Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ದಾಖಲೆ ಸಂಖ್ಯೆಯಲ್ಲಿ...

ದಿಲ್ಲಿಯಲ್ಲಿ ದಾಖಲೆ ಸಂಖ್ಯೆಯಲ್ಲಿ ಕೋವಿಡ್ ಸಾವುಗಳು: ಅಂತ್ಯಸಂಸ್ಕಾರಕ್ಕೆ ಎದುರಾಗುತ್ತಿದೆ ಜಾಗದ ಕೊರತೆ

ವಾರ್ತಾಭಾರತಿವಾರ್ತಾಭಾರತಿ26 April 2021 8:00 PM IST
share
ದಿಲ್ಲಿಯಲ್ಲಿ ದಾಖಲೆ ಸಂಖ್ಯೆಯಲ್ಲಿ ಕೋವಿಡ್ ಸಾವುಗಳು: ಅಂತ್ಯಸಂಸ್ಕಾರಕ್ಕೆ ಎದುರಾಗುತ್ತಿದೆ ಜಾಗದ ಕೊರತೆ

ಹೊಸದಿಲ್ಲಿ,ಎ.26: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರತಿದಿನವೂ 350ಕ್ಕೂ ಅಧಿಕ ಕೊರೋನವೈರಸ್ ಸಾವುಗಳು ಸಂಭವಿಸುತ್ತಿದ್ದು,ಮೃತರ ಅಂತ್ಯಸಂಸ್ಕಾರಕ್ಕೆ ಜಾಗದ ಕೊರತೆಯುಂಟಾಗುತ್ತಿದೆ. ಸಮಸ್ಯೆ ಎಷ್ಟೊಂದು ತೀವ್ರವಾಗಿದೆ ಎಂದರೆ ಖಾಲಿ ನಿವೇಶನಗಳನ್ನು ತಾತ್ಕಾಲಿಕ ಸ್ಮಶಾನಗಳನ್ನಾಗಿ ಪರಿವರ್ತಿಸಲಾಗುತ್ತಿದೆ.

ಸೋಮವಾರ ದಿಲ್ಲಿಯಲ್ಲಿ 350 ಕೋವಿಡ್ ಸಾವುಗಳು ದಾಖಲಾಗಿದ್ದು,ರವಿವಾರ 357 ಮತ್ತು ಶನಿವಾರ 348 ಸಾವುಗಳು ವರದಿಯಾಗಿದ್ದವು. ಕಳೆದ ವಾರದಲ್ಲಿ ಸಾಂಕ್ರಾಮಿಕದಿಂದಾಗಿ ದಿನವೊಂದಕ್ಕೆ ಸರಾಸರಿ 304 ಸಾವುಗಳು ಸಂಭವಿಸಿದ್ದವು.

 ಸರಾಯ್ ಕಾಲೆ ಖಾನ್ ಚಿತಾಗಾರದಲ್ಲಿ ಪ್ರತಿದಿನ ಸುಮಾರು 60ರಿಂದ 70 ಶವಗಳ ಅಂತ್ಯಸಂಸ್ಕಾರಗಳನ್ನು ನಡೆಸಲಾಗುತ್ತಿದೆ. ಆದರೆ ಈ ಚಿತಾಗಾರವು ಕೇವಲ 22 ಅಂತ್ಯಸಂಸ್ಕಾರಗಳನ್ನು ನಡೆಸುವ ಸಾಮರ್ಥ್ಯವನ್ನು ಹೊಂದಿದೆ. ಸಾವುಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸಮೀಪದ ಬಯಲಿನಲ್ಲಿ ಕನಿಷ್ಠ ನೂರು ಅಂತ್ಯಸಂಸ್ಕಾರ ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ.

ನೂತನ ವೇದಿಕೆಗಳ ನಿರ್ಮಾಣವನ್ನು ಶೀಘ್ರ ಪೂರ್ಣಗೊಳಿಸುವಂತೆ ಭಾರೀ ಒತ್ತಡವಿದೆ. ಸುಮಾರು 20 ವೇದಿಕೆಗಳು ಇಂದು ರಾತ್ರಿಯೊಳಗೆ ಸಿದ್ಧವಾಗಲಿವೆ. ಉಳಿದ 80 ವೇದಿಕೆಗಳು ಇನ್ನು ಕೆಲವು ದಿನಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ನಿರ್ಮಾಣ ಗುತ್ತಿಗೆಯನ್ನು ವಹಿಸಿಕೊಂಡಿರುವ ಪಶುಪತಿ ಮಂಡಲ್ ತಿಳಿಸಿದರು.

ಚಿತಾಗಾರದ ಸಿಬ್ಬಂದಿಗಳು ಕೆಲಸದ ಭಾರದಿಂದ ಎಷ್ಟೊಂದು ಹೈರಾಣಾಗಿದ್ದಾರೆ ಎಂದರೆ ಚಿತೆಗೆ ಕಟ್ಟಿಗೆಯನ್ನು ಹೊತ್ತು ತರುವುದು ಮತ್ತಿತರ ಕೆಲಸಗಳನ್ನು ಮಾಡುವ ಮೂಲಕ ಮೃತರ ಬಂಧುಗಳು ಅವರಿಗೆ ನೆರವಾಗುತ್ತಿದ್ದಾರೆ.

ದಿಲ್ಲಿಯ ಮೂರು ಮಹಾನಗರ ಪಾಲಿಕೆಗಳು ನಡೆಸುತ್ತಿರುವ ದಿಲ್ಲಿಯ ಇತರ 25 ಚಿತಾಗಾರಗಳು ಮತ್ತು ದಫನ ಭೂಮಿಗಳಲ್ಲಿಯೂ ಪರಿಸ್ಥಿತಿಯು ಭಿನ್ನವಾಗಿಲ್ಲ.

ಕೋವಿಡ್ ಎರಡನೇ ಅಲೆಯಲ್ಲಿ ಸಾವುಗಳ ಸಂಖ್ಯೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಹಲವಾರು ನಗರಗಳು ಅಂತ್ಯಸಂಸ್ಕಾರಕ್ಕೆ ಜಾಗದ ಕೊರತೆಯನ್ನು ಎದುರಿಸುತ್ತಿವೆ. ಇದು ಕೊರೋನ ಭೀಕರತೆಯ ಒಂದು ಮಗ್ಗಲು ಮಾತ್ರ. ಆಮ್ಲಜನಕ,ಔಷಧಿಗಳು,ಲಸಿಕೆಗಳು ಮತ್ತು ಆಸ್ಪತ್ರೆ ಹಾಸಿಗೆಗಳಿಗಾಗಿಯೂ ದೇಶಾದ್ಯಂತ ಹಾಹಾಕಾರವೆದ್ದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X