Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾರಿಗೆ ನೌಕರರ ವಿರುದ್ಧ ಜರುಗಿಸಿದ...

ಸಾರಿಗೆ ನೌಕರರ ವಿರುದ್ಧ ಜರುಗಿಸಿದ ಶಿಸ್ತು ಕ್ರಮ ವಾಪಸ್ ಪಡೆಯಿರಿ: ಸಾರಿಗೆ ಒಕ್ಕೂಟ ಮನವಿ

ವಾರ್ತಾಭಾರತಿವಾರ್ತಾಭಾರತಿ26 April 2021 11:31 PM IST
share

ಬೆಂಗಳೂರು, ಎ.26: ಆರನೆ ವೇತನ ಜಾರಿ ಸೇರಿ ಇತರೆ ಬೇಡಿಕೆ ಈಡೇರಿಕೆಗಾಗಿ ಮುಷ್ಕರ ನಡೆಸಿದ್ದ ಸಾರಿಗೆ ನೌಕರರ ವಿರುದ್ಧ ಕೈಗೊಂಡಿದ್ದ ಶಿಸ್ತು ಕ್ರಮವನ್ನು ವಾಪಸ್ಸು ತೆಗೆದುಕೊಳ್ಳುವಂತೆ ಕೆಎಸ್ಸಾರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಹೆಚ್.ವಿ.ಅನಂತಸುಬ್ಬರಾವ್ ಅವರು ಸಾರಿಗೆ ಇಲಾಖೆಯ ನಾಲ್ಕು ನಿಗಮ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಲ್ಲಿ ಮನವಿ ಮಾಡಿದ್ದಾರೆ.

ಫೆಡರೇಷನ್‍ನವರು 2019 ಡಿ.31ರಂದು ಸಾರಿಗೆ ಇಲಾಖೆಗೆ ಬೇಡಿಕೆ ಈಡೇರಿಕೆಗಾಗಿ ಸಲ್ಲಿಸಿರುವ ಮನವಿಯನ್ನು ಚರ್ಚೆ ಮಾಡಿ, ಅದರಂತೆ ಕೈಗಾರಿಕಾ ಒಪ್ಪಂದಕ್ಕೆ ಬರಬೇಕು. ಅಲ್ಲದೆ, ಈ ಒಪ್ಪಂದವನ್ನು ನ್ಯಾಯಾಧೀಕರಣದ ಮುಂದೆ ಸಲ್ಲಿಸಿದರೆ, ಸಮ್ಮತಿಯ ಅಂತಿಮ ತೀರ್ಪುನ್ನು ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಮನವಿ ಪತ್ರದಲ್ಲಿ ಅನಂತಸುಬ್ಬರಾವ್ ಅವರು ಉಲ್ಲೇಖಿಸಿದ್ದಾರೆ.

ಸಾರಿಗೆ ನಿಗಮಗಳಲ್ಲಿ ಹರಡಿರುವ ಅಸಮಾಧಾನದ ವಾತಾವರಣವನ್ನು ಪ್ರಯತ್ನ ಪೂರ್ವಕವಾಗಿ ಬದಲಾಯಿಸಿ ಪರಸ್ಪರ ಗೌರವ ಮತ್ತು ಪ್ರೀತಿಯಿಂದ ಕಾರ್ಮಿಕರು ಕೆಲಸ ಮಾಡುವ ವಾತಾವರಣವನ್ನು ಆಡಳಿತ ವರ್ಗ ಸೃಷ್ಟಿಸಬೇಕು. ಆಡಳಿತ ವರ್ಗ ವೃತ್ತಿಪರವಾಗಬೇಕು. ಈ ದಿಕ್ಕಿನಲ್ಲಿ ಗುರುತರವಾದ ಜವಾಬ್ದಾರಿ ಆಡಳಿತ ವರ್ಗದ ಮೇಲಿದೆ ಎಂದು ತಿಳಿಸಿದ್ದಾರೆ.

ಸಾರಿಗೆ ನೌಕರರ ಮೂಲವೇತನಕ್ಕೆ ಶೇ.20ರಷ್ಟು ಹೆಚ್ಚು ಮಾಡಿ ಹೊಸ ವೇತನ ಒಪ್ಪಂದ ಮಾಡಬೇಕು. ಅಲ್ಲದೆ, ಸುಮಾರು 25 ವರ್ಷಗಳಿಂದ ಸತತವಾಗಿ ಎಲ್ಲ ಹಂತಗಳಲ್ಲೂ ಆಡಳಿತ ವರ್ಗ ನೌಕರರ ಮತ್ತು ಕಾರ್ಮಿಕ ಸಂಘ ಸ್ನೇಹಿ ವಾತಾವರಣ ನಿರ್ಮಿಸಲು ವಿಫಲವಾಗಿದೆ. ಹೀಗಾಗಿಯೇ ಆಡಳಿತ ವರ್ಗವನ್ನು ವಿರೋಧಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದರು ಎಂದು ಹೇಳಿದ್ದಾರೆ.

ತಮ್ಮ 37 ವರ್ಷದ ಸೇವೆಯಲ್ಲಿ ಎರಡು ಬಾರಿ ಅಪಘಾತ ರಹಿತ ಸೇವೆಗೆ ಮುಖ್ಯಮಂತ್ರಿ ಅವರಿಂದ ಚಿನ್ನದ ಪದಕ ಪಡೆದಿದ್ದು, ಇನ್ನೂ ಕೆಲವೇ ತಿಂಗಳು ಸೇವೆ ಬಾಕಿ ಇದ್ದ ನಬೀ ರಸುಲ್ಲಾ ಕೆ. ಅವಟಿ ಅವರು ಕರ್ತವ್ಯದಲ್ಲಿ ಇದ್ದಾಗಲೇ ಕೂಟದ ಕಾರ್ಯಕರ್ತರ ಕಲ್ಲುಗಳಿಗೆ ಬಲಿಯಾದರು. ಹಲವು ಕಡೆಗಳಲ್ಲಿ ಸಾರಿಗೆ ನಿಗಮದ ಬಸ್‍ಗಳಿಗೆ ಕಲ್ಲು ತೂರಾಡಿ ಸಂಸ್ಥೆಗೆ ನಷ್ಟ ಮಾಡಲಾಗಿದ್ದು, ಈ ಎಲ್ಲ ಗುಂಡಾಗಿರಿಗಳನ್ನು ನಾವು ನೇರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಈಗ ಹೈಕೋರ್ಟ್ ಆದೇಶದಂತೆ ಕೂಟದ ನಾಯಕತ್ವವು ಮುಷ್ಕರವನ್ನು ವಾಪಸ್ ತೆಗೆದುಕೊಂಡಿದೆ. ಆಡಳಿತ ವರ್ಗ ಇದು ತನ್ನ ಜಯ ಎಂದು ತಿಳಿದುಕೊಳ್ಳಬಾರದು. ಅಲ್ಲದೆ, ಆಡಳಿತ ವರ್ಗ ಏನು ಮಾಡಿದರೂ ಕಾರ್ಮಿಕರು ಅದು ತಮ್ಮ ಕರ್ಮ ಎಂದು ಸುಮ್ಮನೆ ಕುಳಿತುಕೊಳ್ಳುತ್ತಾರೆ ಎಂಬ ಮನಸ್ಥಿತಿಯಲ್ಲಿ ಇರಬಾರದು ಎಂದು ಅನಂತಸುಬ್ಬರಾವ್ ಅವರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X