Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಅತ್ತ ಕೆಲಸವಿಲ್ಲ...ಇತ್ತ...

ಮಂಗಳೂರು: ಅತ್ತ ಕೆಲಸವಿಲ್ಲ...ಇತ್ತ ಅನ್ನವಿಲ್ಲ...ರಸ್ತೆ ಬದಿಯ ಕೊಳೆತ ಹಣ್ಣು, ತರಕಾರಿ ತಿಂದು ಬದುಕುವ ಕಾರ್ಮಿಕರು

ಕೋವಿಡ್ ಕರ್ಫ್ಯೂ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ28 April 2021 6:59 PM IST
share

ಮಂಗಳೂರು, ಎ.28: ಕೊರೋನ ಸೋಂಕು ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರ ಲಾಕ್‌ಡೌನ್-ಕರ್ಫ್ಯೂ ಘೋಷಿಸಿದ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರು ಅದೆಂತಹ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬುದಕ್ಕೆ ಮಂಗಳೂರಿನಲ್ಲಿ ಬುಧವಾರ ಕಂಡು ಬಂದ ದೃಶ್ಯ ಸಾಕ್ಷಿಯಾಗಿದೆ.

ನಗರದ ಸೆಂಟ್ರಲ್ ಮಾರ್ಕೆಟ್ ಪರಿಸರದಲ್ಲಿ ಕೇರಳ ಮೂಲದ ಕಾರ್ಮಿಕರೊಬ್ಬರು ರಸ್ತೆಬದಿಯಲ್ಲಿ ಎಸೆಯಲಾದ ಕೊಳೆತ ತರಕಾರಿ ರಾಶಿಯಿಂದ ಟೊಮಟೊ ಇತ್ಯಾದಿಯನ್ನು ಹೆಕ್ಕಿ ಶುಚಿಗೊಳಿಸಿ ಅವುಗಳನ್ನು ತಿನ್ನಲು ಮುಂದಾದರು. ಅವರಂತೆಯೇ ಇನ್ನೂ ಕೆಲವರು ತ್ಯಾಜ್ಯದ ರಾಶಿಗೆ ಕೈ ಹಾಕುತ್ತಿದ್ದುದು ಕಂಡು ಬಂತು.

‘ನಾನು ಕೇರಳಿಗ. ಪತ್ನಿ ಮಕ್ಕಳು ಊರಲ್ಲಿದ್ದಾರೆ. ಇಲ್ಲೇ ಕೆಲವು ವರ್ಷದಿಂದ ಏನಾದರೊಂದು ಕೆಲಸ ಮಾಡಿಕೊಂಡು ಬದುಕುತ್ತಿದ್ದೆ. ಇದೀಗ ಇಲ್ಲಿನ ಸರಕಾರ ಕೊರೋನ ತಡೆಯಲು ಲಾಕ್‌ಡೌನ್ ಹೇರಿದೆಯಂತೆ. ಇದರಿಂದ ನಮಗೆ ಕೆಲಸವಿಲ್ಲ, ಕೆಲಸ ಇಲ್ಲದ ಕಾರಣ ಊಟವೂ ಇಲ್ಲ. ತಿನ್ನಲಿಕ್ಕೆ ಏನೂ ಇಲ್ಲದಿದ್ದರೆ ಮತ್ತೇನು ಮಾಡುವುದು? ಹೀಗೆ ರಸ್ತೆ ಬದಿಯ ಕೊಳೆತ ಹಣ್ಣು ಹಂಪಲು, ತರಕಾರಿ ತಿಂದು ಬದುಕುವಂತಾಗಿದೆ’ ಎಂದರು.

ಕೊರೋನದಿಂದ ಯಾರೂ ಸಾಯುವುದಿಲ್ಲ, ಊಟ ಇಲ್ಲದೆ ಸಾಯುತ್ತಾರೆ. ಅದು ಸರಕಾರಕ್ಕೆ ಅರ್ಥ ಆಗಬೇಕು. ನಾವು ಕೆಲಸ ಮಾಡಿಯೇ ಬದುಕುವವರು. ಕೆಲಸ ಸಿಗದಿದ್ದರೆ ನಾವೇನು ಮಾಡಲಿ?. ಕೊಳೆತ ತರಕಾರಿ, ಹಣ್ಣು ಹಂಪಲು ತಿಂದೋ, ನೀರು ಕುಡಿದೋ ಬದುಕುವ ಸ್ಥಿತಿ ನಮ್ಮದಾಗಿದೆ. ಸರಕಾರಕ್ಕೆ ನಮ್ಮ ಪರಿಸ್ಥಿತಿ ಅರ್ಥವಾಗುವುದಿಲ್ಲ. ಇಲ್ಲಿ ನಾನು ಮಾತ್ರ ಅಲ್ಲ, ನನ್ನಂತಹ ನೂರಾರು ಮಂದಿ ಇದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ನಮ್ಮನ್ನು ಇಲ್ಲಿ ಕೇಳುವವರು ಯಾರೂ ಇಲ್ಲ. ಒಬ್ಬೊಬ್ಬರದ್ದು ಒಂದೊಂದು ಕಥೆ. ಅದನ್ನು ಕೇಳಿಸಿಕೊಳ್ಳಲು ಸರಕಾರಕ್ಕೆ ಮನಸ್ಸಿಲ್ಲ ಎಂದು ಕೇರಳದ ಈ ವ್ಯಕ್ತಿ ಅಳಲು ತೋಡಿಕೊಂಡರು.

