ ಗರಿಷ್ಠ ಹೆಚ್ಚಳವಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್-19 ಪ್ರಕರಣಗಳ ಒಟ್ಟು ಸಂಖ್ಯೆ 1,69,60,172ಕ್ಕೇರಿದೆ.

ಅತ್ಯಧಿಕ ಸಂಖ್ಯೆಯ ಕೋವಿಡ್-19 ಪ್ರಕರಣಗಳು ವರದಿಯಾಗುವ ಅಗ್ರ ಹತ್ತು ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ,ಕೇರಳ,ಚತ್ತೀಸ್ಗಢ,ಪ.ಬಂಗಾಳ,ತಮಿಳುನಾಡು, ಗುಜರಾತ್ ಹಾಗೂ ರಾಜಸ್ಥಾನ ರಾಜ್ಯಗಳು ಒಳಗೊಂಡಿವೆ.

ಮಹಾರಾಷ್ಟ್ರದಲ್ಲಿ ರವಿವಾರ 67160 ಹೊಸ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದು ದೇಶದಲ್ಲೇ ಅತ್ಯಧಿಕವಾಗಿದೆ. ಉತ್ತರಪ್ರದೇಶದಲ್ಲಿ 37,944 ಹಾಗೂ ಕರ್ನಾಟಕದಲ್ಲಿ 29,438 ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕೊರೋನ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 26,82,751ಕ್ಕೇರಿದ್ದು, ಇದು ದೇಶದಲ್ಲಿ ವರದಿಯಾಗಿರುವ ಒಟ್ಟು ಪ್ರಕರಣಗಳ 15.82 ಶೇ. ಆಗಿದೆ. ಕಳೆದ 24 ತಾಸುಗಳ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯ ಲ್ಲಿ 1,29,811ರಷ್ಟು ಏರಿಕೆಯಾಗಿದೆ.
 
ದೇಶದ ಸಕ್ರಿಯ ಕೋವಿಡ್-19 ಪ್ರಕರಣಗಳ ಪೈಕಿ ಶೇ.69.94ರಷ್ಟು ಪ್ರಕರಣಗಳನ್ನು ಮಹಾರಾಷ್ಟ್ರ, ಚತ್ತೀಸ್ಗಢ, ಉತ್ತರಪ್ರದೇಶ, ಕರ್ನಾಟಕ, ರಾಜಸ್ಥಾನ, ತಮಿಳುನಾಡು, ಗುಜರಾತ್ ಹಾಗೂ ಕೇರಳ ರಾಜ್ಯಗಳು ಹೊಂದಿವೆಯೆಂದು ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರ, ಉತ್ತರಪ್ರದೇಶ, ದಿಲ್ಲಿ ಕರ್ನಾಟಕ, ಚತ್ತೀಸ್ಗಢ, ಮಧ್ಯಪ್ರದೇಶ, ಕೇರಳ, ಗುಜರಾತ್, ತಮಿಳುನಾಡು, ರಾಜಸ್ಥಾನ, ಬಿಹಾರ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯ ಗತಿಯಲ್ಲಿವೆ ಎಂದು ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ರಾಷ್ಟ್ರಮಟ್ಟದಲ್ಲಿ ಸೋಂಕಿತರ ಸಾವಿನ ಪ್ರಮಾಣದಲ್ಲಿ ಕುಸಿಯತೊಡಗಿದ್ದು, ಪ್ರಸಕ್ತ ಅದು 1.13 ಶೇಕಡದಲ್ಲಿ ಸ್ಥಿರಗೊಂಡಿದೆ. ರವಿವಾರ ಬೆಳಗ್ಗಿನ ತನಕ ಕಳೆದ 24 ತಾಸುಗಳಲ್ಲಿ 2767 ಸಾವಿನ ಪ್ರಕರಣಗಳು ವರದಿಯಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X