Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಜ್ಜನಿಗಾಗಿ ಟ್ವಿಟರ್‌ ನಲ್ಲಿ ಆಕ್ಸಿಜನ್...

ಅಜ್ಜನಿಗಾಗಿ ಟ್ವಿಟರ್‌ ನಲ್ಲಿ ಆಕ್ಸಿಜನ್ ಕೋರಿದ್ದ ಯುವಕನ ವಿರುದ್ಧ ಉತ್ತರಪ್ರದೇಶ ಪೊಲೀಸರಿಂದ ಎಫ್‍ಐಆರ್

ವಾರ್ತಾಭಾರತಿವಾರ್ತಾಭಾರತಿ28 April 2021 12:55 PM IST
share
ಅಜ್ಜನಿಗಾಗಿ ಟ್ವಿಟರ್‌ ನಲ್ಲಿ ಆಕ್ಸಿಜನ್ ಕೋರಿದ್ದ ಯುವಕನ ವಿರುದ್ಧ ಉತ್ತರಪ್ರದೇಶ ಪೊಲೀಸರಿಂದ ಎಫ್‍ಐಆರ್

ಲಕ್ನೋ: ತನ್ನ ಅಜ್ಜನಿಗೆ ಆಕ್ಸಿಜನ್ ಬೇಕೆಂದು ಟ್ವಿಟ್ಟರ್ ಬಳಸಿ ಅಪೀಲು ಮಾಡಿದ ಯುವಕನೊಬ್ಬನ ವಿರುದ್ಧ ಉತ್ತರ ಪ್ರದೇಶದ ಅಮೇಠಿಯಲ್ಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಯುವಕ ಶಶಾಂಕ್ ಯಾದವ್ ತನ್ನ ಟ್ವೀಟ್‍ ನಲ್ಲಿ ತನ್ನ ಅಜ್ಜನಿಗೆ ಕೋವಿಡ್ ಸೋಂಕು ಇದೆಯೇ ಎಂದು ನಮೂದಿಸಿರಲಿಲ್ಲ. ಆದರೆ ಆತ ಭಯ ಮತ್ತು ಆತಂಕ ಸೃಷ್ಟಿಸುವ ಉದ್ದೇಶದಿಂದ ವದಂತಿ ಹರಡಿದ್ದಾನೆಂದು ಆರೋಪಿಸಿ ಪೊಲೀಸರು ಆತನ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ ಎಂದು 'thewire' ವರದಿ ಮಾಡಿದೆ.

ಶಶಾಂಕ್ ಆರಂಭದಲ್ಲಿ ಟ್ವೀಟ್ ಮೂಲಕ ತುರ್ತು ಸಂದೇಶ ಕಳುಹಿಸಿದ್ದನಲ್ಲದೆ ನಟ ಸೋನು ಸೂದ್ ಅವರನ್ನೂ ಟ್ಯಾಗ್ ಮಾಡಿದ್ದ. ಆತನ ಸ್ನೇಹಿತ ಅಂಕಿತ್ ಕೂಡ ಇದೇ ಪೋಸ್ಟ್ ಶೇರ್ ಮಾಡಿ ʼದಿ ವೈರ್ʼ ಪತ್ರಕರ್ತೆ ಅರ್ಫಾ ಖನೂಮ್ ಶೆರ್ವಾನಿ ಅವರಿಂದ ಸಹಾಯ ಕೋರಿದ್ದ.