"ಕೈ-ಕಾಲಲ್ಲಿ ಬಲವಿಲ್ಲ- ಆದರೂ ದುಡಿದು ತಿನ್ನುತ್ತಿದ್ದೆ..."
ಮೂರು ವರ್ಷದ ಹಿಂದೆ ನಡೆದ ಅಪಘಾತದಲ್ಲಿ ನನ್ನ ಕೈ ಮತ್ತು ಕಾಲಿಗೆ ಗಾಯವಾಗಿ ಬಲವಿಲ್ಲವಾಗಿದೆ. ದುಡಿದ 80 ಸಾವಿರ ರೂಪಾಯಿ ನನ್ನ ಚಿಕಿತ್ಸೆಗೆ ವ್ಯಯಿಸಿದೆ. ಬಳಿಕ ಏನಾದರು ಕೆಲಸ ಮಾಡಿ ದುಡಿದು ತಿನ್ನುತ್ತಿದ್ದೆ. ಈ ಲಾಕ್‌ಡೌನ್‌ನಿಂದಾಗಿ ಕೆಲಸ ಇಲ್ಲವಾಗಿದೆ. ಸರಕಾರ ಲಾಕ್‌ಡೌನ್ ಮಾಡಿದ್ದರಿಂದ ನಮ್ಮಂತಹವರಿಗೆ ತುಂಬಾ ಕಷ್ಟವಾಗಿದೆ. ನಮ್ಮ ನೋವನ್ನು ಯಾರಲ್ಲಿ ಹೇಳಿಕೊಳ್ಳುವುದು? ನಾನು ಮೂಲತಃ ಮೂಡುಬಿದಿರೆಯವ. ಮಂಗಳೂರಿನಲ್ಲೇ ದುಡಿದು ತಿನ್ನುತ್ತಿದ್ದೆ. ಈಗ ಅದೂ ಇಲ್ಲವಾಗಿದೆ. ಕೇರಳಕ್ಕೆ ಕೆಲಸ ಹುಡುಕಿಕೊಂಡು ಕೆಲವರು ಇಲ್ಲಿಂದ ಹೊರಡುವ ವಿಷಯ ಗೊತ್ತಾಯಿತು. ಹಾಗಾಗಿ ಬಂದರ್ ದಕ್ಕೆಗೆ ಹೋಗಿ 10 ರೂ. ಕೊಟ್ಟು ಸ್ನಾನ ಮಾಡಿ ಬಟ್ಟೆ ಒಗೆದು ಬಂದೆ. ಇನ್ನೀಗ ರೈಲು ಮೂಲಕ ಕೇರಳಕ್ಕೆ ತೆರಳಿ ಏನಾದರೊಂದು ಕೆಲಸ ಮಾಡಿ ಬದುಕುವ ನಿರ್ಧಾರ ಮಾಡಿರುವೆ’ ಎಂದು ಇನ್ನೊಬ್ಬ ಕೆಲಸಗಾರ ತನ್ನ ಸಂಕಷ್ಟವನ್ನು ಬಿಚ್ಚಿಟ್ಟರು.

ಒಟ್ಟಿನಲ್ಲಿ ‘ಕೊರೋನ-ಲಾಕ್‌ಡೌನ್-ಕರ್ಫ್ಯೂ’ ಸಂಕಷ್ಟಕ್ಕೆ ಬಡಪಾಯಿಗಳು ಸಿಲುಕುತ್ತಲೇ ಇದ್ದಾರೆ. ನಗರದಲ್ಲಿ ಇಂತಹ ನೂರಾರು ಮಂದಿ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಭರವಸೆಗಳು ಕರಗಿಹೋಗುತ್ತಿವೆ ಎಂಬ ಮಾತು ವ್ಯಕ್ತವಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X