ಬಾಳೆಬರೆ ಘಾಟ್ನಲ್ಲಿ ವಾಹನ ಸಂಚಾರ ನಿಷೇಧ
ಉಡುಪಿ, ಎ.26: ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ನಲ್ಲಿ ಕಾಂಕ್ರೀಟ್ ಪೇವ್ಮೆಂಟ್ ನಿರ್ಮಾಣ ಕಾಮಗಾರಿ ಕೈಗೊಂಡಿರುವ ಹಿನ್ನಲೆಯಲ್ಲಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿ 1989ರ ಕಲಂ 221(ಎ)(2) (5)ರನ್ವಯ ಜೂನ್ 5ರ ವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ವಾಹನಗಳ ಪರ್ಯಾಯ ಮಾರ್ಗ: ಕುಂದಾಪುರದಿಂದ ತೀರ್ಥಹಳ್ಳಿ ಹಾಗೂ ಶಿವಮೊಗ್ಗ ಕಡೆಗೆ ಹೋಗುವ ಲಘು ವಾಹನಗಳು ಕುಂದಾಪುರ-ಹೆಮ್ಮಾಡಿ-ವಂಡ್ಸೆ-ಕೊಲ್ಲೂರು-ನಿಟ್ಟೂರು ಘಾಟ್ ಮಾರ್ಗವಾಗಿ ಅಥವಾ ಕುಂದಾಪುರ-ಕೋಟೇಶ್ವರ-ಹಾಲಾಡಿ-ಆಗುಂಬೆ ಮಾರ್ಗವಾಗಿ ಅಥವಾ ಕುಂದಾಪುರ-ಬಸ್ರೂರು-ಹುಣ್ಸೆಮಕ್ಕಿ-ಹಾಲಾಡಿ-ಆಗುಂಬೆ ಮಾರ್ಗವಾಗಿ ತೀರ್ಥಹಳ್ಳಿ ಹಾಗೂ ಶಿವಮೊಗ್ಗ ತಲುಪಬಹುದು.
ಕುಂದಾಪುರದಿಂದ ತೀರ್ಥಹಳ್ಳಿಗೆ ಹೋಗುವ ಭಾರಿ ವಾಹನಗಳು ಕುಂದಾಪುರ -ಭಟ್ಕಳ-ಹೊನ್ನಾವರ-ಸಾಗರ-ರಿಪ್ಪನ್ಪೇಟೆ ಮೂಲಕ ತೀರ್ಥಹಳ್ಳಿ ತಲುಪಬಹುದು.ಕುಂದಾಪುರದಿಂದ ಶಿವಮೊಗ್ಗ ಕಡೆಗೆ ಹೋಗುವ ಭಾರಿ ವಾಹನಗಳು ಕುಂದಾಪುರ- ಭಟ್ಕಳ -ಹೊನ್ನಾವರ-ಸಾಗರ ಮಾರ್ಗವಾಗಿ ಶಿವಮೊಗ್ಗ ತಲುಪುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.