ಕೆಲ ಗಂಟೆಗಳ ನಂತರ ಆಕೆ ಕೂಡ ಶಶಾಂಕ್ ಅಜ್ಜನಿಗೆ ಸಹಾಯ ಕೋರಿ ಒಂದು ಟ್ವೀಟ್ ಪೋಸ್ಟ್ ಮಾಡಿದ್ದರು. ಆದರೆ ಯಾವ ಟ್ವೀಟ್ ನಲ್ಲೂ ಕೋವಿಡ್ ಉಲ್ಲೇಖವಿರಲಿಲ್ಲ. ಶೆರ್ವಾನಿ ಅವರು ಕೇಂದ್ರ ಸಚಿವೆ ಹಾಗೂ ಅಮೇಠಿ ಸಂಸದೆ  ಸ್ಮೃತಿ ಇರಾನಿ ಅವರನ್ನೂ ಟ್ಯಾಗ್ ಮಾಡಿ ಸಹಾಯ ಕೋರಿದ್ದರು.

ಸ್ವಲ್ಪ ನಿಮಿಷಗಳ ನಂತರ ಪ್ರತಿಕ್ರಿಯಿಸಿದ್ದ ಸಚಿವೆ ತಾವು ಯಾದವ್ ಗೆ ಕರೆ ಮಾಡಲು ಹಲವಾರು ಬಾರಿ ಸಂಪರ್ಕಿಸಿದ್ದರೂ ಆತನ ಫೋನ್ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಮಾಹಿತಿ ನೀಡಿದ್ದರಲ್ಲದೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಹಾಗೂ ಅಮೇಠಿ ಪೊಲೀಸರಿಗೆ  ಈ ಕುರಿತು ಪರಿಶೀಲಿಸಲು ಸೂಚಿಸಿದ್ದಾಗಿಯೂ ತಿಳಿಸಿದ್ದರು.

ಆದರೆ ಅಷ್ಟು ಹೊತ್ತಿಗಾಗಿ ಶಶಾಂಕ್ ಅಜ್ಜ ಮೃತಪಟ್ಟಿದ್ದರು. ಈ ಕುರಿತು ಶೆರ್ವಾನಿಗೆ ಅಂಕಿತ್ ಮಾಹಿತಿ ನೀಡಿದ್ದು ಆಕೆ ಈ ಮಾಹಿತಿಯನ್ನು ಸಚಿವೆಗೆ ನೀಡಿದ್ದಾರೆ.

ಮಂಗಳವಾರ ಅಮೇಠಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಅವರು ಸಹಾಯ ಕೋರಿ ಅರ್ಫಾ ಶೆರ್ವಾನಿ ಮೊದಲು ಮಾಡಿದ್ದ ಟ್ವೀಟ್‍ಗೆ ಪ್ರತಿಕ್ರಿಯಿಸಿ ವೈದ್ಯಕೀಯ ವರದಿಯನ್ನು ಶೇರ್ ಮಾಡಿದ್ದರು. ಅದರಲ್ಲಿ ಶಶಾಂಕ್ ಅಜ್ಜನಿಗೆ ಕೋವಿಡ್ ಸೋಂಕು ಇರಲಿಲ್ಲ ಹಾಗೂ ಆತ ದುರ್ಗಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆಂಬ ಮಾಹಿತಿಯಿತ್ತು.

ಸಂಜೆ ಶಶಾಂಕ್ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಪೊಲೀಸರು ಆತನ 88 ವರ್ಷದ ಅಜ್ಜನಿಗೆ ಕೋವಿಡ್ ಇರಲಿಲ್ಲ ಬದಲು ಆತ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಿದರು. "ಇಂತಹ ಸಂದರ್ಭ ಈ ರೀತಿ ಸಾಮಾಜಿಕ ಜಾಲತಾಣಗಳಲ್ಲಿ  ಭಯ ಹುಟ್ಟಿಸುವ ಪೋಸ್ಟ್ ಗಳನ್ನು ಮಾಡುವುದು ಆಕ್ಷೇಪಾರ್ಹ" ಎಂದೂ ಪೊಲೀಸರು ಟ್ವೀಟ್ ಮಾಡಿದ್ದರು.

ಕೋವಿಡ್ ರೋಗಿಗಳಿಗೆ ಮಾತ್ರವಲ್ಲದೆ ಇತರ ಆರೋಗ್ಯ ಸಮಸ್ಯೆಯಿರುವವರಿಗೂ ಆಕ್ಸಿಜನ್ ಅಗತ್ಯವಿದೆ ಎಂದು ಅರಿಯಲು ಪೊಲೀಸರು  ವಿಫಲರಾಗಿದ್ದರು. ಆದರೆ ಶಶಾಂಕ್ ವಿರುದ್ಧ ಐಪಿಸಿಯ ಸೆಕ್ಷನ್ 188, 269, 505(1) ಅನ್ವಯ ಹಾಗೂ ಸಾಂಕ್ರಾಮಿಕ ಮತ್ತು ವಿಪತ್ತು ನಿರ್ವಹಣಾ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ತಪ್ಪು ಸಾಬೀತಾದಲ್ಲಿ ಆತನಿಗೆ  ಜೈಲು ಶಿಕ್ಷೆಯಾಗಬಹುದು.

ಸದ್ಯ ಈ ಕುರಿತಾದಂತೆ ಸಾಮಾಜಿಕ ಹಾಗೂ ಆರ್ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಉತ್ತರಪ್ರದೇಶ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು bar&bench ವರದಿ ಮಾಡಿದೆ. ಸಾಮಾಜಿಕ ತಾಣದಲ್ಲಿ ಆಕ್ಸಿಜನ್‌ ಸಹಾಯ ಕೇಳಿದವರ ವಿರುದ್ಧ ಉತ್ತರಪ್ರದೇಶ ಪೊಲೀಸರು ಕಾನೂನು ಕ್ರಮ ಕೈಗೊಂಡ ಕುರಿತು ಪ್ರಕರಣ ದಾಖಲಿಸಿದ್ದಾಗಿ ವರದಿ ಉಲ್ಲೇಖಿಸಿದೆ.

Called Shashank thrice .. no response on the number shared by you in your tweet. Have alerted office of @DmAmethi & @amethipolice to find and help the person in need. https://t.co/4D3Nfe2Nue

— Smriti Z Irani (@smritiirani) April 26, 2021

संकट की इस घड़ी में नागरिक एक दूसरे की मदद कर रहे हैं,जान बचाने की कोशिश कर रहे हैं। मैं भी एक ज़िम्मेदार नागरिक होने के नाते जो लोग मुझसे मदद की गुहार लगा रहे हैं, उनके संदेश ट्वीट कर रही हूँ। तथ्यों की जाँच करना पुलिस का काम है।आपकी जानकारी के लिये ये स्क्रीन शॉट लगा रही हूँ1/2 pic.twitter.com/cjkHiFSHOq

— Arfa Khanum Sherwani (@khanumarfa) April 27, 2021

तत्काल संपर्क किया तो जानकारी हुई कि इनके चचेरे भाई के नाना 88 वर्षीय थे, न उन्हें COVID था, न ऑक्सीजन की चिकित्सीय परामर्श थी। रात 8 बजे उनकी मृत्यु हार्ट अटैक से हुई। इस समय सोशल मीडिया पर इसप्रकार की समाज मे भय पैदा करने वाली पोस्ट डालना निन्दनीय ही नहीं, कानूनी अपराध भी है।

— AMETHI POLICE (@amethipolice) April 27, 2021

State of affairs in Yogi’s Ramrajya and @smritiirani constituency

Nanaji is ill, being treated.

Doc says we need oxygen, get it.

Family turns to social media for help.

Nanaji dies.

Police file criminal case against grieving family, threaten others.https://t.co/1fmqbRX9rl

— Siddharth (@svaradarajan) April 28, 2021

PIL filed by Saketh Gokhale in Allahabad HC against the State of Uttar Pradesh regarding coercive action taken against those who are appealing for oxygen on Social Media.#YogiAdityanath #AllahabadHighCourt @CMOfficeUP @SaketGokhale pic.twitter.com/yVTAseL2Z1

— Bar & Bench (@barandbench) April 28, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X